ವಾಲ್ಮೀಕಿ ವಿರುದ್ಧ ಅವಹೇಳನ: ರಾಖಿ ಸಾವಂತ್ ಗೆ ನಿರೀಕ್ಷಣಾ ಜಾಮೀನು
ಲೂಧಿಯಾನ : ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ಮಹರ್ಷಿ ವಾಲ್ಮೀಕಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಖಿ ಸಾವಂತ್ ಅವರಿಗೆ ನಿರೀಕ್ಷಣಾ ಜಾಮೀನು ದೊರೆತಿದೆ.
ಪ್ರಕರಣದ ವಿಚಾರಣೆ ನಡೆಸುತ್ತಿರುವ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶ ಗುರುರ್ ವೀರ್ ಸಿಂಗ್ ಅವರು ಇದೇ 7ರಂದು ಕೋರ್ಟ್ಗೆ ಹಾಜರಾಗುವಂತೆ ರಾಖಿ ಸಾವಂತ್ ಅವರಿಗೆ ಸೂಚಿಸಿದ್ದಾರೆ.

ಜುಲೈ 7 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಎರಡು ಬಾರಿ ಸಮನ್ಸ್ ನೀಡಿದ್ದರೂ ರಾಖಿ ಸಾವಂತ್ ಹಾಜರಾಗಿರಲಿಲ್ಲ. ಹಾಗಾಗಿ, ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅವರ ನಿರೀಕ್ಷಣಾ ಜಾಮೀನನ್ನು ರದ್ದು ಪಡಿಸಿತ್ತು.
ಜುಲೈ 6ರಂದು ನಿರೀಕ್ಷಣಾ ಜಾಮೀನು ನೀಡಿದ ಮ್ಯಾಜಿಸ್ಟೇಟ್ ನ್ಯಾಯಾಧೀಶ ವಿಶಾವ್ ಗುಪ್ತಾ ಅವರು ಜುಲೈ 7 ರಂದು ವಿಚಾರಣೆಗೆ ಹಾಜರಾಗುವಂತೆ ಆದೇಶಿಸಿದ್ದರು. ವಾಲ್ಮೀಕಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ವಕೀಲ ನರೀಂದರ್ ದೂರು ನೀಡಿದ್ದರು.












Click it and Unblock the Notifications