ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಧಾರ್ಮಿಕ, ಆಧಾತ್ಮ ಮುಖಂಡರ ಭೀತಿ!
ಭೋಪಾಲ್,ನವೆಂಬರ್ 04 : ಮಧ್ಯಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಕಣಕ್ಕಿಳಿಯುತ್ತಿರುವವರ ಹವಾ ಸ್ವಲ್ಪ ಜೋರಾಗಿದೆ. ಭಾರತೀಯ ಜನತಾ ಪಕ್ಷ(ಬಿಜೆಪಿ)ಕ್ಕೆ ಧಾರ್ಮಿಕ, ಆಧಾತ್ಮ ಮುಖಂಡರ ಭೀತಿ ಎದುರಾಗಿದೆ.
ನವೆಂಬರ್ 28,2018ರಂದು ನಡೆಯಲಿರುವ ಚುನಾವಣೆಯ ಕಣದಲ್ಲಿ ಈಗಾಗಲೇ ಅನೇಕ ಹಿಂದೂ ಪರ ಮುಖಂಡರು, ಬಾಬಾಗಳು ಸ್ಪರ್ಧಿಸುತ್ತಿದ್ದಾರೆ. ಹಿಂದೂ ಮತಗಳನ್ನು ನೆಚ್ಚಿಕೊಂಡಿರುವ ಬಿಜೆಪಿಗೆ ಇದರಿಂದ ಕೊಂಚ ಹಿನ್ನಡೆಯುಂಟಾಗುವ ನಿರೀಕ್ಷೆಯಿದೆ.
ಶಿವರಾಜ್ ಸಿಂಗ್ ಅವರ ಸರ್ಕಾರದ ವಿರುದ್ಧ ಧಾರ್ಮಿಕ ಮುಖಂಡರು ತಿರುಗಿ ಬಿದ್ದಿದ್ದು, ನೇರವಾಗಿ ಕಣಕ್ಕಿಳಿದು ಹೋರಾಟಕ್ಕೆ ಮುಂದಾಗಿದ್ದಾರೆ. ಇತ್ತೀಚೆಗೆ ಕಂಪ್ಯೂಟರ್ ಬಾಬಾ, ಪಂಡೋಖರ್ ಸರ್ಕಾರ್ ಹಾಗೂ ಬೆಂಬಲಿಗರು, ಸಂತ ಗುರುಶರಣ್ ಶರ್ಮ ಅವರು ತಮ್ಮ ಬೆಂಬಲಿತ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ.

ಸಂಜಿ ವಿರಾಸತ್ ಪಾರ್ಟಿ ಹೆಸರಿನಲ್ಲಿ 50 ಅಭ್ಯರ್ಥಿಗಳಿಗೆ ಹಿಂದೂ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಶರ್ಮ, ಎಲ್ಲಾ ಜಾತಿ, ಮತ, ಪಂಥಗಳ ಆರ್ಥಿಕ ಸ್ತರದ ಅನುಗುಣವಾಗಿ ಮೀಸಲಾತಿ ಸಿಗಬೇಕು ಎಂಬ ಕಾರಣಕ್ಕೆ ಚುನಾವಣೆ ಕಣಕ್ಕಿಳಿದಿದ್ದೇವೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಬಿಜೆಪಿ ಸರ್ಕಾರವು ಭಾರತೀಯ ಸಂಸ್ಕೃತಿ, ಗೋ ರಕ್ಷಣೆಯಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು.
ಸಮಾಜದಲ್ಲಿ ಅಸಮತೋಲನ ಉಂಟಾದಾಗ, ಜನ ಸಾಮಾನ್ಯರಿಗೆ ಅನ್ಯಾಯವಾದಾಗ ಸಾಧು ಸಂತರು ಮುಖ್ಯ ವಾಹಿನಿಗೆ ಬಂದು ಸರಿಪಡಿಸುವುದನ್ನು ಇತಿಹಾಸದಿಂದ ಕಾಣಬಹುದು.
ಬಿಜೆಪಿ ವಿರುದ್ಧ ಸಾಧು ಸಂತರನ್ನು ಒಗ್ಗೂಡಿಸುವ ಕಾರ್ಯ ಸಾಂಗವಾಗಿ ನಡೆದಿದೆ. ಕಂಪ್ಯೂಟರ್ ಬಾಬಾ, ಪ್ರವಾಚಕ ದೇವಕಿ ನಂದನ್ ಠಾಕೂರ್ ಮುಂತಾದವರು ಮುಂದಾಳತ್ವ ವಹಿಸಿಕೊಂಡಿದ್ದಾರೆ. ಆದರೆ, ವೈಷ್ಣವ ಸಂತರು, ದಿಗಂಬರ್ ಅಖಾರ ನಡುವಿನ ವೈಮನಸ್ಯದಿಂದ ಹಿಂದೂ ಮುಖಂಡರ ತಂತ್ರ ಯಶಸ್ವಿಯಾಗಿಲ್ಲ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications