Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು
Gas Bill: ಇರಾನ್ -ಇಸ್ರೇಲ್ ಯುದ್ಧದ ಪರಿಣಾಮ ಕರ್ನಾಟಕದ ಬೆಂಗಳೂರು ಸೇರಿದಂತೆ ದೇಶದ ಹಲವು ರಾಜ್ಯಗಳ ಪ್ರಮುಖ ನಗರದಲ್ಲಿ ಅಡುಗೆ ಅನಿಲದ ಅಭಾವ ಉಂಟಾಗಿದೆ. ಇದರ ಪರಿಣಾಮ ಗ್ರಾಹಕರಿಗೂ ತಟ್ಟುತ್ತಿದ್ದು, ರೆಸ್ಟೋರೆಂಟ್ವೊಂದರಲ್ಲಿ ಬ್ರೇಕ್ಫಾಸ್ಟ್ ಮಾಡಿದವರಿಗೆ ಗ್ಯಾಸ್ ಶುಲ್ಕ ಸೇರಿಸಿ ಬಿಲ್ ನೀಡಲಾಗಿದೆ. ಇದೀಗ ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಗ್ರಾಹಕರೊಬ್ಬರು ರೆಸ್ಟೋರೆಂಟ್ಗೆ ತಿಂಡಿಗೆಂದು ಹೋಗಿದ್ದು, ಅವರು ಇಡ್ಲಿ, ವಡೆಯನ್ನು ತೆಗೆದುಕೊಂಡಿದ್ದಾರೆ. ವಿಚಿತ್ರ ಎಂಬಂತೆ ಬಿಲ್ನಲ್ಲಿ ಗ್ಯಾಸ್ ಶುಲ್ಕವನ್ನು ಸಹ ನಮೂದು ಮಾಡಲಾಗಿದೆ. ಇದು ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಈ ಬಿಲ್ ಚೆನ್ನೈನ ತಿರುವೆಂಕಡನಗರ್, ಎಂ.ಜಿ.ಆರ್. ಸಾಲೈ ಪೆರುಂಗುಡಿಯ "ಗ್ರೀರಾಸ್ ರೆಸ್ಟೋರೆಂಟ್"ಗೆ ಸೇರಿದ್ದಾಗಿದೆ. ಇದರಲ್ಲಿ ದಿನಾಂಕ 12/03/2026, ಸಮಯ 08:32 ಅಂತಾ ಇದೆ.

ಇಡ್ಲಿ, ವಡೆ, ಗ್ಯಾಸ್ ದರ
* ಒಂದು ಇಡ್ಲಿ - 33.33 ರೂಪಾಯಿ
* ಒಂದು ವಡೆ - 33.33 ರೂಪಾಯಿ
* ಗ್ಯಾಸ್ (Gas) - 9.52 ರೂಪಾಯಿ
* CGST - 1.90 ರೂಪಾಯಿ
* SGST - 1.90 ರೂಪಾಯಿ
* ಒಟ್ಟು - 80 ರೂಪಾಯಿಯ ಬಿಲ್ ಇದಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ
ಇಲ್ಲಿ 'Gas' ಎಂಬ ಐಟಂಗೆ ಶುಲ್ಕ ವಿಧಿಸಿರುವುದು ಸ್ವಲ್ಪ ಕುತೂಹಲಕಾರಿಯಾಗಿದೆ. ಏಕೆಂದರೆ ರೆಸ್ಟೋರೆಂಟ್ ಬಿಲ್ಗಳಲ್ಲಿ ಸಾಮಾನ್ಯವಾಗಿ ಇಂತಹ ಹೆಸರಿನ ಐಟಂ ಇರುವುದಿಲ್ಲ. ಆದರೆ ಈ ಬಿಲ್ನಲ್ಲಿ 'Gas'ಗೆ 9.52 ರೂಪಾಯಿ ಶುಲ್ಕ ಸೇರಿಸಲಾಗಿದ್ದು, ಅಚ್ಚರಿ ಹುಟ್ಟಿಹಾಕಿದೆ. ಅಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಕ್ಕೂ ಕಾರಣವಾಗಿದೆ. ಇದೊಂದೆ ರೆಸ್ಟೋರೆಂಟ್ ಅಲ್ಲದೆ, ಪ್ರಮುಖ ನಗರಗಳ ಹೋಟೆಲ್ಗಳಲ್ಲೂ ಸಹ ಇದೇ ರೀತಿಯ ಘಟನೆಗಳು ನಡೆದಿರುವ ಉದಾಹರಣೆಗಳುವೆ.
ಅಡುಗೆ ಅನಿಲ (LPG) ಬೆಲೆ ಏರಿಕೆಯಾದಾಗ ಕೆಲವು ರೆಸ್ಟೋರೆಂಟ್ಗಳು ಹೆಚ್ಚುವರಿ ಇಂಧನ ಶುಲ್ಕವನ್ನು (Fuel Surcharge) ಬಿಲ್ನಲ್ಲಿ ಸೇರಿಸುತ್ತವೆ. ಕೆಲವೊಮ್ಮೆ ರೆಸ್ಟೋರೆಂಟ್ಗಳು ತೆರಿಗೆಗಳಲ್ಲದೆ ತಮ್ಮ ಖರ್ಚುವೆಚ್ಚಗಳನ್ನು ತೋರಿಸಲು ಈ ರೀತಿ ವಿಭಿನ್ನ ಹೆಸರಿನಲ್ಲಿ ಶುಲ್ಕ ವಿಧಿಸುತ್ತವೆ. ಇದು ಗ್ರಾಹಕರ ಹಕ್ಕಿನ ವಿಷಯವಾಗಿದೆ. ಬಿಲ್ನಲ್ಲಿ ಸ್ಪಷ್ಟವಿಲ್ಲದ ಶುಲ್ಕವನ್ನು ವಿಧಿಸಿದರೆ, ಗ್ರಾಹಕರು ಬಿಲ್ಲಿಂಗ್ ಕೌಂಟರ್ನಲ್ಲಿ ಅಥವಾ ರೆಸ್ಟೋರೆಂಟ್ ಮ್ಯಾನೇಜರ್ ಬಳಿ ಇದರ ಬಗ್ಗೆ ಕೇಳುವ ಹಕ್ಕನ್ನು ಹೊಂದಿರುತ್ತಾರೆ.
ಗ್ರಾಹಕರ ಜೇಬಿಗೆ ಕತ್ತರಿ
ಮತ್ತೊಂದೆಡೆ, ಬೆಂಗಳೂರಿನಲ್ಲಿ ನಡೆಯುತ್ತಿರುವ ಎಲ್ಪಿಜಿ (LPG) ಬಿಕ್ಕಟ್ಟು ಇದೀಗ ಸಾಮಾನ್ಯ ಹೋಟೆಲ್ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿದೆ. ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ತೀವ್ರ ಕೊರತೆಯಿಂದಾಗಿ ಹೋಟೆಲ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪರ್ಯಾಯ ಇಂಧನಗಳ ವೆಚ್ಚ ಹೆಚ್ಚಾಗುತ್ತಿರುವುದರಿಂದ ಹೋಟೆಲ್ಗಳು ಈ ಹೊರೆಗೆ ಗ್ರಾಹಕರನ್ನು ಹೊಣೆಯಾಗಿಸುತ್ತಿವೆ.
ಕೆಲವು ರೆಸ್ಟೋರೆಂಟ್ಗಳು ಬಿಲ್ನಲ್ಲಿ ಪ್ರತ್ಯೇಕವಾಗಿ ಗ್ಯಾಸ್ ಚಾರ್ಜ್ (Gas Charge) ಎಂದು ನಮೂದಿಸುತ್ತಿವೆ. ಇನ್ನು ಕೆಲವು ಹೋಟೆಲ್ಗಳು ಆಹಾರದ ದರವನ್ನು ಏರಿಕೆ ಮಾಡಿವೆ. ಉದಾಹರಣೆಗೆ ಮಿಸ್ಟರ್ ಆಂಧ್ರ ಮೀಲ್ಸ್ (ದೊಡ್ಡನೆಕ್ಕುಂದಿ) ಇಲ್ಲಿನ ಬಿಲ್ನಲ್ಲಿ ಪ್ರತಿ ಗ್ರಾಹಕರಿಂದ ಹೆಚ್ಚುವರಿಯಾಗಿ 30 ರೂಪಾಯಿ "ಗ್ಯಾಸ್ ಚಾರ್ಜ್" ವಸೂಲಿ ಮಾಡುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಹೋಟೆಲ್ ಮ್ಯಾನೇಜರ್ ಹೇಳೋದೇನು?
ಕೃಷ್ಣ ವೈಭವ ಹೋಟೆಲ್ನಲ್ಲಿ ಮೆನುವಿನ ಎಲ್ಲಾ ತಿನಿಸುಗಳ ಮೇಲೆ 5ರಿಂದ 10 ರೂಪಾಯಿವರೆಗೆ ದರ ಏರಿಕೆ ಮಾಡಲಾಗಿದೆ. ಇದಕ್ಕೆ ಕಮರ್ಷಿಯಲ್ ಗ್ಯಾಸ್ ಕೊರತೆ ಮತ್ತು ಪರ್ಯಾಯ ಇಂಧನಗಳ ವೆಚ್ಚವೇ ಕಾರಣ ಎಂದು ಹೋಟೆಲ್ ಮ್ಯಾನೇಜ್ಮೆಂಟ್ ತಿಳಿಸಿದೆ.
ಹೋಟೆಲ್, ಟಿಫಿನ್ ಸೆಂಟರ್ಗಳು ಮತ್ತು ಸಣ್ಣ ಮೆಸ್ ಮಾಲೀಕರು ಅಡುಗೆ ಕೆಲಸವನ್ನು ಕಡಿಮೆ ಮಾಡುತ್ತಿದ್ದಾರೆ. ಇನ್ನೂ ಕೆಲವೆಡೆ ಅಡುಗೆಮನೆಯನ್ನೇ ಮುಚ್ಚುವ ಪರಿಸ್ಥಿತಿ ಬಂದಿದೆ. ಈ ಬಿಕ್ಕಟ್ಟು ಕೇವಲ ರೆಸ್ಟೋರೆಂಟ್ಗಳಿಗೆ ಸೀಮಿತವಾಗಿಲ್ಲ. ಸ್ವೀಟ್ ಶಾಪ್ಗಳು ಮತ್ತು ಪಿಜಿಗಳಲ್ಲಿಯೂ ಊಟದ ಸೌಲಭ್ಯಗಳಿಗೆ ತೊಂದರೆಯಾಗಿದೆ.
ಗ್ರಾಹಕರ ಪರವಾಗಿ ಸರ್ಕಾರದ ಭರವಸೆ
ಸರ್ಕಾರವು ಈ ಪೂರೈಕೆ ಕೊರತೆಯನ್ನು ನಿಭಾಯಿಸಲು ಪ್ರಯತ್ನಿಸುತ್ತಿದೆ. ಆದರೂ, ಹೋಟೆಲ್ ಮಾಲೀಕರು ಎಲ್ಪಿಜಿ ಲಭ್ಯತೆ ಸುಸ್ಥಿರವಾಗದಿದ್ದರೆ ಮುಂದಿನ ದಿನಗಳಲ್ಲಿ ಆಹಾರದ ದರಗಳು ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿದ್ದಾರೆ. ಒಟ್ಟಾರೆಯಾಗಿ ಹೇಳುವುದಾದರೆ, ಅಡುಗೆ ಅನಿಲದ ಕೊರತೆಯು ಹೋಟೆಲ್ ಉದ್ಯಮದಲ್ಲಿ ದೊಡ್ಡ ಬದಲಾವಣೆಯನ್ನು ತಂದಿದ್ದು, ಗ್ರಾಹಕರು ಹೋಟೆಲ್ಗಳಲ್ಲಿ ದುಬಾರಿ ದರವನ್ನು ಪಾವತಿಸುವಂತಾಗಿದೆ.
-
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications