ಚಿತ್ರಮಂದಿರಗಳು ಯಾವಾಗ ಓಪನ್?: ಪ್ರಕಾಶ್ ಜಾವಡೇಕರ್ ಏನಂದ್ರು?
ನವದೆಹಲಿ, ಜೂನ್ 3: ದೇಶದಲ್ಲಿ ಕೊರೊನಾವೈರಸ್ ಹಾವಳಿ ಹೆಚ್ಚಾಗುತ್ತಿದ್ದಂತೆ, ಮಾಲ್, ಚಿತ್ರಮಂದಿರಗಳು ಎಲ್ಲವನ್ನೂ ಬಂದ್ ಮಾಡಲಾಗಿತ್ತು.
ಜೂನ್ನಲ್ಲಿ ಕೊರೊನಾ ಸ್ಥಿತಿಗತಿ ನೋಡಿಕೊಂಡು ಚಿತ್ರಮಂದಿರಗಳನ್ನು ತೆರೆಯುವುದಾಗಿ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.
ಕೊವಿಡ್-19 ಸ್ಥಿತಿಗತಿಯನ್ನು ಈ ತಿಂಗಳು ಪರಾಮರ್ಶಿಸಿ ಸಿನೆಮಾ ಹಾಲ್ ಗಳನ್ನು ಮರು ಆರಂಭಿಸುವ ಬಗ್ಗೆ ಚಿಂತಿಸಲಾಗುವುದು ಹೇಳಿದ್ದಾರೆ.ಹಲವು ರಾಜ್ಯಗಳಲ್ಲಿ ಜೂನ್ 8ರಿಂದ ಮಾಲ್ಗಳನ್ನು ತೆರೆಯಲು ಅನುಮತಿ ಸಿಕ್ಕಿದೆ. ಆದರೆ ಥಿಯೇಟರ್ಗಳ ಬಗ್ಗೆ ಇನ್ನೂ ಕ್ರಮ ಕೈಗೊಂಡಿಲ್ಲ.

ನಿರ್ಮಾಪಕರ ಸಂಘದ ಜೊತೆ ವಿಡಿಯೋ ಸಂವಾದ
ವಿಡಿಯೊ ಕಾನ್ಫರೆನ್ಸ್ ಮೂಲಕ ಚಲನಚಿತ್ರ ನಿರ್ಮಾಪಕರ ಸಂಘ, ಸಿನೆಮಾ ಪ್ರದರ್ಶಕರು ಮತ್ತು ಚಿತ್ರೋದ್ಯಮದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಸಂದರ್ಭದಲ್ಲಿ ಸಚಿವರು ಈ ಮಾತುಗಳನ್ನು ಹೇಳಿದ್ದಾರೆ.

ಚಲನಚಿತ್ರೋದ್ಯಮ ವಲಯಕ್ಕೆ ನಷ್ಟ
ಕೊರೊನಾ ವೈರಸ್ ನಿಂದ ಲಾಕ್ ಡೌನ್ ಆದ ನಂತರ ದೇಶಾದ್ಯಂತ ಚಲನಚಿತ್ರೋದ್ಯಮ ವಲಯದಲ್ಲಿ ಉಂಟಾಗಿರುವ ನಷ್ಟ ಮತ್ತು ತೊಂದರೆ ಬಗ್ಗೆ ಈ ಪ್ರತಿನಿಧಿಗಳು ಈಗಾಗಲೇ ಸಚಿವರಿಗೆ ಮನವಿಗಳನ್ನು ಸಲ್ಲಿಸಿದ್ದರು.
ಸಿನೆಮಾ ಹಾಲ್ ಗಳನ್ನು ತೆರೆಯುವ ಬಗ್ಗೆ ಮಾಹಿತಿ ನೀಡಿದ ಸಚಿವರು ಈ ತಿಂಗಳು ಕೊವಿಡ್-19 ಸ್ಥಿತಿಗತಿಗಳನ್ನು ನೋಡಿಕೊಂಡು ನಿರ್ಧರಿಸಲಾಗುವುದು ಎಂದರು.

ಚಿತ್ರ ನಿರ್ಮಾಣ ಚಟುವಟಿಕೆಗಳು
ನಿರ್ಮಾಣಕ್ಕೆ ಸಂಬಂಧಿಸಿದ ಚಟುವಟಿಕೆಗಳನ್ನು ಆರಂಭಿಸುವುದರ ಬಗ್ಗೆ ಮಾತನಾಡಿದ ಸಚಿವ ಜಾವದೇಕರ್ ಸರ್ಕಾರದಿಂದ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳನ್ನು ಅಳವಡಿಸಿಕೊಳ್ಳಲಾಗುವುದು ಎಂದರು.

ಭಾರತದಾದ್ಯಂತ 9500ಕ್ಕೂ ಹೆಚ್ಚು ಸಿನೆಮಾ ಹಾಲ್
ಭಾರತದಾದ್ಯಂತ 9,500ಕ್ಕೂ ಹೆಚ್ಚು ಸಿನೆಮಾ ಹಾಲ್ ಗಳಿದ್ದು ಟಿಕೆಟ್ ಮಾರಾಟದಿಂದ ಪ್ರತಿದಿನ ಸುಮಾರು 30 ಕೋಟಿ ರೂಪಾಯಿ ಆದಾಯ ಬರುತ್ತದೆ.
ಚಲನಚಿತ್ರೋದ್ಯಮದಲ್ಲಿ ತೊಡಗಿಕೊಂಡಿರುವ ಅನೇಕ ಕಾರ್ಮಿಕರಿಗೆ ಆರ್ಥಿಕ ಸಂಕಷ್ಟ ಉಂಟಾಗಿದ್ದು ವೇತನದಲ್ಲಿ ಸಬ್ಸಿಡಿ, 3 ವರ್ಷಗಳವರೆಗೆ ಬಡ್ಡಿರಹಿತ ಸಾಲ, ತೆರಿಗೆ ಮತ್ತು ಸುಂಕ ವಿನಾಯ್ತಿ, ವಿದ್ಯುತ್ ಬಿಲ್ ಕಡಿತ ಹೀಗೆ ಹತ್ತಾರು ಬೇಡಿಕೆಗಳನ್ನು ಉದ್ಯಮದ ಪ್ರತಿನಿಧಿಗಳು ಸಚಿವರ ಮುಂದಿಟ್ಟಿದ್ದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications