ರೀಲ್ ನಿಂದ ರಿಯಲ್ ಮಹಾಭಾರತಕ್ಕೆ ರೂಪಾ ಗಂಗೂಲಿ
ಕೋಲ್ಕತ್ತಾ, ಜ.7: ಬಿಜೆಪಿ ಮತ್ತೊಬ್ಬ ಸೆಲೆಬ್ರಿಟಿಯನ್ನು ಪಕ್ಷಕ್ಕೆ ಸೇರಿಸಿಕೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಬೆಳೆವಣಿಗೆಗಾಗಿ ಅಮಿತ್ ಶಾ ಅವರು ಕಾರ್ಯತಂತ್ರ ರೂಪಿಸಿದ್ದು ಅದರಂತೆ ವಿವಿಧ ಕ್ಷೇತ್ರದ ಗಣ್ಯರನ್ನು ಬಿಜೆಪಿ ತನ್ನ ತೆಕ್ಕೆಗೆ ಸೆಳೆದುಕೊಳ್ಳುತ್ತಿದೆ.
80 ರ ದಶಕದಲ್ಲಿ ಪ್ರಸಾರವಾದ ಮಹಾಭಾರತ ಧಾರಾವಾಹಿಯಲಿ ದ್ರೌಪದಿ ಪಾತ್ರ ನಿರ್ವಹಿಸಿದ್ದ ರೂಪಾ ಗಂಗೂಲಿ ಅವರು ಬೆಂಗಾಳಿ ಮೂಲದ ನಟಿ ಹಾಗೂ ಗಾಯಕಿ. ಜ.7ರಂದು ಹೌರಾದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕೇಂದ್ರ ಹಣಕಾಸು ಮಂತ್ರಿ ಅರುಣ್ ಜೇಟ್ಲಿ ಸಮಕ್ಷಮದಲ್ಲಿ ಬಿಜೆಪಿಗೆ ಸೇರಿದ್ದಾರೆ.
ಮಹಾಭಾರತ ಅಲ್ಲದೆ ಗೌತಮ್ ಘೋಷ್ ಅವರ 'ಪದ್ಮ ನದಿರ್ ಮಾಜ್ ಹಿ', ಅಪರ್ಣಾ ಸೇನ್ ಅವರ 'ಯುಗಾಂತ', ರಿತುಪರ್ಣ ಘೋಷ್ ಅವರ 'ಅಂತರ್ ಮಹಲ್' ಸಿನಿಮಾಗಳಲ್ಲಿ ಉತ್ತಮ ಅಭಿನಯ ನೀಡಿದ್ದರು. [ಮಹಾಭಾರತ' ಸೀರಿಯಲ್ ಖ್ಯಾತಿ ರವಿ ಛೋಪ್ರಾ ಇನ್ನಿಲ್ಲ]

ಪಶ್ಚಿಮ ಬಂಗಾಳದ ಜನಪ್ರಿಯ ಗಾಯಕ ಬಾಬುಲ್ ಸುಪ್ರಿಯೋ ಅವರನ್ನು ಬಿಜೆಪಿ ತನ್ನ ತೆಕ್ಕೆಗೆ ಹಾಕಿಕೊಂಡಿದ್ದು, ಈಗ ಅವರು ಸಂಸದ ಹಾಗೂ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಪಶ್ಚಿಮ ಬಂಗಾಳದ ಬಿಜೆಪಿಗೆ ಗ್ಲಾಮರ್ ಟಚ್ ನೀಡಲು ಬಿಜೆಪಿ ಈಗ ರೂಪಾ ಗಂಗೂಲಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿದೆ.
Actress Roopa Ganguly of 'Draupadi' fame joins BJP http://t.co/aW3PZgqLj7 pic.twitter.com/KIJnWCbcbL
— NDTV (@ndtv) January 7, 2015 ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಟಾಲಿವುಡ್(ಬೆಂಗಾಳಿ ಚಿತ್ರರಂಗ) ದ ಅನೇಕ ನಟ, ನಟಿಯರು ಸೇರ್ಪಡೆಗೊಂಡ ನಂತರ ಎಚ್ಚೆತ್ತುಕೊಂಡ ಬಿಜೆಪಿ ಈಗ ತಾನು ಅದೇ ಮಾರ್ಗವನ್ನು ಅನುಸರಿಸುತ್ತಿದೆ. ದಕ್ಷಿಣ ಭಾರತದಲ್ಲೂ ಇದೇ ರೀತಿ ಕಾರ್ಯತಂತ್ರವನ್ನು ಬಿಜೆಪಿ ಅಧ್ಯಕ್ಶ ಅಮಿತ್ ಶಾ ಅವರು ಕೈಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications