ರಿಲಯನ್ಸ್ ಮಹಾರಾಜ ಅಂಬಾನಿಯ 9 ವರ್ಷದ ಸಂಬಳ ಬಹಿರಂಗ!
ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಕೇಶ್ ಅಂಬಾನಿ ಕಳೆದ ಕೆಲವು ವರ್ಷಗಳಿಂದ ವೇತನ ಹೆಚ್ಚಳ ಪಡೆಯದೇ ಕೆಲಸ ಮಾಡುತ್ತಿದ್ದಾರೆ. ಮುಕೇಶ್ ವಾರ್ಷಿಕ ಹದಿನೈದು ಕೋಟಿ ರೂಪಾಯಿ ಸಂಬಳ ಪಡೆಯುತ್ತಿದ್ದಾರೆ.
ಮುಂಬೈ, ಜೂ 28: ದೇಶದ ಆಗರ್ಭ ಶ್ರೀಮಂತರಲ್ಲೊಬ್ಬರಾದ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಕೇಶ್ ಅಂಬಾನಿ ಕಳೆದ ಕೆಲವು ವರ್ಷಗಳಿಂದ ವೇತನ ಹೆಚ್ಚಳ ಪಡೆಯದೇ ಕೆಲಸ ಮಾಡುತ್ತಿದ್ದಾರೆ.
ಇಕಾನಮಿಕ್ ಟೈಮ್ಸ್ ವರದಿಯ ಪ್ರಕಾರ 2008-09ರಲ್ಲಿ ಮುಕೇಶ್ ಅಂಬಾನಿಯ ವಾರ್ಷಿಕ ಸಂಬಳ ಎಷ್ಟಿತ್ತೋ, ಅದೇ ಸಂಬಳವನ್ನು 2017-18ರ ಮೊದಲ ತ್ರೈಮಾಸಿಕದವರೆಗೂ ಮುಂದುವರಿಸಿಕೊಂಡು ಹೋಗಿದ್ದಾರೆ.

ರಿಲಯನ್ಸ್ ಸಂಸ್ಥೆಯ ಇತರ ಆಡಳಿತ ಮಂಡಳಿಯ ಸದಸ್ಯರಿಗಿರುವ ಷೇರು ಸೌಲಭ್ಯ (stock option) ಕೂಡಾ ಪಡೆಯದೇ ಮುಕೇಶ್, ವಾರ್ಷಿಕ ಹದಿನೈದು ಕೋಟಿ ರೂಪಾಯಿ ಸಂಬಳಕ್ಕೆ ತನ್ನದೇ ಕಂಪೆನಿಗೆ ದುಡಿಯುತ್ತಿದ್ದಾರೆ.
ಕಳೆದ ಒಂಬತ್ತು ವರ್ಷಗಳಿಂದ ಅಂಬಾನಿ ಸಂಬಳದಲ್ಲಿ ಬದಲಾವಣೆಯಾಗಿಲ್ಲ. ಆಡಳಿತ ಮಂಡಳಿ ಸಭೆಯಲ್ಲಿ ಮುಕೇಶ್ ಅಂಬಾನಿ ಸಂಬಳ ಮತ್ತು ಇತರ ಭತ್ಯೆಗಳು ವಾರ್ಷಿಕ 38.75 ಕೋಟಿಗೆ ಅನುಮೋದನೆ ಪಡೆಯಲಾಗಿದ್ದರೂ ಮುಕೇಶ್ ಪಡೆಯುತ್ತಿರುವುದು ಹದಿನೈದು ಕೋಟಿ ಮಾತ್ರ...
ದೇಶದ ಪ್ರಮುಖ ಕಂಪೆನಿಗಳ ಸಿಇಓ ಮತ್ತು ಎಂಡಿಗಳು ಪಡೆಯುವ ಭಾರೀ ಸಂಬಳದ ಬಗ್ಗೆ 2009ರಲ್ಲಿ ಚರ್ಚೆ ನಡೆಯುತ್ತಿದ್ದಾಗ, ಹದಿನೈದು ಕೋಟಿಗಿಂತ ಹೆಚ್ಚು ಸಂಬಳ ತೆಗೆದುಕೊಳ್ಳುವುದಿಲ್ಲ ಎನ್ನುವ ನಿರ್ಧಾರಕ್ಕೆ ಮುಕೇಶ್ ಅಂಬಾನಿ ಬಂದಿದ್ದರಂತೆ.
ರಿಲಯನ್ಸ್ ಜಿಯೋ ಮೂಲಕ ಭಾರತದ ಮೊಬೈಲ್ ಮಾರುಕಟ್ಟೆ ಪ್ರವೇಶಿಸಿರುವ ಮುಕೇಶ್ ಅಂಬಾನಿ ಸಂಸ್ಥೆ, ಅತ್ಯಂತ ಕಡಿಮೆ ಅವಧಿಯಲ್ಲಿ ಊಹಿಸಲೂ ಅಸಾಧ್ಯವಾದ ರೀತಿಯಲ್ಲಿ ಗ್ರಾಹಕರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications