ಯುಪಿಯ ಜೌನ್ಪುರದಲ್ಲಿ ದಾಖಲೆಯ ಕೃತ್ಯ: ಅಪ್ರಾಪ್ತ ದಲಿತ ಬಾಲಕಿಗೆ ಕಿರುಕುಳ, ಆರೋಪಿಗಳು ಅರೆಸ್ಟ್!
ಲಕ್ನೋ ಆಗಸ್ಟ್ 17: ಉತ್ತರಪ್ರದೇಶದಲ್ಲಿ ದಲಿತರ ಮೇಲಿನ ದೌರ್ಜನ್ಯ ಅತ್ಯಾಚಾರದಂತಹ ಪ್ರಕರಣಗಳು ಮುಂದುವರೆಯುತ್ತಲೇ ಇವೆ. ಕಾಮುಕರಿಗೆ ತಕ್ಕ ಪಾಠ ಕಲಿಸುವ ಪ್ರಯತ್ನದಲ್ಲಿ ಉತ್ತರ ಪ್ರದೇಶದ ಪೊಲೀಸರು ಪ್ರಕರಣವೊಂದನ್ನು ಬೇಧಿಸಿದ್ದಾರೆ.
ಆಗಸ್ಟ್ 14 ರಂದು ದಲಿತ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಅಪರಾಧದ ವಿಡಿಯೋ ಚಿತ್ರೀಕರಿಸಿದ್ದ ಆರೋಪದ ಮೇಲೆ ಆರು ಮಂದಿ ಆರೋಪಿಗಳನ್ನು ಉತ್ತರ ಪ್ರದೇಶದ ಜೌನ್ಪುರ ಪೊಲೀಸರು ಬಂಧಿಸಿದ್ದಾರೆ. ಮಚ್ಲಿಶಹರ್ ಪ್ರದೇಶದಲ್ಲಿ ಪುರುಷರ ಗುಂಪೊಂದು ಬಾಲಕಿಗೆ ಕಿರುಕುಳ ನೀಡುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಸಂತ್ರಸ್ತ ಬಾಲಕಿಯ ತಾಯಿ ಅಧಿಕೃತ ದೂರನ್ನು ದಾಖಲಿಸಿದ ನಂತರ, ಸೆಕ್ಷನ್ 147, 354 (ದೌರ್ಜನ್ಯ), 504 (ಕ್ರಿಮಿನಲ್ ಬೆದರಿಕೆ), ಭಾರತೀಯ ದಂಡ ಸಂಹಿತೆಯ 506, SC/ST ಕಾಯಿದೆಯ ಸೆಕ್ಷನ್ 3(2)(VA) ಮತ್ತು ಸೆಕ್ಷನ್ 67 ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.
ಎಲ್ಲಾ ಆರು ಆರೋಪಿಗಳನ್ನು ಬಂಧಿಸಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಪಾಲ್ ಶರ್ಮಾ ತಿಳಿಸಿದ್ದಾರೆ. ಪ್ರಕರಣದಲ್ಲಿ ಆರೋಪಿಗಳನ್ನು ಆಶಿಶ್, ವಿಕ್ಕಿ, ಗೋರ್, ಪ್ರಮೋದ್, ಪಪ್ಪು ಮತ್ತು ಶೇಷಮಣಿ ಎಂದು ಹೆಸರಿಸಲಾಗಿದೆ.
ಏನಿದು ಪ್ರಕರಣ?
ಆರು ಹುಡುಗರು ತನ್ನ ಮನೆಗೆ ನುಗ್ಗಿ ಜೌನ್ಪುರದ ಮಚ್ಲಿಶಹರ್ ಪ್ರದೇಶದಿಂದ ತನ್ನನ್ನು ಅಪಹರಿಸಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ತನ್ನನ್ನು ದೂರದ ಸ್ಥಳಕ್ಕೆ ಕರೆದೊಯ್ದು ಪುರುಷರ ಗುಂಪು ಕಿರುಕುಳ ನೀಡಿತು ಎಂದು ಆರೋಪಿಸಿದ್ದಾರೆ. ಸಂತ್ರಸ್ತೆ ಹತ್ತಿರದ ಗ್ರಾಮಸ್ಥರಿಂದ ಸಹಾಯಕ್ಕಾಗಿ ಕೂಗಿದ ನಂತರವೇ ಆರೋಪಿಗಳು ಅಪರಾಧ ಸ್ಥಳದಿಂದ ಪರಾರಿಯಾಗಿದ್ದಾರೆಂದು ತಿಳೀದು ಬಂದಿದೆ.
ಈ ಘಟನೆ ಮೂರು ದಿನಗಳ ಹಿಂದೆ ಅಂದರೆ ಆಗಸ್ಟ್ 14 ರಂದು ಸಂಜೆ ನಡೆದಿದೆ ಎನ್ನಲಾಗಿದೆ. ಆರೋಪಿಗಳ ಬೆದರಿಕೆಗೆ ಹೆದರಿ ಕುಟುಂಬ ಸದಸ್ಯರು ಘಟನೆಯನ್ನು ಮುಚ್ಚಿಟ್ಟಿದ್ದರು. ಆದರೆ ಆಗಸ್ಟ್ 16 ರಂದು ಬೆಳಿಗ್ಗೆ, ಬಾಲಕಿಯ ಕಿರುಕುಳದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಸಂತ್ರಸ್ತೆಯ ತಾಯಿ ಅಧಿಕಾರಿಗಳ ಬಳಿ ಹೋಗಿ ದೂರು ದಾಖಲಿಸಿದ್ದಾರೆ.
ಆಜ್ ತಕ್ ಜೊತೆ ಮಾತನಾಡಿದ ಸಂತ್ರಸ್ತೆ, ಅಧಿಕಾರಿಗಳ ಕೆಲಸದ ವೇಗದಿಂದ ತನಗೆ ಅತೃಪ್ತಿ ಇದೆ ಮತ್ತು ತನಗೆ ತ್ವರಿತ ನ್ಯಾಯ ಬೇಕು ಎಂದು ಹೇಳಿದರು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಸಂತ್ರಸ್ತೆಯ ತಾಯಿಯ ದೂರಿನ ಮೇರೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಘಟನೆಯ ನಂತರ ಆರೋಪಿಗಳು ತನಗೆ ಮತ್ತು ತನ್ನ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದಾರೆ. ಆದರೂ ಅವರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಸಂತ್ರಸ್ತೆ ಹೇಳಿದ್ದಾರೆ.
ಯುಪಿ ಅತ್ಯಾಚಾರ ಪ್ರಕರಣ
ಈ ಹಿಂದೆ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಇಬ್ಬರು ದಲಿತ ಅಪ್ರಾಪ್ತ ಸಹೋದರಿಯರು ಮರದ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ್ದರು. ಘಟನೆಯಲ್ಲಿ ಜುನೈದ್, ಸೊಹೈಲ್, ಹಫೀಜುಲ್, ಕರಿಮುದ್ದೀನ್ ಮತ್ತು ಆರೀಫ್ ಆರೋಪಿಗಳಾಗಿದ್ದರು. ಘಟನೆಗೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಯಿತು.
ಹುಡುಗಿಯರನ್ನು ಕತ್ತು ಹಿಸುಕಿ ಕೊಂದು ನಂತರ ನೇಣು ಹಾಕಿ ಕ್ರೂರವಾಗಿ ಹತ್ಯೆ ಮಾಡಲಾಗಿತ್ತು. ಈ ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಮುಂದಿನ ಪೀಳಿಗೆಯು ಸಹ ನಡುಗುವಂಥ ಕ್ರಮವನ್ನು ಸರ್ಕಾರ ತೆಗೆದುಕೊಳ್ಳುತ್ತದೆ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರು ಹೇಳಿದರು. ಆದರೆ ಈವರೆಗೂ ಅತ್ಯಾಚಾರ, ದೌರ್ಜನ್ಯ, ಕಿರುಕುಳದಂತಹ ಪ್ರಕರಣಗಳು ನಿಂತಿಲ್ಲ.
-
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral












Click it and Unblock the Notifications