Abhijit Bose Resign : ವಾಟ್ಸಾಪ್ ಇಂಡಿಯಾ ಮುಖ್ಯಸ್ಥ, ಮೆಟಾ ಇಂಡಿಯಾ ನಿರ್ದೇಶಕರ ರಾಜೀನಾಮೆ
ವಾಟ್ಸಾಪ್ ಇಂಡಿಯಾ ಮುಖ್ಯಸ್ಥ ಅಭಿಜಿತ್ ಬೋಸ್ ಮತ್ತು ಮೆಟಾ ಇಂಡಿಯಾ ನಿರ್ದೇಶಕ ರಾಜೀವ್ ಅಗರ್ವಾಲ್ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ ಎಂದು ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ. ವಾಟ್ಸಾಪ್ ಇಂಡಿಯಾ ಸಾರ್ವಜನಿಕ ನೀತಿಯ ನಿರ್ದೇಶಕ ಶಿವನಾಥ್ ತುಕ್ರಾಲ್ ಅವರನ್ನು ಈಗ ಭಾರತದ ಎಲ್ಲಾ ಮೆಟಾ ಬ್ರಾಂಡ್ಗಳಿಗೆ ಸಾರ್ವಜನಿಕ ನೀತಿಯ ನಿರ್ದೇಶಕರಾಗಿ ನೇಮಿಸಲಾಗಿದೆ.
"ಭಾರತದಲ್ಲಿ ನಮ್ಮ ಮೊದಲ ವಾಟ್ಸಾಪ್ ಮುಖ್ಯಸ್ಥರಾಗಿ ಅಭಿಜಿತ್ ಬೋಸ್ ಅವರ ಅಪಾರ ಕೊಡುಗೆಗಳಿಗಾಗಿ ನಾನು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಅವರ ಉದ್ಯಮಶೀಲತೆ ನಮ್ಮ ತಂಡಕ್ಕೆ ಹೊಸ ಸೇವೆಗಳನ್ನು ನೀಡಲು ಸಹಾಯ ಮಾಡಿದೆ. ಅದು ಲಕ್ಷಾಂತರ ಜನರು ಮತ್ತು ವ್ಯವಹಾರಗಳಿಗೆ ಪ್ರಯೋಜನವನ್ನು ನೀಡಿದೆ. ಭಾರತದ ವಾಟ್ಸಾಪ್ಗಾಗಿ ಇನ್ನೂ ಹೆಚ್ಚಿನದನ್ನು ಮಾಡಲು ಮತ್ತು ಭಾರತದ ಡಿಜಿಟಲ್ ರೂಪಾಂತರವನ್ನು ಮುಂದುವರಿಸಲು ಸಹಾಯ ಮಾಡಲು ನಾವು ಉತ್ಸುಕರಾಗಿದ್ದೇವೆ'' ಎಂದು ವಾಟ್ಸಾಪ್ ಮುಖ್ಯಸ್ಥ ವಿಲ್ ಕ್ಯಾಥ್ಕಾರ್ಟ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇನ್ನೂ ಮತ್ತೊಂದು ಉನ್ನತ ಅವಕಾಶ ಲಭಿಸಿರುವ ಕಾರಣ ರಾಜೀವ್ ಅಗರ್ವಾಲ್ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ಕಂಪನಿ ಹೇಳಿದೆ. "ಕಳೆದ ವರ್ಷದಲ್ಲಿ ಬಳಕೆದಾರ-ಸುರಕ್ಷತೆ, ಗೌಪ್ಯತೆ ಮತ್ತು ದೇಶದಲ್ಲಿ ಡಿಜಿಟಲ್ ಸೇರ್ಪಡೆಯನ್ನು ಹೆಚ್ಚಿಸಲು GOAL ನಂತಹ ಕಾರ್ಯಕ್ರಮಗಳನ್ನು ಹೆಚ್ಚಿಸುವಂತಹ ಕ್ಷೇತ್ರಗಳಲ್ಲಿ ನಮ್ಮ ನೀತಿ-ನೇತೃತ್ವದ ಉಪಕ್ರಮಗಳನ್ನು ಮುನ್ನಡೆಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ "ಎಂದು ಕಂಪನಿ ಹೇಳಿದೆ.

ಈ ಹಿಂದೆ ಫೇಸ್ಬುಕ್ ಪೋಷಕ ಸಂಸ್ಥೆಯಾಗಿರುವ ಮೆಟಾ ಕಂಪನಿಯು 11,000 ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿತ್ತು. ಈ ನಿರ್ಧಾರದ ಕುರಿತು ಮೇಟಾದ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಾರ್ಕ್ ಜುಕರ್ಬರ್ಗ್, ತಮ್ಮ ಉದ್ಯೋಗಿಗಳಿಗೆ ಕ್ಷಮೆಯಾಚಿಸುವ ಪತ್ರವನ್ನು ನೀಡಿದ್ದರು. ತಪ್ಪಾಗಿರುವುದರ ಜವಾಬ್ದಾರಿಯನ್ನು ತಾವೇ ವಹಿಸಿಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications