ನೀರವ್ ಮೋದಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಿದ ಇಂಟರ್ಪೋಲ್
ನವದೆಹಲಿ, ಜುಲೈ 2: ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13 ಸಾವಿರಕ್ಕೂ ಅಧಿಕ ಕೋಟಿ ರೂಪಾಯಿ ಪಂಗನಾಮ ಹಾಕಿ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ವಜ್ರದ ಉದ್ಯಮಿ ನೀರವ್ ಮೋದಿ ವಿರುದ್ಧ 'ಇಂಟರ್ ಪೋಲ್' ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿದೆ.
ಸಿಬಿಐ ನೀಡಿದ ದಾಖಲೆಗಳಿಗೆ ಇಂಟರ್ ಪೋಲ್ ತೃಪ್ತಿ ವ್ಯಕ್ತಪಡಿಸಿದ್ದು ನೀರವ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಹೊರಡಿಸಿದೆ.
ಮುಂಬೈ ವಿಶೇಷ ನ್ಯಾಯಾಲಯ ನೀರವ್ ಮೋದಿ ವಿರುದ್ಧ ಹೊರಡಿಸಿರುವ ಜಾಮೀನು ರಹಿತ ವಾರಂಟ್, ಪ್ರಕರಣದಲ್ಲಿ ಸಲ್ಲಿಸಲಾಗಿರುವ ಚಾರ್ಜ್ ಶೀಟ್ ದಾಖಲೆಗಳನ್ನು ಸಿಬಿಐ ಇಂಟರ್ ಪೋಲ್ ಗೆ ಸಲ್ಲಿಸಿತ್ತು. ಈ ದಾಖಲೆಗಳನ್ನು ಇಂಟರ್ ಪೋಲ್ ಪರಿಶೀಲನೆ ನಡೆಸಿ ರೆಡ್ ಕಾರ್ನರ್ ನೋಟಿಸ್ ಹೊರಡಿಸಿದೆ.

ನೀರವ್ ಮೋದಿಯವರ ಭಾರತೀಯ ಪಾಸ್ಪೋರ್ಟ್ ರದ್ದುಗೊಳಿಸಲಾಗಿದೆ. ಹೀಗಿದ್ದೂ ಅವರು ಬೇರೆ ಬೇರೆ ದೇಶಗಳಿಗೆ ಪ್ರಯಾಣಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇದೀಗ ರೆಡ್ ಕಾರ್ನರ್ ನೋಟಿಸ್ ಮೂಲಕ ನೀರವ್ ಮೋದಿಯನ್ನು ವಶಕ್ಕೆ ಪಡೆಯಲು ಸಿಬಿಐ ಮುಂದಾಗಿದೆ.
ರೆಡ್ ಕಾರ್ನರ್ ನೋಟಿಸ್ ನಲ್ಲಿಏನಿದೆ?
1971ರ ಫೆಬ್ರವರಿ 2ರಂದು ಜನಿಸಿದ 47 ವರ್ಷದ ನೀರವ್ ಮೋದಿ ಕಂಡಲ್ಲಿ, ಅಥವಾ ಅವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಸ್ಥಳೀಯ ಪೊಲೀಸರಿಗೆ ಅಥವಾ ರಾಷ್ಟ್ರೀಯ ಪೊಲೀಸರಿಗೆ ಮಾಹಿತಿ ನೀಡಿ ಎಂದು ಇಂಟರ್ ಪೋಲ್ ಕೋರಿಕೊಂಡಿದೆ. ಇಂಟರ್ ಪೋಲ್ ಅಂದರೆ ಅಂತರ್ ರಾಷ್ಟ್ರೀಯ ಪೊಲೀಸರಾಗಿದ್ದು, ಎಲ್ಲಾ ದೇಶಗಳಿಗೂ ಈ ನೋಟಿಸ್ ತಲುಪಲಿದೆ.
ನೀರವ್ ಮೋದಿ ಯಾವುದೇ ದೇಶದಲ್ಲಿ ಅಡಗಿದ್ದರೂ ಅವರನ್ನು ಬಂಧಿಸಬಹುದಾಗಿದೆ.
ಹಿಂದಿ, ಗುಜರಾತಿ ಮತ್ತು ಇಂಗ್ಲೀಷ್ ಭಾಷೆ ಬಲ್ಲ ನೀರವ್ ಮೋದಿ ಮೇಲೆ ಲೇವಾದೇವಿ ಆರೋಪ ಇದೆ. ಮುಂಬೈನಲ್ಲಿ ಜನಿಸಿದ ಆರೋಪಿಯ ಹೆಸರು 'ನೀರವ್ ದೀಪಕ್ ಮೋದಿ' ಎಂದು ರೆಡ್ ಕಾರ್ನರ್ ನೋಟಿಸ್ ನಲ್ಲಿ ಹೇಳಲಾಗಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications