Get Updates
Get notified of breaking news, exclusive insights, and must-see stories!
Live

Republic Day Parade Live: ದೆಹಲಿಯ ರಾಜ್‌ಪಥ್‌ನಲ್ಲಿ ಪಥಸಂಚಲನ ಅಂತ್ಯ

ನವದೆಹಲಿ, ಜನವರಿ 26: ಭಾರತವು 75ನೇ ಸ್ವಾತಂತ್ರ್ಯೋತ್ಸವ ಆಚರಿಸುತ್ತಿರುವುದರ ನಡುವೆ 73ನೇ ಗಣರಾಜ್ಯೋತ್ಸವ ದಿನವನ್ನು ಆಚರಿಸುತ್ತಿದೆ. ರಾಷ್ಟ್ರ ರಾಜಧಾನಿ ಸೇರಿದಂತೆ ಜನವರಿ, 26ರಂದು ದೇಶಾದ್ಯಂತ ಗಣರಾಜ್ಯೋತ್ಸವವನ್ನು ಹಬ್ಬದ ರೀತಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. 1950ರ ಜನವರಿ 26ರಂದು ಭಾರತವು ಸಂವಿಧಾನವನ್ನು ಅಂಗೀಕರಿಸಿದ ದಿನವಾಗಿದ್ದು, ಅಂದು ದೇಶ ನಿಜವಾಗಿಯೂ ಪ್ರಜಾಸತ್ತಾತ್ಮಕ ಗಣರಾಜ್ಯವಾಯಿತು.

ದೇಶದ 73ನೇ ಗಣರಾಜ್ಯೋತ್ಸವದ ಸಂಭ್ರಮದ ಹಿನ್ನೆಲೆ ಮಂಗಳವಾರ ರಾತ್ರಿ 7 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಲಿದ್ದಾರೆ. ಗಣರಾಜ್ಯೋತ್ಸವ ದಿನವು ಬ್ರಿಟಿಷ್ ಆಡಳಿತದ ವಿರುದ್ಧದ ಮೊದಲ ಕ್ರಾಂತಿಯ ಸೂಚಕವಾಗಿದೆ.

ಈ ವರ್ಷ ಆಚರಿಸುತ್ತಿರುವ 73ನೇ ಗಣರಾಜ್ಯೋತ್ಸವವನ್ನು ಎಂದಿಗಿಂತ ವಿಭಿನ್ನ ಮತ್ತು ವಿಶೇಷವಾಗಿ ಪ್ರಸಾರ ಮಾಡುವುದಕ್ಕೆ ದೂರದರ್ಶನದ ಸಿದ್ಧತೆ ನಡೆಸಿದೆ. ನವದೆಹಲಿಯಲ್ಲಿ ಈ ವರ್ಷ ಗಣರಾಜ್ಯೋತ್ಸವದ ಕವರೇಜ್‌ಗಾಗಿ ರಾಷ್ಟ್ರಪತಿ ಭವನದಿಂದ ರಾಜ್‌ಪಥ್ ಮೂಲಕ ಇಂಡಿಯಾ ಗೇಟ್‌ನಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕದವರೆಗೆ ಸಂಪೂರ್ಣ ವಿಸ್ತಾರವಾಗಿ ವ್ಯವಸ್ಥೆ ಮಾಡಲಾಗಿದೆ. ಒಟ್ಟು 59 ಕ್ಯಾಮೆರಾಗಳು ಮತ್ತು 160ಕ್ಕೂ ಹೆಚ್ಚು ಸಿಬ್ಬಂದಿಯು ಗಣರಾಜ್ಯೋತ್ಸವದ ಸಂಭ್ರಮವನ್ನು ಸೆರೆ ಹಿಡಿಯುವುದಕ್ಕೆ ನಿಯೋಜಿಸಲಾಗಿದೆ.

President Ram Nath Kovind address nation on eve of 73rd Republic Day Live Updates and Highlights in Kannada

ದೂರದರ್ಶನ ಅವರು ರಾಷ್ಟ್ರಪತಿ ಭವನದ ಗುಮ್ಮಟದಿಂದ ರಾಷ್ಟ್ರೀಯ ಕ್ರೀಡಾಂಗಣದ ಗುಮ್ಮಟದವರೆಗೆ ರಾಜಪಥದ ಉದ್ದಕ್ಕೂ 59 ಕ್ಯಾಮೆರಾಗಳನ್ನು ನಿಯೋಜಿಸಿದ್ದಾರೆ. ರಾಜಪಥದಲ್ಲಿ 33 ಕ್ಯಾಮೆರಾಗಳು, ನ್ಯಾಷನಲ್ ವಾರ್ ಮೆಮೋರಿಯಲ್, ಇಂಡಿಯಾ ಗೇಟ್, ನ್ಯಾಷನಲ್ ಸ್ಟೇಡಿಯಂನಲ್ಲಿ 16 ಕ್ಯಾಮೆರಾಗಳು ಮತ್ತು ರಾಷ್ಟ್ರಪತಿ ಭವನದಲ್ಲಿ 10 ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ದೇಶದಾದ್ಯಂತ ದೂರದರ್ಶನದ ಎಲ್ಲಾ ಚಾನೆಲ್‌ಗಳಲ್ಲಿ ಜನವರಿ 26 ರಂದು ಬೆಳಿಗ್ಗೆ 9:15 ರಿಂದ ರಾಜ್‌ಪಥ್‌ನಲ್ಲಿನ ಕಾರ್ಯಕ್ರಮಗಳ ಅಂತ್ಯದವರೆಗೆ ಗಣರಾಜ್ಯೋತ್ಸವದ ನೇರ ಪ್ರಸಾರವನ್ನು ಮಾಡಲಾಗುತ್ತದೆ. ಲೈವ್ ಕವರೇಜ್ ಡಿಡಿ ನ್ಯಾಷನಲ್, ಡಿಡಿ ನ್ಯೂಸ್ ಯೂಟ್ಯೂಬ್ ಚಾನೆಲ್‌ಗಳು ಮತ್ತು ನ್ಯೂಸ್ಆನ್ ಏರ್ ಆಪ್ ಮತ್ತು ವೆಬ್‌ಸೈಟ್‌ನಲ್ಲಿಯೂ ಲಭ್ಯವಿರುತ್ತದೆ. ದೇಶದ 73ನೇ ಗಣರಾಜ್ಯೋತ್ಸವ ಮತ್ತು ರಾಮನಾಥ್ ಕೋವಿಂದ್ ಅವರ ಭಾಷಣದ ಕುರಿತು ಕ್ಷಣ ಕ್ಷಣದ ಮಾಹಿತಿಯನ್ನು ಮುಂದೆ ಓದಿ.

Jan 26, 2022, 12:17 pm IST

ರಾಜ್‌ಪಥ್‌ನಲ್ಲಿ ಪಥಸಂಚಲನ ಅಂತ್ಯ:

ರಾಜ್‌ಪಥ್‌ನಲ್ಲಿ ಪಥಸಂಚಲನ ಅಂತ್ಯವಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಬೀಳ್ಕೊಡುಗೆ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ.
Jan 26, 2022, 11:44 am IST

ರಾಜ್‌ಪಥ್‌ನಲ್ಲಿ ಸ್ತಬ್ಧಚಿತ್ರ ಪ್ರದರ್ಶನದ ಸಂದರ್ಭದಲ್ಲಿ ಅರುಣಾಚಲ ಪ್ರದೇಶ, ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರದ ಚಿತ್ರಗಳು ಹೀಗಿವೆ.
Jan 26, 2022, 11:42 am IST

'ಸ್ವಾತಂತ್ರ್ಯ ಹೋರಾಟದಲ್ಲಿ ಪಂಜಾಬ್‌ನ ಕೊಡುಗೆ'ಯನ್ನು ಚಿತ್ರಿಸುವ ರಾಜ್ಯದ ಟ್ಯಾಬ್ಲೋ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರನ್ನು ಚಿತ್ರಿಸುತ್ತದೆ. ಇದು ಲಾಲಾ ಲಜಪತ್ ರಾಯ್ ಮತ್ತು ಉಧಮ್ ಸಿಂಗ್ ನೇತೃತ್ವದ ಸೈಮನ್ ಕಮಿಷನ್ ವಿರುದ್ಧದ ಪ್ರತಿಭಟನೆಯನ್ನು ಪ್ರತಿಬಿಂಬಿಸುತ್ತದೆ.
Jan 26, 2022, 11:30 am IST

ಚಿತ್ರಗಳು: ಕರ್ನಾಟಕದಲ್ಲಿ ಸಂಭ್ರಮದ ಗಣರಾಜ್ಯೋತ್ಸವ ದಿನಾಚರಣೆ

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿ, ಭಾಷಣ ಮಾಡಿದರು.
Jan 26, 2022, 10:39 am IST

ರಾಜ್‌ಪಥ್‌ನಲ್ಲಿ ಟ್ಯಾಂಕ್ ಬಿಟಿ ಜಿ-6 ಪರೇಡ್.
Jan 26, 2022, 10:38 am IST

ರಾಜ್‌ಪಥ್‌ನಲ್ಲಿ ಸೆಂಚುರಿಯನ್ ಟ್ಯಾಂಕ್ ಪರೇಡ್
Jan 26, 2022, 10:37 am IST

ದೆಹಲಿಯ ರಾಜ್‌ಪಥ್‌ನಲ್ಲಿ ಸೇನಾ ಮುಖ್ಯಸ್ಥರ ನೇತೃತ್ವದಲ್ಲಿ ಪರೇಡ್ ಆರಂಭ.
Jan 26, 2022, 10:32 am IST

ಹುತಾತ್ಮ ಎಎಸ್ಐ ಬಾಬುರಾಂರಿಗೆ ಮರಣೋತ್ತರ ಅಶೋಕ ಚಕ್ರ ಪ್ರಶಸ್ತಿ. ಪತ್ನಿ ವೀಣಾ ಬಾಬುರಾಂರಿಗೆ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್.
Jan 26, 2022, 10:30 am IST

ರಾಜಪಥದಲ್ಲಿ ರಾಷ್ಟ್ರಪತಿಯಿಂದ ಧ್ವಜಾರೋಹಣ

ನವದೆಹಲಿಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ತ್ರಿವರ್ಣ ಧ್ವಜಾರೋಹಣವನ್ನು ನೆರವೇರಿಸಿದರು.
Jan 26, 2022, 10:26 am IST

ದೆಹಲಿಯ ರಾಜಪಥಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ಕೋವಿಂದ್. ರಾಜಪಥದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಭೂಸೇನೆ, ನೌಕಾಸೇನೆ ಹಾಗೂ ವಾಯು ಸೇನೆ ಮುಖ್ಯಸ್ಥರು.
Jan 26, 2022, 10:24 am IST

ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಪುಷ್ಪನಮನ.
Jan 26, 2022, 10:15 am IST

ದೆಹಲಿಯ ರಾಜಪಥದತ್ತ ಹೊರಟ ಪ್ರಧಾನಮಂತ್ರಿ ನರೇಂದ್ರ ಮೋದಿ.
Jan 26, 2022, 10:12 am IST

ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಮೂರು ಸೇನೆಗಳ ಮುಖ್ಯಸ್ಥರ ಸಾಥ್.
Jan 26, 2022, 10:11 am IST

ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ ನಂತರ ಎರಡು ನಿಮಿಷಗಳ ಕಾಲ ಮೌನಾಚರಣೆ.
Jan 26, 2022, 10:08 am IST

ಹುತಾತ್ಮ ಯೋಧರಿಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ.
Jan 26, 2022, 10:07 am IST

ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ನಮನ.
Jan 26, 2022, 10:04 am IST

ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪ್ರಧಾನಿ:

ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡಿದರು.
Jan 26, 2022, 9:50 am IST

ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಮ್ಮ ನಿವಾಸದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದರು.
Jan 26, 2022, 9:49 am IST

ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ರಾಷ್ಟ್ರ ಧ್ವಜಾರೋಹಣ ಮಾಡಿದರು. ಸಿಎಂ ಉದ್ಧವ್ ಠಾಕ್ರೆ ಕೂಡ ಉಪಸ್ಥಿತರಿದ್ದರು.
Jan 26, 2022, 9:48 am IST

ನವದೆಹಲಿಯಲ್ಲಿ 73 ರಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ರಾಷ್ಟ್ರಧ್ವಜಾರೋಹಣ ಮಾಡಿದರು.
Jan 26, 2022, 9:38 am IST

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತುಮಕೂರು ನಗರದಲ್ಲಿ, ಸರಕಾರಿ ಪ್ರೌಡಶಾಲೆ ಕ್ರೀಡಾಂಗಣದಲ್ಲಿ, 73ನೆ ಗಣರಾಜ್ಯ ದಿನಾಚರಣೆ ಯಂದು, ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಮಾತನಾಡಿದರು. ತುಮಕೂರು ಮಹಾನಗರಪಾಲಿಕೆಯ ಮೇಯರ್ ಕೃಷ್ಣಪ್ಪ, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್, ಶಾಸಕ ಜ್ಯೋತಿ ಗಣೇಶ್ ಉಪಸ್ಥಿತರಿದ್ದರು.
Jan 26, 2022, 9:13 am IST

ರಾಜ್ಯದಲ್ಲಿ ಕೃಷಿ ಕ್ಷೇತ್ರದ ಅಭಿವೃದ್ಧಿಗೂ ಸರ್ಕಾರ ಶ್ರಮ ವಹಿಸುತ್ತಿದೆ. ರೈತರ ಶ್ರೇಯೋಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ: ಟಿ ಸಿ ಗೆಹ್ಲೋಟ್.
Jan 26, 2022, 9:11 am IST

ರಾಜ್ಯದಲ್ಲಿ ಕೊರೊನಾವೈರಸ್ ವಿರುದ್ಧದ ಹೋರಾಟವು ಜನರ ಸಹಕಾರದಿಂದ ಯಶಸ್ವಿಯಾಗಿದೆ. ಆಕ್ಸಿಜನ್ ಉತ್ಪಾದನೆಯನ್ನು ಹೆಚ್ಚಿಸಲಾಗಿದೆ. ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯೂ ಇಳಿಮುಖವಾಗಿದೆ: ಟಿ ಸಿ ಗೆಹ್ಲೋಟ್
Jan 26, 2022, 9:10 am IST

ಕರ್ನಾಟಕ ರಾಜ್ಯಪಾಲ ಗೆಹ್ಲೋಟ್ ಭಾಷಣ:

ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಿಂದ ರಾಜ್ಯವನ್ನು ಉದ್ದೇಶಿಸಿ ಭಾಷಣ.
Jan 26, 2022, 9:06 am IST

ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಸಂಭ್ರಮ. ಧ್ವಜಾರೋಹಣದ ನಂತರ ಗೌರವ ರಕ್ಷೆ ಸ್ವೀಕರಿಸಿದ ರಾಜ್ಯಪಾಲ ಗೆಹ್ಲೋಟ್. ಸ್ವಾತಂತ್ರ್ಯ ಹೋರಾಟಗಾರರು ಯೋಧರು ಸೇರಿದಂತೆ 200 ಜನರಿಗೆ ಮಾತ್ರ ಅವಕಾಶ. ಕೊವಿಡ್-19 ಹಿನ್ನೆಲೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಲಾಗಿದೆ.
Jan 26, 2022, 9:01 am IST

ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್.
Jan 26, 2022, 8:56 am IST

ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದರು.
Jan 26, 2022, 8:54 am IST

73ನೇ ಗಣರಾಜ್ಯೋತ್ಸವದ ಹಿನ್ನೆಲೆ ಒಡಿಶಾ ರಾಜ್ಯಪಾಲ ಗಣೇಶಿ ಲಾಲ್ ಮತ್ತು ಸಿಎಂ ನವೀನ್ ಪಟ್ನಾಯಕ್ ಭುವನೇಶ್ವರದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದರು.
Jan 26, 2022, 8:32 am IST

ಮಹಾರಾಷ್ಟ್ರ: ಆರ್‌ಎಸ್‌ಎಸ್‌ನ ನಾಗ್ಪುರ ಮಹಾನಗರ ಸಂಘಚಾಲಕ್ ರಾಜೇಶ್ ಲೋಯಾ ನಾಗ್ಪುರದ ಆರ್‌ಎಸ್‌ಎಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದರು.
Jan 26, 2022, 8:31 am IST

ಚೆನ್ನೈನಲ್ಲಿ 73ನೇ ಗಣರಾಜ್ಯೋತ್ಸವದ ಆಚರಣೆಯಲ್ಲಿ ರಾಜ್ಯಪಾಲ ಆರ್ ಎನ್ ರವಿ ಮತ್ತು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಭಾಗವಹಿಸಿದರು.
READ MORE

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+