ಜುಲೈ 11 ರ ತನಕ ತಮಿಳುನಾಡಿಗೆ ಕಾವೇರಿ ಹರಿಸಿ, ಕರ್ನಾಟಕಕ್ಕೆ ಸೂಚನೆ
ಕಾವೇರಿ ನೀರು ಹಂಚಿಕೆ ನ್ಯಾಯಾಧೀಕರಣದ ತೀರ್ಪಿನ ವಿರುದ್ಧ ಕರ್ನಾಟಕ ಮತ್ತು ತಮಿಳುನಾಡು ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿ, ಜುಲೈ 11ಕ್ಕೆ ವಿಚಾರಣೆ ಮುಂದೂಡಿದೆ.
ಕಾವೇರಿ ನೀರು ಹಂಚಿಕೆ ನ್ಯಾಯಾಧೀಕರಣದ ತೀರ್ಪಿನ ವಿರುದ್ಧ ಕರ್ನಾಟಕ ಮತ್ತು ತಮಿಳುನಾಡು ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಮಂಗಳವಾರ(ಮಾರ್ಚ್ 21) ಸೂಚಿಸಿದೆ.
ಮುಂದಿನ ವಿಚಾರಣೆಯನ್ನು ಜುಲೈ 11ಕ್ಕೆ ತ್ರಿಸದಸ್ಯ ಪೀಠ ಮುಂದೂಡಿದೆ. ಮುಂದಿನ ವಿಚಾರಣೆ ತನಕ ಪ್ರತಿನಿತ್ಯ ತಮಿಳುನಾಡಿಗೆ 2,000 ಕ್ಯೂಸೆಕ್ಸ್ ನೀರು ಹರಿಸುವುದು ಕರ್ನಾಟಕಕ್ಕೆ ಅನಿವಾರ್ಯವಾಗಿದೆ.[ಟೈಮ್ ಲೈನ್ : ಸಂವಿಧಾನ ಬಿಕ್ಕಟ್ಟಿನ ಹಾದಿ ಹಿಡಿದ ಕಾವೇರಿ ವಿವಾದ]

1892ರಲ್ಲಿ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಆಗಿದ್ದ ಒಪ್ಪಂದ ಸಾಧುವೇ? ಅಂದು ಬಳಸಿದ ಮಾನದಂಡ ಯಾವುದು? ಇತ್ತೀಚಿನ ಅಂಕಿ ಅಂಶಗಳ ಬಳಸಿ ಸಮೀಕ್ಷೆ ನಡೆಸುತ್ತಿಲ್ಲ ಏಕೆ? ಎಂಬ ಪ್ರಶ್ನೆಗಳನ್ನು ಕರ್ನಾಟಕದ ಪರ ವಕೀಲ ಫಾಲಿ ನಾರಿಮನ್ ಕೇಳಿದರು.
ಫೆಬ್ರವರಿ 7 ರ ತನಕ ಪ್ರತಿನಿತ್ಯ 2 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಲಾಗಿತ್ತು. ಇದರಿಂದ ಕರ್ನಾಟಕಕ್ಕೆ ನಿರಾಳತೆ ಸಿಕ್ಕಿದ್ದು, ಹೆಚ್ಚಿನ ಪ್ರಮಾಣದ ನೀರು ಹರಿಸುವ ಸಂಕಟದಿಂದ ಸದ್ಯಕ್ಕೆ ಬಚಾವಾಗಿತ್ತು. ಅಲ್ಲಿ ತನಕ ಮಧ್ಯಂತರ ಆದೇಶ ಜಾರಿಯಲ್ಲಿರಲಿದ್ದು,
ಪ್ರತಿನಿತ್ಯ ತಮಿಳುನಾಡಿಗೆ 2,000 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ನ್ಯಾ. ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಸೂಚಿಸಲಾಗಿತ್ತು.
ಕಾವೇರಿ ನೀರಿನಲ್ಲಿ ಬಳಸಲು ಲಭ್ಯವಿರುವ 740 ಟಿಎಂಸಿ ನೀರಿನಲ್ಲಿ ಕರ್ನಾಟಕ 270 ಟಿಎಂಸಿ, ತಮಿಳುನಾಡು 419, ಕೇರಳ 30 ಮತ್ತು ಪಾಂಡಿಚೇರಿ 7 ಟಿಎಂಸಿ ನೀರಿಗೆ ಅರ್ಹ ಎಂದು ನ್ಯಾಯಾಧೀಕರಣ ತೀರ್ಪಲ್ಲಿ ಹೇಳಿತ್ತು.
007ರ ಫೆಬ್ರವರಿ 5ರಂದು ಕಾವೇರಿ ನೀರು ನ್ಯಾಯಾಧೀಕರಣ ನೀಡಿದ್ದ ತೀರ್ಪನ್ನು ಕರ್ನಾಟಕ ಮತ್ತು ತಮಿಳುನಾಡುಗಳೆರಡೂ ಪ್ರಶ್ನಿಸಿದ್ದವು. ಆದರೆ, ಈ ತೀರ್ಪು ಸುಪ್ರೀಂಕೋರ್ಟ್ ನೀಡಿದ ತೀರ್ಪಿಗೆ ಸಮಾನ ಎಂದು ಕೇಂದ್ರ ಸರಕಾರ ತಗಾದೆ ಎತ್ತಿತ್ತು.
-
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ












Click it and Unblock the Notifications