ಬೋಫೋರ್ಸ್ ಹಗರಣಕ್ಕೆ ಮರುಜೀವ? ಸಿಬಿಐಗೆ ಕೆಲ ಸಂಸದರ ತಾಕೀತು?
ರಾಜೀವಾ ಗಾಂಧಿಯವರು ಪ್ರಧಾನಿಯಾಗಿದ್ದ ವೇಳೆ ನಡೆದಿದ್ದ ಬೋಫೋರ್ಸ್ ಹಗರಣದ ತನಿಖೆಯನ್ನು ಮತ್ತೆ ಆರಂಭಿಸುವಂತೆ ಸಿಬಿಐಗೆ ಸಂಸದರ ಸಲಹೆ. ಅವಶ್ಯಕತೆ ಬಿದ್ದರೆ ಸರ್ಕಾರದಿಂದ ಸುಪ್ರೀಂ ಕೋರ್ಟ್ ನಿಂದ ಅನುಮತಿ ಪಡೆಯುವಂತೆ ಸಲಹೆ.
ನವದೆಹಲಿ, ಜುಲೈ 14: ಬೋಫೋರ್ಸ್ ಹಗರಣಕ್ಕೆ ಮರು ಜೀವ ಕೊಟ್ಟು ಆ ಹಗರಣದ ಮರು ತನಿಖೆಯನ್ನು ಆರಂಭಿಸುವಂತೆ ಸಂಸದೀಯ ಸಮಿತಿಯೊಂದರ ಇಬ್ಬರು ಸದಸ್ಯರು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ತಾಕೀತು ಮಾಡಿದೆ ಎಂದು ಖಾಸಗಿ ಸುದ್ದಿ ವಾಹಿನಿಯೊಂದು ವರದಿ ಮಾಡಿದೆ.
ಈ ಹಿಂದೆ, ರಾಜೀವ್ ಗಾಂಧಿ ಅವರು ದೇಶದ ಪ್ರಧಾನಿಯಾಗಿದ್ದಾಗ ಈ ಬೋಫೋರ್ಸ್ ಹಗರಣ ನಡೆದಿರುವ ಬಗ್ಗೆ ಈಗಾಗಲೇ ಅನೇಕ ವರದಿಗಳು ಬಂದಿವೆ. ಸ್ವೀಡನ್ ನಿಂದ ಬೋಫೋರ್ಸ್ ಎಂಬ ಫಿರಂಗಿಗಳನ್ನು ಭಾರತೀಯ ಸೇನೆಗಾಗಿ ಕೊಳ್ಳುವ ವ್ಯವಹಾರದಲ್ಲಿ ದೊಡ್ಡ ಭ್ರಷ್ಟಾಚಾರವಾಗಿತ್ತೆಂಬ ಆರೋಪಗಳು ಕೇಳಿಬಂದಿದ್ದವು. ರಾಷ್ಟ್ರಮಟ್ಟದ ರಾಜಕಾರಣದಲ್ಲಿ ಆಗಿನ ಕಾಲದಲ್ಲಿ ದೊಡ್ಡ ಮಟ್ಟದ ಹಗರಣದ ಅಲೆ ಎಬ್ಬಿಸಿದ ಪ್ರಕರಣವದು.

2005ರಲ್ಲಿ ದೆಹಲಿ ನ್ಯಾಯಾಲಯವು ಆದೇಶವನ್ನು ನೀಡಿ ಬೋಫೋರ್ಸ್ ಹಗರಣದ ಬಗ್ಗೆ ಮತ್ಯಾವುದೇ ತನಿಖೆ ನಡೆಸದಂತೆ ಕಟ್ಟಾಜ್ಞೆ ವಿಧಿಸಿತ್ತು.
ಇದನ್ನು, ಶುಕ್ರವಾರ ನಡೆದ ರಕ್ಷಣಾ ಇಲಾಖೆಯ ಸಂಸದೀಯ ಸಮಿತಿಯೊಂದರ ಸಭೆ ಇತ್ತೀಚೆಗೆ ನಡೆದಿತ್ತು. ಅದರಲ್ಲಿ, ಬಿಜೆಡಿ ಸಂಸದ ಭಾರ್ತೃಹರಿ ಮೆಹತಾಬ್, ಬಿಜೆಪಿಯ ಸಂಸದ ನಿಶಿಕಾಂತ್ ದುಬೆ ಭಾಗವಹಿಸಿದ್ದರು. ಮೆಹತಾಬ್ ಈ ಸಮಿತಿಯ ಅಧ್ಯಕ್ಷರೂ ಹೌದು.
ಸಭೆಯಲ್ಲಿ ಬೋರ್ಫೋರ್ಸ್ ಹಗರಣವನ್ನು ಮತ್ತೊಮ್ಮೆ ತನಿಖೆ ನಡೆಸುವಂತೆ ಅಲ್ಲಿನ ಸದಸ್ಯರು ಸಿಬಿಐಗೆ ಶಿಫಾರಸು ಮಾಡಿದರೆಂದು ಅದೇ ಸಮಿತಿಯಲ್ಲಿದ್ದ, ಹೆಸರನ್ನೇಳಲು ಇಚ್ಛಿಸದ ಸದಸ್ಯರುಗಳು ತನಗೆ ತಿಳಿಸಿರುವುದಾಗಿ ವಾಹಿನಿಯು ವರದಿಯಲ್ಲಿ ಹೇಳಿದೆ.
2005ರಲ್ಲಿ ದೆಹಲಿ ನ್ಯಾಯಾಲಯ ನೀಡಿದ್ದ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿ, ಬೋಫೋರ್ಸ್ ಹಗರಣವನ್ನು ಮತ್ತೆ ತನಿಖೆಗೆ ಒಳಪಡಿಸಲು ಸಾಧ್ಯವಿದೆ ಎಂದು ಆ ಸಂಸದರು ಹೇಳಿದ್ದಾರೆನ್ನಲಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications