ನವದೆಹಲಿ, ಜನವರಿ 26: ಭಾರತವು 75ನೇ ಸ್ವಾತಂತ್ರ್ಯೋತ್ಸವ ಆಚರಿಸುತ್ತಿರುವುದರ ನಡುವೆ 73ನೇ ಗಣರಾಜ್ಯೋತ್ಸವ ದಿನವನ್ನು ಆಚರಿಸುತ್ತಿದೆ. ರಾಷ್ಟ್ರ ರಾಜಧಾನಿ ಸೇರಿದಂತೆ ಜನವರಿ, 26ರಂದು ದೇಶಾದ್ಯಂತ ಗಣರಾಜ್ಯೋತ್ಸವವನ್ನು ಹಬ್ಬದ ರೀತಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. 1950ರ ಜನವರಿ 26ರಂದು ಭಾರತವು ಸಂವಿಧಾನವನ್ನು ಅಂಗೀಕರಿಸಿದ ದಿನವಾಗಿದ್ದು, ಅಂದು ದೇಶ ನಿಜವಾಗಿಯೂ ಪ್ರಜಾಸತ್ತಾತ್ಮಕ ಗಣರಾಜ್ಯವಾಯಿತು.
ದೇಶದ 73ನೇ ಗಣರಾಜ್ಯೋತ್ಸವದ ಸಂಭ್ರಮದ ಹಿನ್ನೆಲೆ ಮಂಗಳವಾರ ರಾತ್ರಿ 7 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಲಿದ್ದಾರೆ. ಗಣರಾಜ್ಯೋತ್ಸವ ದಿನವು ಬ್ರಿಟಿಷ್ ಆಡಳಿತದ ವಿರುದ್ಧದ ಮೊದಲ ಕ್ರಾಂತಿಯ ಸೂಚಕವಾಗಿದೆ.
ಈ ವರ್ಷ ಆಚರಿಸುತ್ತಿರುವ 73ನೇ ಗಣರಾಜ್ಯೋತ್ಸವವನ್ನು ಎಂದಿಗಿಂತ ವಿಭಿನ್ನ ಮತ್ತು ವಿಶೇಷವಾಗಿ ಪ್ರಸಾರ ಮಾಡುವುದಕ್ಕೆ ದೂರದರ್ಶನದ ಸಿದ್ಧತೆ ನಡೆಸಿದೆ. ನವದೆಹಲಿಯಲ್ಲಿ ಈ ವರ್ಷ ಗಣರಾಜ್ಯೋತ್ಸವದ ಕವರೇಜ್ಗಾಗಿ ರಾಷ್ಟ್ರಪತಿ ಭವನದಿಂದ ರಾಜ್ಪಥ್ ಮೂಲಕ ಇಂಡಿಯಾ ಗೇಟ್ನಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕದವರೆಗೆ ಸಂಪೂರ್ಣ ವಿಸ್ತಾರವಾಗಿ ವ್ಯವಸ್ಥೆ ಮಾಡಲಾಗಿದೆ. ಒಟ್ಟು 59 ಕ್ಯಾಮೆರಾಗಳು ಮತ್ತು 160ಕ್ಕೂ ಹೆಚ್ಚು ಸಿಬ್ಬಂದಿಯು ಗಣರಾಜ್ಯೋತ್ಸವದ ಸಂಭ್ರಮವನ್ನು ಸೆರೆ ಹಿಡಿಯುವುದಕ್ಕೆ ನಿಯೋಜಿಸಲಾಗಿದೆ.
ದೂರದರ್ಶನ ಅವರು ರಾಷ್ಟ್ರಪತಿ ಭವನದ ಗುಮ್ಮಟದಿಂದ ರಾಷ್ಟ್ರೀಯ ಕ್ರೀಡಾಂಗಣದ ಗುಮ್ಮಟದವರೆಗೆ ರಾಜಪಥದ ಉದ್ದಕ್ಕೂ 59 ಕ್ಯಾಮೆರಾಗಳನ್ನು ನಿಯೋಜಿಸಿದ್ದಾರೆ. ರಾಜಪಥದಲ್ಲಿ 33 ಕ್ಯಾಮೆರಾಗಳು, ನ್ಯಾಷನಲ್ ವಾರ್ ಮೆಮೋರಿಯಲ್, ಇಂಡಿಯಾ ಗೇಟ್, ನ್ಯಾಷನಲ್ ಸ್ಟೇಡಿಯಂನಲ್ಲಿ 16 ಕ್ಯಾಮೆರಾಗಳು ಮತ್ತು ರಾಷ್ಟ್ರಪತಿ ಭವನದಲ್ಲಿ 10 ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ದೇಶದಾದ್ಯಂತ ದೂರದರ್ಶನದ ಎಲ್ಲಾ ಚಾನೆಲ್ಗಳಲ್ಲಿ ಜನವರಿ 26 ರಂದು ಬೆಳಿಗ್ಗೆ 9:15 ರಿಂದ ರಾಜ್ಪಥ್ನಲ್ಲಿನ ಕಾರ್ಯಕ್ರಮಗಳ ಅಂತ್ಯದವರೆಗೆ ಗಣರಾಜ್ಯೋತ್ಸವದ ನೇರ ಪ್ರಸಾರವನ್ನು ಮಾಡಲಾಗುತ್ತದೆ. ಲೈವ್ ಕವರೇಜ್ ಡಿಡಿ ನ್ಯಾಷನಲ್, ಡಿಡಿ ನ್ಯೂಸ್ ಯೂಟ್ಯೂಬ್ ಚಾನೆಲ್ಗಳು ಮತ್ತು ನ್ಯೂಸ್ಆನ್ ಏರ್ ಆಪ್ ಮತ್ತು ವೆಬ್ಸೈಟ್ನಲ್ಲಿಯೂ ಲಭ್ಯವಿರುತ್ತದೆ. ದೇಶದ 73ನೇ ಗಣರಾಜ್ಯೋತ್ಸವ ಮತ್ತು ರಾಮನಾಥ್ ಕೋವಿಂದ್ ಅವರ ಭಾಷಣದ ಕುರಿತು ಕ್ಷಣ ಕ್ಷಣದ ಮಾಹಿತಿಯನ್ನು ಮುಂದೆ ಓದಿ.
Jan 26, 2022, 12:17 pm IST
ರಾಜ್ಪಥ್ನಲ್ಲಿ ಪಥಸಂಚಲನ ಅಂತ್ಯ:
ರಾಜ್ಪಥ್ನಲ್ಲಿ ಪಥಸಂಚಲನ ಅಂತ್ಯವಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಬೀಳ್ಕೊಡುಗೆ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ.
Jan 26, 2022, 11:44 am IST
ರಾಜ್ಪಥ್ನಲ್ಲಿ ಸ್ತಬ್ಧಚಿತ್ರ ಪ್ರದರ್ಶನದ ಸಂದರ್ಭದಲ್ಲಿ ಅರುಣಾಚಲ ಪ್ರದೇಶ, ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರದ ಚಿತ್ರಗಳು ಹೀಗಿವೆ.
'ಸ್ವಾತಂತ್ರ್ಯ ಹೋರಾಟದಲ್ಲಿ ಪಂಜಾಬ್ನ ಕೊಡುಗೆ'ಯನ್ನು ಚಿತ್ರಿಸುವ ರಾಜ್ಯದ ಟ್ಯಾಬ್ಲೋ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರನ್ನು ಚಿತ್ರಿಸುತ್ತದೆ. ಇದು ಲಾಲಾ ಲಜಪತ್ ರಾಯ್ ಮತ್ತು ಉಧಮ್ ಸಿಂಗ್ ನೇತೃತ್ವದ ಸೈಮನ್ ಕಮಿಷನ್ ವಿರುದ್ಧದ ಪ್ರತಿಭಟನೆಯನ್ನು ಪ್ರತಿಬಿಂಬಿಸುತ್ತದೆ.
#RepublicDayParade | Depicting 'Punjab's contribution in freedom struggle', the tableau of the state depicts Bhagat Singh, Rajguru & Sukhdev. It also depicts protest against the Simon Commission led by Lala Lajpat Rai and Udham Singh shooting Michael O'Dwyer.#RepublicDayIndiapic.twitter.com/xNy8Xs9J3B
ದೆಹಲಿಯ ರಾಜ್ಪಥ್ನಲ್ಲಿ ಸೇನಾ ಮುಖ್ಯಸ್ಥರ ನೇತೃತ್ವದಲ್ಲಿ ಪರೇಡ್ ಆರಂಭ.
Jan 26, 2022, 10:32 am IST
ಹುತಾತ್ಮ ಎಎಸ್ಐ ಬಾಬುರಾಂರಿಗೆ ಮರಣೋತ್ತರ ಅಶೋಕ ಚಕ್ರ ಪ್ರಶಸ್ತಿ. ಪತ್ನಿ ವೀಣಾ ಬಾಬುರಾಂರಿಗೆ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್.
Jan 26, 2022, 10:30 am IST
ರಾಜಪಥದಲ್ಲಿ ರಾಷ್ಟ್ರಪತಿಯಿಂದ ಧ್ವಜಾರೋಹಣ
ನವದೆಹಲಿಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ತ್ರಿವರ್ಣ ಧ್ವಜಾರೋಹಣವನ್ನು ನೆರವೇರಿಸಿದರು.
Jan 26, 2022, 10:26 am IST
ದೆಹಲಿಯ ರಾಜಪಥಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ಕೋವಿಂದ್. ರಾಜಪಥದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಭೂಸೇನೆ, ನೌಕಾಸೇನೆ ಹಾಗೂ ವಾಯು ಸೇನೆ ಮುಖ್ಯಸ್ಥರು.
Jan 26, 2022, 10:24 am IST
ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಪುಷ್ಪನಮನ.
ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಮೂರು ಸೇನೆಗಳ ಮುಖ್ಯಸ್ಥರ ಸಾಥ್.
Jan 26, 2022, 10:11 am IST
ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ ನಂತರ ಎರಡು ನಿಮಿಷಗಳ ಕಾಲ ಮೌನಾಚರಣೆ.
Jan 26, 2022, 10:08 am IST
ಹುತಾತ್ಮ ಯೋಧರಿಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ.
Jan 26, 2022, 10:07 am IST
ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ನಮನ.
Jan 26, 2022, 10:04 am IST
ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪ್ರಧಾನಿ:
ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡಿದರು.
Jan 26, 2022, 9:50 am IST
ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಮ್ಮ ನಿವಾಸದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದರು.
Jan 26, 2022, 9:49 am IST
ಮುಂಬೈನ ಶಿವಾಜಿ ಪಾರ್ಕ್ನಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ರಾಷ್ಟ್ರ ಧ್ವಜಾರೋಹಣ ಮಾಡಿದರು. ಸಿಎಂ ಉದ್ಧವ್ ಠಾಕ್ರೆ ಕೂಡ ಉಪಸ್ಥಿತರಿದ್ದರು.
Jan 26, 2022, 9:48 am IST
ನವದೆಹಲಿಯಲ್ಲಿ 73 ರಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ರಾಷ್ಟ್ರಧ್ವಜಾರೋಹಣ ಮಾಡಿದರು.
Jan 26, 2022, 9:38 am IST
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತುಮಕೂರು ನಗರದಲ್ಲಿ, ಸರಕಾರಿ ಪ್ರೌಡಶಾಲೆ ಕ್ರೀಡಾಂಗಣದಲ್ಲಿ, 73ನೆ ಗಣರಾಜ್ಯ ದಿನಾಚರಣೆ ಯಂದು, ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಮಾತನಾಡಿದರು. ತುಮಕೂರು ಮಹಾನಗರಪಾಲಿಕೆಯ ಮೇಯರ್ ಕೃಷ್ಣಪ್ಪ, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್, ಶಾಸಕ ಜ್ಯೋತಿ ಗಣೇಶ್ ಉಪಸ್ಥಿತರಿದ್ದರು.
Jan 26, 2022, 9:13 am IST
ರಾಜ್ಯದಲ್ಲಿ ಕೃಷಿ ಕ್ಷೇತ್ರದ ಅಭಿವೃದ್ಧಿಗೂ ಸರ್ಕಾರ ಶ್ರಮ ವಹಿಸುತ್ತಿದೆ. ರೈತರ ಶ್ರೇಯೋಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ: ಟಿ ಸಿ ಗೆಹ್ಲೋಟ್.
Jan 26, 2022, 9:11 am IST
ರಾಜ್ಯದಲ್ಲಿ ಕೊರೊನಾವೈರಸ್ ವಿರುದ್ಧದ ಹೋರಾಟವು ಜನರ ಸಹಕಾರದಿಂದ ಯಶಸ್ವಿಯಾಗಿದೆ. ಆಕ್ಸಿಜನ್ ಉತ್ಪಾದನೆಯನ್ನು ಹೆಚ್ಚಿಸಲಾಗಿದೆ. ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯೂ ಇಳಿಮುಖವಾಗಿದೆ: ಟಿ ಸಿ ಗೆಹ್ಲೋಟ್
Jan 26, 2022, 9:10 am IST
ಕರ್ನಾಟಕ ರಾಜ್ಯಪಾಲ ಗೆಹ್ಲೋಟ್ ಭಾಷಣ:
ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಿಂದ ರಾಜ್ಯವನ್ನು ಉದ್ದೇಶಿಸಿ ಭಾಷಣ.
Jan 26, 2022, 9:06 am IST
ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಸಂಭ್ರಮ. ಧ್ವಜಾರೋಹಣದ ನಂತರ ಗೌರವ ರಕ್ಷೆ ಸ್ವೀಕರಿಸಿದ ರಾಜ್ಯಪಾಲ ಗೆಹ್ಲೋಟ್. ಸ್ವಾತಂತ್ರ್ಯ ಹೋರಾಟಗಾರರು ಯೋಧರು ಸೇರಿದಂತೆ 200 ಜನರಿಗೆ ಮಾತ್ರ ಅವಕಾಶ. ಕೊವಿಡ್-19 ಹಿನ್ನೆಲೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಲಾಗಿದೆ.
Jan 26, 2022, 9:01 am IST
ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್.
Jan 26, 2022, 8:56 am IST
ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದರು.
Jan 26, 2022, 8:54 am IST
73ನೇ ಗಣರಾಜ್ಯೋತ್ಸವದ ಹಿನ್ನೆಲೆ ಒಡಿಶಾ ರಾಜ್ಯಪಾಲ ಗಣೇಶಿ ಲಾಲ್ ಮತ್ತು ಸಿಎಂ ನವೀನ್ ಪಟ್ನಾಯಕ್ ಭುವನೇಶ್ವರದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದರು.
Jan 26, 2022, 8:32 am IST
ಮಹಾರಾಷ್ಟ್ರ: ಆರ್ಎಸ್ಎಸ್ನ ನಾಗ್ಪುರ ಮಹಾನಗರ ಸಂಘಚಾಲಕ್ ರಾಜೇಶ್ ಲೋಯಾ ನಾಗ್ಪುರದ ಆರ್ಎಸ್ಎಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದರು.
Jan 26, 2022, 8:31 am IST
ಚೆನ್ನೈನಲ್ಲಿ 73ನೇ ಗಣರಾಜ್ಯೋತ್ಸವದ ಆಚರಣೆಯಲ್ಲಿ ರಾಜ್ಯಪಾಲ ಆರ್ ಎನ್ ರವಿ ಮತ್ತು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಭಾಗವಹಿಸಿದರು.
READ MORE
12:15 PM, 25 Jan
1949ರ ನವೆಂಬರ್ 26ರಂದು ರಚಿಸಲಾದ ದೇಶದ ಸಂವಿಧಾನವನ್ನು 1950ರ ಜನವರಿ 26ರಂದು ಅಂಗೀಕರಿಸಲಾಯಿತು. ಈ ದಿನವನ್ನು ದೇಶದ ಗಣರಾಜ್ಯೋತ್ಸವ ಎಂದು ಆಚರಿಸಲಾಗುತ್ತದೆ.
12:15 PM, 25 Jan
ಭಾರತದಲ್ಲಿ ಗಣರಾಜ್ಯದ ದಿನವನ್ನು ಹಬ್ಬಕ್ಕಿಂತ ವಿಭಿನ್ನ ಹಾಗೂ ವಿಶೇಷವಾಗಿ ಆಚರಿಸಲಾಗುತ್ತದೆ. ಈ ದಿನದಂದು ಭಾರತೀಯ ಸೇನಾ ಪಡೆಗಳು ಮತ್ತು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಗೌರವಿಸುವ ಉತ್ಸಾಹವನ್ನು ಪ್ರದರ್ಶಿಸಲಾಗುತ್ತದೆ.
12:16 PM, 25 Jan
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಕಾರಣದಿಂದ ಈ ವರ್ಷ ಗಣರಾಜ್ಯೋತ್ಸವ ಆಚರಣೆಯಲ್ಲಿ ಭಾಗವಹಿಸಲು ಯಾವುದೇ ವಿದೇಶಿ ಅತಿಥಿಗಳಿಗೆ ಆಹ್ವಾನವನ್ನು ನೀಡಿಲ್ಲ.
12:58 PM, 25 Jan
ರಾಜ್ಯಗಳು ಮತ್ತು ಕೇಂದ್ರ ಸಚಿವಾಲಯಗಳು ಒಟ್ಟು 56 ಪ್ರಸ್ತಾವನೆಗಳನ್ನು ಸಲ್ಲಿಸಿದ್ದು, ಈ ಪೈಕಿ 21 ಅನ್ನು ಶಾರ್ಟ್ಲಿಸ್ಟ್ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ದೆಹಲಿ, ಕೇರಳ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಕೋಷ್ಟಕಗಳು ಈ ವರ್ಷ ಮೆರವಣಿಗೆಯ ಭಾಗವಾಗುವುದಿಲ್ಲ.
1:48 PM, 25 Jan
ಭಾರತದ 73ನೇ ಗಣರಾಜ್ಯೋತ್ಸವ ದಿನದಂದು 939 ಪೊಲೀಸ್ ಸಿಬ್ಬಂದಿಗೆ ಶೌರ್ಯ ಪ್ರಶಸ್ತಿ ಅಥವಾ ಸೇವೆ ಪದಕವನ್ನು ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.
3:57 PM, 25 Jan
2022ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾದ 939 ಪ್ರಶಸ್ತಿಗಳಲ್ಲಿ 189 ಸಿಬ್ಬಂದಿ ಶೌರ್ಯಕ್ಕಾಗಿ ಪೊಲೀಸ್ ಪದಕವನ್ನು ಪಡೆಯಲಿದ್ದಾರೆ. 88 ಜನರು ವಿಶಿಷ್ಟ ಸೇವೆಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕವನ್ನು ಪಡೆಯಲಿದ್ದು, 662 ಮಂದಿ ಪ್ರತಿಭಾನ್ವಿತ ಸೇವೆಗಾಗಿ ಪೊಲೀಸ್ ಪದಕ ಪಡೆಯಲಿದ್ದಾರೆ.
3:57 PM, 25 Jan
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಕಾರಣದ ಹಿನ್ನೆಲೆ ಗಣರಾಜ್ಯೋತ್ಸವದಲ್ಲಿ ಪ್ರೇಕ್ಷಕರ ಪ್ರಮಾಣವನ್ನು 24,000ಕ್ಕೆ ತಗ್ಗಿಸಲಾಗಿದೆ. ರಕ್ಷಣಾ ಸಂಸ್ಥೆಯ ಮೂಲಗಳ ಪ್ರಕಾರ ಕೊವಿಡ್-19 ಭೀತಿಗೂ ಮೊದಲು ಅಂದರೆ 2020ರಲ್ಲಿ ಗಣರಾಜ್ಯೋತ್ಸವ ಆಚರಿಸುವ ವೇಳೆ 1.25 ಲಕ್ಷ ಪ್ರೇಕ್ಷಕರಿಗೆ ಪರೇಡ್ ವೀಕ್ಷಿಸಲು ಅನುಮತಿ ನೀಡಲಾಗುತ್ತಿತ್ತು.
3:57 PM, 25 Jan
ಗಣರಾಜ್ಯೋತ್ಸವ ಪರೇಡ್ ಅನ್ನು ಡಿಡಿ ನ್ಯೂಸ್ ಮತ್ತು ಅದರ ಅಧಿಕೃತ ಯೂಟ್ಯೂಬ್ ಚಾನೆಲ್ನಲ್ಲಿ ನೀವು ಲೈವ್ ಆಗಿ ವೀಕ್ಷಿಸಬಹುದು. ಬಹುತೇಕ ಖಾಸಗಿ ಸುದ್ದಿ ವಾಹಿನಿಗಳು ಗಣರಾಜ್ಯೋತ್ಸವ ಪರೇಡ್ ಅನ್ನು ನೇರ ಪ್ರಸಾರ ಮಾಡಲಿವೆ.
6:44 PM, 25 Jan
29 ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಗಣರಾಜ್ಯೋತ್ಸವದ ಮುನ್ನಾದಿನದಂದು ರಾಷ್ಟ್ರಪತಿ ಪ್ರಶಸ್ತಿಗಳನ್ನು ಪಡೆಯುತ್ತಾರೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.
6:45 PM, 25 Jan
ಇನ್ನು 15 ನಿಮಿಷಗಳಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
7:01 PM, 25 Jan
ರಾಷ್ಟ್ರಪತಿ ರಾಮನಾಥ್ ಕೋವಿಂದ್ ದೇಶವನ್ನುದ್ದೇಶಿಸಿ ಭಾಷಣ ಆರಂಭ ಮಾಡಿದ್ದಾರೆ.
7:02 PM, 25 Jan
ರಾಷ್ಟ್ರಪತಿ ರಾಮನಾಥ್ ಕೋವಿಂದ್ ದೇಶದ ಜನರಿಗೆ ಗಣರಾಜೋತ್ಸ್ಯವ ದಿನದ ಶುಭಾಶಯ ಕೋರಿದ್ದಾರೆ.
7:07 PM, 25 Jan
ನಮ್ಮ ರಾಷ್ಟ್ರದ ಜನರು ಸ್ವಚ್ಛತೆ ಅಭಿಯಾನದ ಜೊತೆಗೆ, ಕೋವಿಡ್ ಲಸಿಕಾಕರಣವನ್ನು ಆಂದೋಲನವನ್ನಾಗಿಸಿದ್ದಾರೆ: ರಾಷ್ಟ್ರಪತಿ ರಾಮನಾಥ್
7:10 PM, 25 Jan
ಕೋವಿಡ್-19 ವಿರುದ್ಧ ಹೋರಾಟ ನಡೆಯುತ್ತಿದೆ. ಇದು ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರಿದೆ ಮತ್ತು ಹೊಸ ಸಮಸ್ಯೆಗಳನ್ನು ಸೃಷ್ಟಿಸುತ್ತಲೇ ಇದೆ: ರಾಷ್ಟ್ರಪತಿ
7:11 PM, 25 Jan
ಇಂದು ಕೂಡಾ ನಾವು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತೀ ಮುಖ್ಯ. ಕೋವಿಡ್ ಮಾರ್ಗಸೂಚಿ ಪಾಲಿಸುವುದು ನಮ್ಮ ರಾಷ್ಟ್ರ ಧರ್ಮವಾಗಿದೆ: ರಾಷ್ಟ್ರಪತಿ
7:13 PM, 25 Jan
ನಾವೆಲ್ಲರೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನವನ್ನು ಆಚರಿಸಿದ್ದೇವೆ. ಅವರ ಸ್ವಾತಂತ್ರ್ಯದ ಅನ್ವೇಷಣೆ ಮತ್ತು ಭಾರತವನ್ನು ಹೆಮ್ಮೆಪಡುವ ಅವರ ಮಹತ್ವಾಕಾಂಕ್ಷೆ ನಮಗೆಲ್ಲರಿಗೂ ಸ್ಫೂರ್ತಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್
7:15 PM, 25 Jan
ನಮ್ಮ ಕೃಷಿಕರು, ಮುಖ್ಯವಾಗಿ ಯುವ ಕೃಷಿಕರು ಕೃಷಿಯನ್ನು ನಡೆಸುತ್ತಿರುವ ನನಗೆ ಸಂತಸದ ವಿಷಯವಾಗಿದೆ: ರಾಷ್ಟ್ರಪತಿ
7:17 PM, 25 Jan
ಉದ್ಯೋಗ ನೀಡುವ ವಿಚಾರದಲ್ಲಿ ಸಣ್ಣ ಹಾಗೂ ಮಧ್ಯಮ ಉದ್ಯಮಗಳು ಪ್ರಮುಖ ಪಾತ್ರವಹಿಸಿದೆ: ರಾಷ್ಟ್ರಪತಿ
7:18 PM, 25 Jan
ವಿಶ್ವದ ಎಲ್ಲೇ ಹೋದರೂ ನನ್ನ ಗ್ರಾಮ, ನನ್ನ ಭಾರತ ನನ್ನ ಹೃದಯದಲ್ಲಿ ಇರುತ್ತದೆ: ರಾಷ್ಟ್ರಪತಿ
7:19 PM, 25 Jan
ನಮ್ಮ ದೇಶಕ್ಕಾಗಿ ಎಲ್ಲರೂ ಕಾರ್ಯ ನಿರ್ವಹಿಸಿದರೆ, ನಮ್ಮ ದೇಶದ ಸೇವೆ ಮಾಡಿದರೆ ನಮ್ಮ ದೇಶ ಅಭಿವೃದ್ಧಿಯಾಗುತ್ತದೆ: ರಾಷ್ಟ್ರಪತಿ
7:20 PM, 25 Jan
ಬಿಪಿನ್ ರಾವತ್ ನಿಧನವನ್ನು ನೆನಪಿಸಿಕೊಂಡ ರಾಷ್ಟ್ರಪತಿ
7:21 PM, 25 Jan
ಕಳೆದ ವರ್ಷ ಒಲಿಂಪಿಕ್ ಕ್ರೀಡಾಕೂಟದಲ್ಲಿ ನಮ್ಮ ಆಟಗಾರರ ಪ್ರದರ್ಶನವು ಲಕ್ಷಾಂತರ ದೇಶವಾಸಿಗಳಿಗೆ ಸ್ಫೂರ್ತಿ ನೀಡಿತು: ರಾಷ್ಟ್ರಪತಿ
7:23 PM, 25 Jan
ಉತ್ತಮ ಭಾರತ ಮತ್ತು ಉತ್ತಮ ಪ್ರಪಂಚಕ್ಕಾಗಿ, ಗಾಂಧೀಜಿಯವರ ದಾರಿ ಪಾಲಿಸಬೇಕು. ಗಾಂಧೀಜಿಯವರು ಆತ್ಮಾವಲೋಕನ ಮಾಡಿಕೊಳ್ಳಬೇಕು ಮತ್ತು ಉತ್ತಮ ಮನುಷ್ಯರಾಗಬೇಕು ಎಂದು ಬಯಸಿದ್ದರು.
ಪೂರ್ಣ ಸ್ವರಾಜ್ಯ ದಿನ ಆಚರಿಸಿದ ರೀತಿಯಲ್ಲಿ ನಾವು ಗಣರಾಜ್ಯೋತ್ಸವವನ್ನು ಆಚರಿಸಬೇಕೆಂದು ಗಾಂಧಿ ಬಯಸುತ್ತಿದ್ದರು: ರಾಷ್ಟ್ರಪತಿ
7:25 PM, 25 Jan
ಇಂದು, ನಮ್ಮ ಸೈನಿಕರು ಮತ್ತು ಭದ್ರತಾ ಸಿಬ್ಬಂದಿಗಳು ರಾಷ್ಟ್ರೀಯ ಹೆಮ್ಮೆಯ ಪರಂಪರೆಯನ್ನು ಮುಂದುವರೆಸುತ್ತಿದ್ದಾರೆ. ಹಿಮಾಲಯದ ಆ ಚಳಿಯಲ್ಲೂ, ಮರುಭೂಮಿಯ ಆ ಬಿಸಿಯಲ್ಲೂ ತಮ್ಮ ಕುಟುಂಬದಿಂದ ದೂರವಿದ್ದು ದೇಶದ ಕಾವಲು ಕಾಯುತ್ತಿದ್ದಾರೆ: ರಾಷ್ಟ್ರಪತಿ ಕೋವಿಂದ್
7:28 PM, 25 Jan
ನಮ್ಮ ಗಡಿಗಳನ್ನು ಭದ್ರಪಡಿಸುವ ಸಶಸ್ತ್ರ ಪಡೆಳಿಗೆ ಮತ್ತು ದೇಶದೊಳಗೆ ಆಂತರಿಕ ಭದ್ರತೆಯನ್ನು ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೆ ಧನ್ಯವಾದಗಳು. ಒಬ್ಬ ವೀರ ಸೈನಿಕನು ಕರ್ತವ್ಯದಲ್ಲಿ ಮರಣಹೊಂದಿದಾಗ, ಇಡೀ ದೇಶವು ದುಃಖಿತವಾಗುತ್ತದೆ: ರಾಷ್ಟ್ರಪತಿ ಕೋವಿಂದ್
7:30 PM, 25 Jan
ಕಳೆದ ತಿಂಗಳು, ದುರದೃಷ್ಟಕರ ಅಪಘಾತದಲ್ಲಿ, ನಾವು ದೇಶದ ವೀರ ಕಮಾಂಡರ್ಗಳಲ್ಲಿ ಒಬ್ಬರಾದ ಜನರಲ್ ಬಿಪಿನ್ ರಾವತ್ ಅವರ ಪತ್ನಿ ಮತ್ತು ಅನೇಕ ವೀರ ಸೈನಿಕರನ್ನು ಕಳೆದುಕೊಂಡಿದ್ದೇವೆ. ದುರಂತದಿಂದಾಗಿ ಇಡೀ ದೇಶವೇ ದುಖಿಃಸಿದೆ: ರಾಷ್ಟ್ರಪತಿ
7:33 PM, 25 Jan
ದೇಶವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ
Today, it is our soldiers and security personnel who carry on the legacy of national pride. In the unbearable cold of the Himalayas and in the excruciating heat of the desert, far away from their families, they continue to guard the motherland: President Kovind #RepublicDaypic.twitter.com/tnmomfQ6Zx