ಬೋಫೋರ್ಸ್ ಹಗರಣಕ್ಕೆ ಮರುಜೀವ? ಸಿಬಿಐಗೆ ಕೆಲ ಸಂಸದರ ತಾಕೀತು?
ರಾಜೀವಾ ಗಾಂಧಿಯವರು ಪ್ರಧಾನಿಯಾಗಿದ್ದ ವೇಳೆ ನಡೆದಿದ್ದ ಬೋಫೋರ್ಸ್ ಹಗರಣದ ತನಿಖೆಯನ್ನು ಮತ್ತೆ ಆರಂಭಿಸುವಂತೆ ಸಿಬಿಐಗೆ ಸಂಸದರ ಸಲಹೆ. ಅವಶ್ಯಕತೆ ಬಿದ್ದರೆ ಸರ್ಕಾರದಿಂದ ಸುಪ್ರೀಂ ಕೋರ್ಟ್ ನಿಂದ ಅನುಮತಿ ಪಡೆಯುವಂತೆ ಸಲಹೆ.
ನವದೆಹಲಿ, ಜುಲೈ 14: ಬೋಫೋರ್ಸ್ ಹಗರಣಕ್ಕೆ ಮರು ಜೀವ ಕೊಟ್ಟು ಆ ಹಗರಣದ ಮರು ತನಿಖೆಯನ್ನು ಆರಂಭಿಸುವಂತೆ ಸಂಸದೀಯ ಸಮಿತಿಯೊಂದರ ಇಬ್ಬರು ಸದಸ್ಯರು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ತಾಕೀತು ಮಾಡಿದೆ ಎಂದು ಖಾಸಗಿ ಸುದ್ದಿ ವಾಹಿನಿಯೊಂದು ವರದಿ ಮಾಡಿದೆ.
ಈ ಹಿಂದೆ, ರಾಜೀವ್ ಗಾಂಧಿ ಅವರು ದೇಶದ ಪ್ರಧಾನಿಯಾಗಿದ್ದಾಗ ಈ ಬೋಫೋರ್ಸ್ ಹಗರಣ ನಡೆದಿರುವ ಬಗ್ಗೆ ಈಗಾಗಲೇ ಅನೇಕ ವರದಿಗಳು ಬಂದಿವೆ. ಸ್ವೀಡನ್ ನಿಂದ ಬೋಫೋರ್ಸ್ ಎಂಬ ಫಿರಂಗಿಗಳನ್ನು ಭಾರತೀಯ ಸೇನೆಗಾಗಿ ಕೊಳ್ಳುವ ವ್ಯವಹಾರದಲ್ಲಿ ದೊಡ್ಡ ಭ್ರಷ್ಟಾಚಾರವಾಗಿತ್ತೆಂಬ ಆರೋಪಗಳು ಕೇಳಿಬಂದಿದ್ದವು. ರಾಷ್ಟ್ರಮಟ್ಟದ ರಾಜಕಾರಣದಲ್ಲಿ ಆಗಿನ ಕಾಲದಲ್ಲಿ ದೊಡ್ಡ ಮಟ್ಟದ ಹಗರಣದ ಅಲೆ ಎಬ್ಬಿಸಿದ ಪ್ರಕರಣವದು.

2005ರಲ್ಲಿ ದೆಹಲಿ ನ್ಯಾಯಾಲಯವು ಆದೇಶವನ್ನು ನೀಡಿ ಬೋಫೋರ್ಸ್ ಹಗರಣದ ಬಗ್ಗೆ ಮತ್ಯಾವುದೇ ತನಿಖೆ ನಡೆಸದಂತೆ ಕಟ್ಟಾಜ್ಞೆ ವಿಧಿಸಿತ್ತು.
ಇದನ್ನು, ಶುಕ್ರವಾರ ನಡೆದ ರಕ್ಷಣಾ ಇಲಾಖೆಯ ಸಂಸದೀಯ ಸಮಿತಿಯೊಂದರ ಸಭೆ ಇತ್ತೀಚೆಗೆ ನಡೆದಿತ್ತು. ಅದರಲ್ಲಿ, ಬಿಜೆಡಿ ಸಂಸದ ಭಾರ್ತೃಹರಿ ಮೆಹತಾಬ್, ಬಿಜೆಪಿಯ ಸಂಸದ ನಿಶಿಕಾಂತ್ ದುಬೆ ಭಾಗವಹಿಸಿದ್ದರು. ಮೆಹತಾಬ್ ಈ ಸಮಿತಿಯ ಅಧ್ಯಕ್ಷರೂ ಹೌದು.
ಸಭೆಯಲ್ಲಿ ಬೋರ್ಫೋರ್ಸ್ ಹಗರಣವನ್ನು ಮತ್ತೊಮ್ಮೆ ತನಿಖೆ ನಡೆಸುವಂತೆ ಅಲ್ಲಿನ ಸದಸ್ಯರು ಸಿಬಿಐಗೆ ಶಿಫಾರಸು ಮಾಡಿದರೆಂದು ಅದೇ ಸಮಿತಿಯಲ್ಲಿದ್ದ, ಹೆಸರನ್ನೇಳಲು ಇಚ್ಛಿಸದ ಸದಸ್ಯರುಗಳು ತನಗೆ ತಿಳಿಸಿರುವುದಾಗಿ ವಾಹಿನಿಯು ವರದಿಯಲ್ಲಿ ಹೇಳಿದೆ.
2005ರಲ್ಲಿ ದೆಹಲಿ ನ್ಯಾಯಾಲಯ ನೀಡಿದ್ದ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿ, ಬೋಫೋರ್ಸ್ ಹಗರಣವನ್ನು ಮತ್ತೆ ತನಿಖೆಗೆ ಒಳಪಡಿಸಲು ಸಾಧ್ಯವಿದೆ ಎಂದು ಆ ಸಂಸದರು ಹೇಳಿದ್ದಾರೆನ್ನಲಾಗಿದೆ.
-
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ?












Click it and Unblock the Notifications