ಮೀಸಲಾತಿ ಕುರಿತ ಸುಪ್ರೀಂ ಆದೇಶ ಸ್ವಾಗತಿಸಿದ ಮಾಯಾವತಿ
ಬೆಂಗಳೂರು, ಸೆಪ್ಟೆಂಬರ್ 26 : ಎಸ್ಸಿ ಮತ್ತು ಎಸ್ಟಿಯ ಸರ್ಕಾರಿ ನೌಕರರಿಗೆ ಬಡ್ತಿ ನೀಡುವಾಗ ಮೀಸಲಾತಿ ಅಗತ್ಯವಿಲ್ಲ ಎಂಬ ಸುಪ್ರೀಂಕೋರ್ಟ್ ಆದೇಶವನ್ನು ಬಿಎಸ್ಪಿ ನಾಯಕಿ ಮಾಯಾವತಿ ಸ್ವಾಗತಿಸಿದರು.
ಸುಪ್ರೀಂಕೋರ್ಟ್ ಆದೇಶದ ಬಳಿಕ ಮಾತನಾಡಿದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರು, ಕೆಲವೊಂದು ವಿಚಾರಗಳಿಗೆ ಈ ಆದೇಶವನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದರು.
ಸರ್ಕಾರಿ ಉದ್ಯೋಗದ ಬಡ್ತಿಯಲ್ಲಿ ಮೀಸಲಾತಿ ಅಗತ್ಯವಿಲ್ಲ ಸುಪ್ರೀಂ ಐತಿಹಾಸಿಕ ತೀರ್ಪು
'ಮೀಸಲಾತಿ ನೀಡಲೇಬಾರದು ಎಂದು ಸುಪ್ರೀಂಕೋರ್ಟ್ ಹೇಳಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಯಸಿದರೆ ಮೀಸಲಾತಿ ನೀಡಬಹುದು ಎಂದು ಹೇಳಿದೆ. ಆದ್ದರಿಂದ, ತೀರ್ಪನ್ನು ಸ್ವಾಗತಿಸುತ್ತೇನೆ' ಎಂದು ತಿಳಿಸಿದರು.
ಬಡ್ತಿಯಲ್ಲಿ ಮೀಸಲಾತಿ ಆದೇಶ: ಕರ್ನಾಟಕದ ಹಾದಿ ಸುಗಮವೇ?
ಎಸ್ಸಿ/ಎಸ್ಟಿ ಸರ್ಕಾರಿ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಬುಧವಾರ ತೀರ್ಪು ನೀಡಿತ್ತು. 2006ರಲ್ಲಿ ನೀಡಿದ ತೀರ್ಪಿನ ಮರುಪರಿಶೀಲನೆಯ ಅಗತ್ಯವಿಲ್ಲ ಎಂದು ಹೇಳಿತ್ತು.
ಬಡ್ತಿ ಮೀಸಲಾತಿ ಕಾಯ್ದೆ: ಎಸ್ಸಿ-ಎಸ್ಟಿ ನೌಕಕರ ಅಂತಿಮ ಹೋರಾಟ
ಹಲವು ವರ್ಷಗಳಿಂದ ಎಸ್ಸಿ/ಎಸ್ಟಿ ಸಮುದಾಯಕ್ಕೆ ಸೇರಿದವರಿಗೆ ಅನ್ಯಾಯವಾಗಿದೆ. ಸಮಯದಾಯದ ನೌಕರರು ಹಿಂದುಳಿದವರು ಎಂದು ಭಾವಿಸಲಾಗಿದೆ. ಈ ಹಿನ್ನಲೆಯಲ್ಲಿ ಮುಂಬಡ್ತಿಯಲ್ಲಿ ಅವರಿಗೆ ಶೇ 22.5ರಷ್ಟು ಮೀಸಲು ನೀಡಬೇಕು ಎಂದು ಒತ್ತಾಯಿಸಲಾಗಿತ್ತು.