Get Updates
Get notified of breaking news, exclusive insights, and must-see stories!
Live

Republic Day 2025 Live: 76ನೇ ಗಣರಾಜ್ಯೋತ್ಸವದ ಲೈವ್‌ ಅಪ್ಡೇಟ್ಸ್‌

ಈ ವರ್ಷ ದೇಶವು 76ನೇ ವರ್ಷದ ಗಣರಾಜ್ಯೋತ್ಸವದ ಸಂಭ್ರಮದಲ್ಲಿದೆ. ಈ ರಾಷ್ಟ್ರೀಯ ಹಬ್ಬವನ್ನು ಕರ್ನಾಕ ಸೇರಿದಂತೆ ದೇಶಾದ್ಯಂತ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಈ ಗಣತಂತ್ರ ದಿನದ ಕಾರ್ಯಕ್ರಮಗಳನ್ನು ಪ್ರತಿಯೊಬ್ಬ ಭಾರತೀಯರು ಕಣ್ತುಂಬಿಕೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ.

ಗಣರಾಜ್ಯೋತ್ಸವ ಪಥ ಸಂಚಲನ ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ಮಿಲಿಟರಿ ಸಾಮರ್ಥ್ಯ, ಮತ್ತು ತಾಂತ್ರಿಕ ಆಧುನಿಕತೆಗಳನ್ನು ಪ್ರದರ್ಶಿಸುವ ಮೂಲಕ ಇಡೀ ವಿಶ್ವವೇ ತನ್ನಡೆಗೆ ತಿರುಗುವಂತೆ ಮಾಡುತ್ತದೆ. ಈ ಬಾರಿ ಅಂದರೆ 2025ನೇ ವರ್ಷದ ಗಣರಾಜ್ಯೋತ್ಸವವನ್ನು 'ಸ್ವರ್ಣಿಮ್ ಭಾರತ್-ವಿರಾಸತ್ ಔರ್ ವಿಕಾಸ್', ಅಂದರೆ, 'ಸುವರ್ಣ ಭಾರತ-ಪರಂಪರೆ ಮತ್ತು ಅಭಿವೃದ್ಧಿ' ಎಂಬ ಥೀಮ್‌ನಡಿಯಲ್ಲಿ ಆಚರಣೆ ಮಾಡಲಾಗಿದೆ.

Republic Day 2025 Live Updates in Kannada  Celebrations  Parade  Events and Highlights

ಗಣರಾಜ್ಯೋತ್ಸವಕ್ಕೆ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ್ದಾರೆ. ಸುಬಿಯಾಂಟೊ ಅವರು ಅಕ್ಟೋಬರ್ 2024ರಲ್ಲಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿದ್ದಾರೆ.

ಗಣರಾಜ್ಯೋತ್ಸವದ ಮೆರವಣಿಗೆ ಭಾರತದ ರಾಜಧಾನಿ ನವದೆಹಲಿಯ ಕರ್ತವ್ಯ ಪಥದಲ್ಲಿ ಆರಂಭವಾಗಲಿದ್ದು, ಈ ರಸ್ತೆ ಇಂಡಿಯಾ ಗೇಟ್‌ನಿಂದ ರಾಷ್ಟ್ರಪತಿಗಳ ಅಧಿಕೃತ ನಿವಾಸವಾದ ರಾಷ್ಟ್ರಪತಿ ಭವನದವರೆಗೆ ವಿಸ್ತರಿಸಿದೆ. ಪ್ರತಿಕ್ಷಣದ ಲೈವ್‌ ಅಪ್ಡೇಟ್‌ ಮಾಹಿತಿಗಾಗಿ ಒನ್‌ ಇಂಡಿಯಾ ಕನ್ನಡ ಫಾಲೋ ಮಾಡಿ.

Jan 26, 2025, 1:08 pm IST
ಕರ್ನಾಟಕ

ತಮ್ಮ ನಿವಾಸದಲ್ಲಿ ಧ್ವಜಾರೋಹಣ ನೆರವೇರಿಸಿದ ಬೊಮ್ಮಾಯಿ

76ನೇ ಗಣರಾಜ್ಯೋತ್ಸವದ ಅಂಗವಾಗಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಇಂದು ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಧ್ವಜಾರೋಹಣ ನೇರವೇರಿಸಿದರು. ಈ ಸಂದರ್ಭದಲ್ಲಿ ಸರಕಾರಿ‌ ಕನ್ನಡ ಹಿರಿಯ ಪ್ರಾಥಮಿಕ‌ ಶಾಲೆ ನಂ 13, ಆಶೋಕ ನಗರ, ಹುಬ್ಬಳ್ಳಿ (ಶ್ರೀ ವಿದ್ಯಾನಂದ) ಶಾಲೆ ಮಕ್ಕಳಿಗೆ ನೋಟ್ ಪುಸ್ತಕ ಮತ್ತು ಪೆನ್ನುಗಳನ್ನು ವಿತರಿಸಿದರು.
Jan 26, 2025, 12:35 pm IST
ದೆಹಲಿ

ಭಾರತೀಯ ವಾಯುಪಡೆಯ ಸಾಹಸ
Jan 26, 2025, 12:27 pm IST
ದೆಹಲಿ

ಕರ್ತವ್ಯಪಥದಿಂದ ನಿರ್ಗಮಿಸಿದ ಪ್ರಧಾನಿ ಮೋದಿ

ಕರ್ತವ್ಯಪಥದಿಂದ ನಿರ್ಗಮಿಸಿದ ಪ್ರಧಾನಿ ಮೋದಿ
ನವದೆಹಲಿಯಲ್ಲಿ 76ನೇ ಗಣರಾಜ್ಯೋತ್ಸವ ಅದ್ಧೂರಿಯಾಗಿ ನಡೆದಿದ್ದು, ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಕರ್ತವ್ಯಪಥದಿಂದ ನಿರ್ಗಮಿಸುವ ಮೂಲಕ ನೆರೆದಿದ್ದ ಜನರತ್ತ ಕೈಬೀಸಿ ಗಮನ ಸೆಳೆದರು.
Jan 26, 2025, 11:55 am IST

ಧ್ವಜಾರೋಹಣ ನೆರವೇರಿಸಿದ ಅಸಾದುದ್ದೀನ್ ಓವೈಸಿ

ದೇಶಾದ್ಯಂತ 76ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಇನ್ನು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಹೈದರಾಬಾದ್‌ನಲ್ಲಿ ಧ್ವಜಾರೋಹಣ ನೆರವೇರಿಸಿದರು.
Jan 26, 2025, 11:46 am IST
ಕರ್ನಾಟಕ

ಪಥ ಸಂಚಲನದಲ್ಲಿ ಗಮನ ಸೆಳೆದ ಲಕ್ಕುಂಡಿ ಶಿಲ್ಪಕಲೆ

ಪಥ ಸಂಚಲನದಲ್ಲಿ ಗಮನ ಸೆಳೆದ ಲಕ್ಕುಂಡಿ ಶಿಲ್ಪಕಲೆ
ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಕರ್ನಾಟಕದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧ ಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿತ್ತು. ಆದರೆ ಈ ಬಾರಿ ಗದಗ ಜಿಲ್ಲೆಯ ಲಕ್ಕುಂಡಿಯ ಶಿಲ್ಪಕಲೆಯನ್ನು ಅನಾವರಣಗೊಳಿಸಿರುವ ಲಕ್ಕುಂಡಿ ಶಿಲ್ಪಕಲೆಯ ತೊಟ್ಟಿಲು ಸ್ತಬ್ಧಚಿತ್ರ ಇಂದಿನ ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ ಕರ್ತವ್ಯ ಪಥದಲ್ಲಿ ಸಂಚರಿಸಿ ಗಮನ ಸೆಳೆಯಿತು.
Jan 26, 2025, 11:39 am IST

ಗೋವಾದ ಟ್ಯಾಬ್ಲೋ
Jan 26, 2025, 11:30 am IST

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಹದೇವಪುರ ವಲಯ ಆಯುಕ್ತರ ಕಛೇರಿಯ ಆವರಣದಲ್ಲಿ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಇಂದು ವಲಯ ಆಯುಕ್ತರು ರವರು ಇತರೆ ಅಧಿಕಾರಿಗಳ ಜೊತೆಗೂಡಿ ಧ್ವಜಾರೋಹಣ ನೆರವೇರಿಸಿದರು.
Jan 26, 2025, 11:19 am IST
ಕರ್ನಾಟಕ

75ನೇ ಗಣರಾಜ್ಯೋತ್ಸವವನ್ನು ಬೆಂಗಳೂರು ಆಮ್ ಆದ್ಮಿ ಪಕ್ಷವು ತನ್ನ ನಗರದ ಕುಮಾರ ಪಾರ್ಕ್ ರಸ್ತೆಯ ರಸ್ತೆಯ ಪ್ರಧಾನ ಕಛೇರಿಯಲ್ಲಿ ಭಾನುವಾರ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಪಕ್ಷದ ರಾಜ್ಯ ಖಜಾಂಚಿ ಪ್ರಕಾಶ್ ನೆಡುಂಗಡಿ, ದೇಶದಲ್ಲಿ ಇಂದು 500ಕ್ಕೂ ಹೆಚ್ಚು ಸಂಸ್ಥಾನಗಳಿಂದ 28 ರಾಜ್ಯಗಳಾಗಿ ಪರಿವರ್ತನೆಯಾಗಿ ಸದೃಢ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಹೊರಹೊಮ್ಮಿರುವ ಭಾರತವು ತನ್ನೆಲ್ಲ ಸಂಸ್ಕೃತಿ, ಆಚಾರ, ವಿಚಾರಗಳಿಂದಾಗಿ ವಿಶ್ವದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿಕೊಂಡು ಬಂದಿದೆ. ದೇಶದ ಪ್ರತಿಯೊಂದು ರಾಜ್ಯಗಳ ಪ್ರಾದೇಶಿಕ ಅಸ್ಮಿತೆ ಹಾಗೂ ಒಕ್ಕೂಟ ವ್ಯವಸ್ಥೆಯ ಪರಿಕಲ್ಪನೆ ವಿಶ್ವಕ್ಕೆ ಮಾದರಿಯಾಗಿದೆ ಎಂದರು.
Jan 26, 2025, 10:49 am IST
ದೆಹಲಿ

ಗಮನ ಸೆಳೆದ 300 ಕಲಾವಿದರ ತಂಡ
Jan 26, 2025, 10:47 am IST

ನವದೆಹಲಿಯಲ್ಲಿ 76ನೇ ಗಣರಾಜ್ಯೋತ್ಸವ ಮೆರವಣಿಗೆ ವೇಳೆ ಪುಷ್ಪಗಳ ಸುರಿಮಳೆ
Jan 26, 2025, 10:42 am IST
ದೆಹಲಿ

ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭ ಕೋರಿದ ರಾಹುಲ್‌ ಗಾಂಧಿ
Jan 26, 2025, 10:35 am IST
ದೆಹಲಿ

ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ದೇಶಾದ್ಯಂತ 76ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದರು. ಇದೇ ವೇಳೆ ರಾಷ್ಟ್ರಗೀತೆ ಹಾಡಲಾಯಿತು. ಜೊತೆಗೆ ಕುಶಾಲ ತೋಪು ಸಿಡಿಸಲಾಯಿತು
Jan 26, 2025, 10:14 am IST
ದೆಹಲಿ

ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಗೌರವ ನಮನ

ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಗೌರವ ನಮನ
ಕರ್ತವ್ಯಪಥಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಸಿದ್ದು, ರಾಜನಾಥ್‌ ಸಿಂಗ್‌ ಅವರನ್ನು ಸ್ವಾಗತಿಸಿದ್ದಾರೆ. ಇದಕ್ಕೂ ಮೊದಲು ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದರು.
Jan 26, 2025, 10:07 am IST
ದೆಹಲಿ

ತಮ್ಮ ನಿವಾಸದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಗಡ್ಕರಿ

ದೇಶಾದ್ಯಂತ 76ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಇನ್ನು ನಿತಿನ್‌ ಗಡ್ಕರಿ ಅವರು ತಮ್ಮ ನಿವಾಸದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಗಮನ ಸೆಳೆದಿದ್ದಾರೆ.
Jan 26, 2025, 10:02 am IST
ಕರ್ನಾಟಕ

76ನೇ ಗಣರಾಜ್ಯೋತ್ಸವ ಪ್ರಯುಕ್ತ ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಚೇರಿ ಆವರಣದಲ್ಲಿ ಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್‌ಪ್ರಸಾತ್ ಮನೋಹರ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮುಖ್ಯ‌ಅಭಿಯಂತರರುಗಳು, ಅಪರ ಮುಖ್ಯ ಅಭಿಯಂತರರುಗಳು, ಎಂಜನಿಯರ್ ಗಳು, ಬೆಂಗಳೂರು ಜಲಮಂಡಳಿ ನೌಕರರ ಸಂಘದ ಅಧ್ಯಕ್ಷ ಬಿ.ಕೆ.ಮರಿಯಪ್ಪ,ಪ್ರಧಾನ ಕಾರ್ಯದರ್ಶಿ ಗೋವಿಂದರಾಜು ಸೇರಿದಂತೆ ಅಧಿಕಾರಿಗಳು ಪಾಲ್ಗೊಂಡು BWSSB ನೌಕರರ ಸಂಘ ಹೊರತಂದಿರುವ ಡೈರಿಗಳನ್ನು ಬಿಡುಗಡೆ ಮಾಡಲಾಯಿತು.
Jan 26, 2025, 9:59 am IST

ಗೂಗಲ್‌ ವಿಶೇಷ ಸಂದರ್ಭಗಳಲ್ಲಿ ತನ್ನ ಡೂಡಲ್‌ ಅನ್ನು ಬದಲಾಯಿಸುತ್ತಲೇ ಇರುತ್ತದೆ. ಹಾಗೆಯೇ ಇಂದು ಗೂಗಲ್‌ ವಿಶೇಷ ಡೂಡಲ್‌ ಮೂಲಕ 76ನೇ ಗಣರಾಜ್ಯೋತ್ಸವವನ್ನು ಸಂಭ್ರಮಿಸಿ ಗಮನ ಸೆಳೆದಿದಿದೆ.
Jan 26, 2025, 9:52 am IST
ಕರ್ನಾಟಕ

ಕೆಪಿಸಿಸಿ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಧ್ವಜಾರೋಹಣ ನೆರವೇರಿಸಿದರು. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು ಆದ ಡಿಸಿಎಂ ಡಿ ಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
Jan 26, 2025, 9:31 am IST
ಕರ್ನಾಟಕ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿದರು.
Jan 26, 2025, 9:15 am IST
ಕರ್ನಾಟಕ

ದೇಶಾದ್ಯಂತ 76ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಹಾಗೆಯೇ ಬೆಂಗಳೂರಿನ ಮಾಣೆಕ್‌ ಷಾ ಮೈದಾನದಲ್ಲಿ ರಾಜ್ಯಪಾಲರಾದ ಥಾವರ್ ಚಂದ್‌ ಧ್ವಜಾರೋಹಣ ನೆರವೇರಿಸಿದ್ದಾರೆ
Jan 26, 2025, 8:35 am IST
ಕರ್ನಾಟಕ

ಬೆಂಗಳೂರಿನಲ್ಲಿ ಭಾರೀ ಬಿಗಿ ಭದ್ರತೆ

ಬೆಂಗಳೂರಿನಲ್ಲಿ ಭಾರೀ ಬಿಗಿ ಭದ್ರತೆ
76ನೇ ಗಣರಾಜ್ಯೋತ್ಸವ ಆಚರಣೆಗೆ ಬೆಂಗಳೂರಿಲ್ಲೂ ಅದ್ಧೂರಿ ಸಿದ್ಧತೆ ಮಾಡಲಾಗಿದೆ. ಗಣರಾಜ್ಯೋತ್ವವದ ಸಮಾರಂಭದಲ್ಲಿ ಬೆಳಗ್ಗೆ 8:58ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಷ್ಟ್ರ ಧ್ವಜಾರೋಹಣನೆರವೇರಿಸಲಿದ್ದಾರೆ. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿರುವ ಗಣರಾಜ್ಯೋತ್ಸವಕ್ಕೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. 8 ಮಂದಿ ಡಿಸಿಪಿ, 17 ಎಸಿಪಿ, 44 ಇನ್ಸ್​ಪೆಕ್ಟರ್, 114 ಪಿಎಸ್​ಐ, 58 ಎಎಸ್ಐ, 80 ಮಹಿಳಾ ಸಿಬ್ಬಂದಿ, 30 ಜನ ಕ್ಯಾಮೆರಾ ಸಿಬ್ಬಂದಿಯನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ.
Jan 26, 2025, 8:26 am IST
ಕರ್ನಾಟಕ

ರೈಲು ನಿಲ್ದಾಣಗಳಲ್ಲಿ ಗಣರಾಜ್ಯೋತ್ಸವ ಆಚರಣೆ

ರೈಲು ನಿಲ್ದಾಣಗಳಲ್ಲಿ ಗಣರಾಜ್ಯೋತ್ಸವ ಆಚರಣೆ
ಗಣರಾಜ್ಯೋತ್ಸವ ಪ್ರಯುಕ್ತ ನೈಋತ್ಯ ರೈಲ್ವೆಯ ಪ್ರಮುಖ ವಿಭಾಗವಾಗಿರುವ ಕರ್ನಾಟಕದ ಬೆಂಗಳೂರು ವಿಭಾಗೀಯ ಕಚೇರಿ, ರೈಲು ನಿಲ್ದಾಣ, ಹೊಸಪೇಟೆ, ಬಳ್ಳಾರಿ, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ರಾಜ್ಯ ಪ್ರಮುಖ ನಿಲ್ದಾಣಗಳಲ್ಲಿ ಆಚರಣೆ ಜೋರಾಗಿದೆ. ಕೇಸರಿ, ಬಿಳಿ ಹಸಿರು ಬಣ್ಣಗಳಿಂದ ಕಟ್ಟಡಗಳನ್ನು ಸಿಂಗರಿಸಲಾಗಿದೆ. ಇವುಗಳ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
Jan 26, 2025, 8:20 am IST

ಕರ್ನಾಟಕದಿಂದ ಲಕ್ಕುಂಡಿಯ ಬ್ರಹ್ಮ ಜಿನಾಲಯ ಆಯ್ಕೆ

ಕರ್ನಾಟಕದಿಂದ ಲಕ್ಕುಂಡಿಯ ಬ್ರಹ್ಮ ಜಿನಾಲಯ ಆಯ್ಕೆ
ದೆಹಲಿ ಗಣರಾಜ್ಯೋತ್ಸವದ ಪರೇಡ್‌ಗೆ ಲಕ್ಕುಂಡಿ ಗ್ರಾಮದ ಬ್ರಹ್ಮ ಜಿನಾಲಯ ಆಯ್ಕೆ ಆಗಿದೆ. ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರ್ಪಡಿಸುವ ಪ್ರಕ್ರಿಯೆಗೆ ಮತ್ತು ಪ್ರಾಚ್ಯವಸ್ತು ಸಂರಕ್ಷಣೆಗೆ ಪೂರಕವಾಗಿ ಈ ಬೆಳವಣಿಗೆ ಮಹತ್ವ ಪಡೆದಿದೆ. ಜೈನ ದೇವಾಲಯ ದೆಹಲಿಯ ಪರೇಡ್ ಗೆ ಆಯ್ಕೆ ಆಗಿದ್ದು, ಈ ಭಾಗದ ಜನರಲ್ಲಿನ ಸಂತಸವನ್ನ ಹೆಚ್ಚಿಸಿದೆ
Jan 26, 2025, 8:14 am IST

ಪ್ರಧಾನಿ ಮೋದಿ ಹೇಳಿದ್ದೇನು?

ಇಂದು ದೇಶಾದ್ಯಂತ ಗಣರಾಜ್ಯೋತ್ಸವವನ್ನು ಆಚರಣೆ ಮಾಡುತ್ತಿದ್ದೇವೆ. ನಮ್ಮ ಸಂವಿಧಾನವನ್ನು ರಚಿಸಿದ ಮತ್ತು ನಮ್ಮ ಪ್ರಜಾಪ್ರಭುತ್ವ, ಘನತೆ ಮತ್ತು ಏಕತೆಯಲ್ಲಿ ಬೇರೂರಿದೆ ಎಂದು ಖಚಿತಪಡಿಸಿದ ಎಲ್ಲಾ ಜನತೆಗೂ ತಲೆಬಾಗಿ ನಮಸ್ಕರಿಸುತ್ತೇನೆ. ಈ ಗಣರಾಜ್ಯೋತ್ಸವವು ನಮ್ಮ ಸಂವಿಧಾನದ ಆದರ್ಶಗಳನ್ನು ಸಂರಕ್ಷಿಸುವಸ, ಬಲಿಷ್ಠ ಮತ್ತು ಸಮೃದ್ಧ ಭಾರತಕ್ಕಾಗಿ ಕೆಲಸ ಮಾಡುವ ನಮ್ಮ ಪ್ರಯತ್ನಗಳನ್ನು ಬಲಪಡಿಸಲಿ ಎಂದು ತಿಳಿಸಿದ್ದಾರೆ ಟ್ವೀಟ್‌ ಮೂಲಕ ಪ್ರಧಾನಿ ಮೋದಿ ತಿಳಿಸಿದ್ದಾರೆ.
Jan 26, 2025, 7:59 am IST
ಕರ್ನಾಟಕ

ನಾಡಿನ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ ಸಿಎಂ

ನಾಡಿನ ಸಮಸ್ತ ಬಂಧುಗಳಿಗೆ 76ನೇ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ ಸಿಎಂ ಸಿದ್ದರಾಮಯ್ಯ.
Jan 26, 2025, 7:54 am IST

ಧ್ವಜಾರೋಹಣ ನೆರವೇರಿಸಲಿರುವ ದ್ರೌಪದಿ ಮುರ್ಮು

ಧ್ವಜಾರೋಹಣ ನೆರವೇರಿಸಲಿರುವ ದ್ರೌಪದಿ ಮುರ್ಮು
ಗಣರಾಜ್ಯೋತ್ಸವದ ಸಂಭ್ರಮಾಚರಣೆ ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳಗ್ಗೆ 10:30ಕ್ಕೆ ಧ್ವಜಾರೋಹಣ ನೆರವೇರಿಸಲಿದ್ದಾರೆ.
Jan 26, 2025, 7:50 am IST

ಪ್ಲಾಟಿನಂ ಜುಬಿಲಿ

ಪ್ಲಾಟಿನಂ ಜುಬಿಲಿ
ಈ ವರ್ಷದ 76ಗಣರಾಜ್ಯೋತ್ಸವವನ್ನು ಸಂವಿಧಾನದ 75 ವರ್ಷಗಳನ್ನು ಪೂರೈಸಿದ ಪ್ಲಾಟಿನಂ ಜುಬಿಲಿ ಎಂದು ಆಚರಣೆ ಮಾಡಲಾಗುತ್ತದೆ.
Jan 26, 2025, 7:33 am IST

ಈ ವರ್ಷದ ಗಣರಾಜ್ಯೋತ್ಸವ ಮುಖ್ಯ ಅತಿಥಿ ಯಾರು?

ಗಣರಾಜ್ಯೋತ್ಸವಕ್ಕೆ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರನ್ನು ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.ಗಣರಾಜ್ಯೋತ್ಸವದ ಮೆರವಣಿಗೆ ಜನವರಿ 26ರಂದು ಬೆಳಗ್ಗೆ 10.30ಕ್ಕೆ ಪ್ರಾರಂಭವಾಗಲಿದೆ. ಸುಮಾರು 10,000 ವಿಶೇಷ ಅತಿಥಿಗಳನ್ನು ಸಹ ಭವ್ಯ ಕಾರ್ಯಕ್ರಮವನ್ನು ವೀಕ್ಷಿಸಲು ಆಹ್ವಾನಿಸಲಾಗಿದೆ.
Jan 26, 2025, 7:29 am IST
ಕರ್ನಾಟಕ

ರಾಜ್ಯಪಾಲ ಗೆಹ್ಲೋಟ್ ರಿಂದ ಧ್ವಜಾರೋಹಣ

ರಾಜ್ಯಪಾಲ ಗೆಹ್ಲೋಟ್ ರಿಂದ ಧ್ವಜಾರೋಹಣ
ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಬೆಳಗ್ಗೆ 9 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಧ್ವಜಾರೋಹಣ ಮಾಡಲಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ.
Jan 26, 2025, 7:19 am IST

2025ರ ಗಣರಾಜ್ಯೋತ್ಸವ ಥೀಮ್‌

2025ರ ಗಣರಾಜ್ಯೋತ್ಸವ ಥೀಮ್‌
ಗಣರಾಜ್ಯೋತ್ಸವ ಆಚರಣೆಯು ‘ಸುವರ್ಣ ಭಾರತ: ಪರಂಪರೆ ಮತ್ತು ಪ್ರಗತಿ‘ ಎಂಬ ವಿಷಯದ ಮೇಲೆ ಕೇಂದ್ರೀಕೃತವಾಗಿದೆ. ಪ್ರತಿ ವರ್ಷ ಭಾರತ ಸರ್ಕಾರವು ಗಣರಾಜ್ಯೋತ್ಸವಕ್ಕಾಗಿ ಒಂದು ನಿರ್ದಿಷ್ಟ ವಿಷಯವನ್ನು ಆಯ್ಕೆ ಮಾಡುತ್ತದೆ. ಈ ವರ್ಷದ ವಿಷಯವು ರಾಷ್ಟ್ರದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ಅದರ ಬೆಳವಣಿಗೆ ಮತ್ತು ಅಭಿವೃದ್ಧಿಯ ಪ್ರಯಾಣವನ್ನು ಎತ್ತಿ ತೋರಿಸುತ್ತದೆ.
Jan 26, 2025, 7:09 am IST

76ನೇ ಗಣರಾಜ್ಯೋತ್ಸವವನ್ನು ಸುವರ್ಣ ಭಾರತ-ಪರಂಪರೆ ಮತ್ತು ಅಭಿವೃದ್ಧಿ ಎಂಬ ಥೀಮ್‌ನಡಿಯಲ್ಲಿ ಆಚರಣೆ ಮಾಡಲಾಗುತ್ತಿದೆ. ಇದು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ಅದರ ನಿರಂತರ ಪ್ರಗತಿಯ ಪ್ರಯಾಣವನ್ನು ಪ್ರತಿಬಿಂಬಿಸುತ್ತದೆ.
READ MORE

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+