ಪ್ರತಿಭಟನೆ: ಹೆಲ್ಮೆಟ್ ಧರಿಸಿ ಬಿಜೆಪಿ ಕಾರ್ಯಕ್ರಮಕ್ಕೆ ಹೋದ ವರದಿಗಾರರು!
ರಾಯಪುರ, ಫೆಬ್ರವರಿ 07: ಹೆಲ್ಮೆಟ್ ಧರಿಸಿ ಬಿಜೆಪಿ ಮುಖಂಡರೊಬ್ಬರ ಸಂದರ್ಶನವನ್ನು ವರದಿಗಾರರು ರಾಯಪುರದಲ್ಲಿ ಪಡೆದಿದ್ದಾರೆ. ಅವರು ಹೀಗೆ ಮಾಡಿರುವುದು ಬಿಜೆಪಿ ವಿರುದ್ಧ ತಮ್ಮ ಪ್ರತಿಭಟನೆ ದಾಖಲಿಸಲು.
ರಾಯಪುರದಲ್ಲಿ ಇಂದು ನಡೆದ ಬಿಜೆಪಿ ಕಾರ್ಯಕ್ರಮಕ್ಕೆ ಎಲ್ಲ ಸ್ಥಳೀಯ ವರದಿಗಾರರು ಹೆಲ್ಮೆಟ್ ಧರಿಸಿ ತೆರಳಿ ಕಾರ್ಯಕ್ರಮದ ವರದಿ ಮಾಡಿದರು. ಕಾರ್ಯಕ್ರಮದ ನಂತರ ಬಿಜೆಪಿ ಮುಖಂಡನ ಬೈಟ್ ಪಡೆಯಬೇಕಾದರೆ ಕೂಡ ಹೆಲ್ಮೆಟ್ ಧರಿಸಿಯೇ ಇದ್ದರು.

'ನಾವು ಹೆಲ್ಮೆಟ್ ಧರಿಸಿ ಇಲ್ಲಿನ ಬಿಜೆಪಿ ಸರ್ಕಾರಕ್ಕೆ ಸಂದೇಶ ಕಳುಹಿಸಲು ಬಯಸಿದ್ದೇವೆ, ಇದು ನಮ್ಮ ಪ್ರತಿಭಟನೆ, ಜೊತೆಗೆ ಬಿಜೆಪಿಯವರು ಮತ್ತೆ ನಮ್ಮ ಮೇಲೆ ದಾಳಿ ಮಾಡಿದರೆ ರಕ್ಷಿಸಿಕೊಳ್ಳುವ ಉಪಾಯವೂ ಹೌದು' ಎಂದು ಮಾಧ್ಯಮ ಸಿಬ್ಬಂದಿ ಹೇಳಿದ್ದಾರೆ.
ಚತ್ತೀಸ್ಘಡದ ರಾಯಪುರದಲ್ಲಿ ಕಳೆದ ಶನಿವಾರದಂದು ನಡೆದ ಬಿಜೆಪಿ ಸಮಾವೇಶದ ವರದಿ ಮಾಡುವ ಸಮಯದಲ್ಲಿ ಕೆಲವು ಮಾಧ್ಯಮದ ಸಿಬ್ಬಂದಿ ಒಬ್ಬರ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ಇದರ ವಿರುದ್ಧ ರಾಜ್ಯದ ವರದಿಗಾರರು ಪ್ರತಿಭಟನೆ ಮಾಡುತ್ತಿದ್ದಾರೆ.
ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರ ನಡುವೆ ಆಗುತ್ತಿದ್ದ ಗಲಾಟೆಯನ್ನು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಸುಮನ್ ಪಾಂಡೆ ಎಂಬ ವರದಿಗಾರನ ಮೇಲೆ ಬಿಜೆಪಿಯ ಕಾರ್ಯಕರ್ತರು ಹಲ್ಲೆ ಮಾಡಿದ್ದರು. ಆತನ ತಲೆಗೆ ತೀವ್ರವಾಗಿ ಪೆಟ್ಟಾಗಿತ್ತು. ಘಟನೆಯನ್ನು ಖಂಡಿಸಿ ಚತ್ತೀಸ್ಘಡ ರಾಜ್ಯದ ಪತ್ರಕರ್ತರು ಪ್ರತಿಭಟನೆ ಮಾಡಿದ್ದರು. ಈಗಲೂ ಪ್ರತಿಭಟನೆ ಮುಂದುವರೆದಿದೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications