ಸೈನಿಕರಿಗಾಗಿ 1 ಕೋಟಿ ಕೊಟ್ಟರು ಎಸ್ ಬಿಐ ನಿವೃತ್ತ ಉದ್ಯೋಗಿ
ಗುಜರಾತ್ ನ ಭಾವ್ ನಗರದ ನಿವೃತ್ತ ಎಸ್ ಬಿಐ ಉದ್ಯೋಗಿ ಜನಾರ್ದನ್ ಭಟ್ ತಮ್ಮ ಇಡೀ ಜೀವನದ ದುಡಿಮೆ ಒಂದು ಕೋಟಿ ರುಪಾಯಿಯನ್ನು ಭಾರತೀಯ ಸೇನೆಗೆ ನೀಡಿದ್ದಾರೆ. ಸೈನಿಕರ ಕುಟುಂಬದ ಕಲ್ಯಾಣಕ್ಕಾಗಿ ಇದು ಬಳಕೆಯಾಗಲಿ ಎಂಬುದು ಅವರ ಅಪೇಕ್ಷೆ
ಗಾಂಧೀನಗರ, ಮೇ 8: ಗುಜರಾತ್ ನ ಭಾವ್ ನಗರ್ ನ ನಿವೃತ್ತ ಬ್ಯಾಂಕ್ ನೌಕರರೊಬ್ಬರ ಮಹತ್ಕಾರ್ಯ ಸಾಮಾಜಿಕ ಜಾಲ ತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಆ ನಿವೃತ್ತ ನೌಕರರು ಮಾಡಿದ ಕೆಲಸ ಅಷ್ಟೊಂದು ಮಹತ್ವದ್ದಾ, ಅದೇನಪ್ಪಾ ಅಂತೀರಾ? ಎಸ್ ಬಿಐನ ನಿವೃತ್ತ ಕ್ಲರ್ಕ್ ಆದ ಜನಾರ್ದನ್ ಭಟ್ ಅವರು ಸೈನಿಕರ ಕುಟುಂಬಗಳ ಕಲ್ಯಾಣಕ್ಕಾಗಿ ಭಾರತೀಯ ಸೇನೆಗೆ ಒಂದು ಕೋಟಿ ರುಪಾಯಿ ನೀಡಿದ್ದಾರೆ.
ಜನಾರ್ದನ್ ಭಟ್ ದಂಪತಿಗೆ ಮಕ್ಕಳಿಲ್ಲ. ಆದ್ದರಿಂದ ತಮ್ಮ ಜೀವಮಾನದ ದುಡಿಮೆಯನ್ನೆಲ್ಲ ಸೈನಿಕರ ಕುಟುಂಬಗಳ ಕಲ್ಯಾಣಕ್ಕಾಗಿ ನೀಡಲು ನಿರ್ಧರಿಸಿದ್ದಾರೆ. "ನನಗೆ ಮಕ್ಕಳಿಲ್ಲ. ಆದರೆ ದೇಶದ ಗಡಿಯಲ್ಲಿ ಹೋರಾಡುತ್ತಿರುವ ಸೈನಿಕರು ನನ್ನ ಮಕ್ಕಳಿದ್ದ ಹಾಗೆ. ಅವರಿಗೆ ಹಾಗೂ ಅವರ ಕುಟುಂಬಕ್ಕೆ ಏನಾದರೂ ಅನುಕೂಲ ಮಾಡಿಕೊಡುವುದು ನನ್ನ ಜವಾಬ್ದಾರಿ" ಎಂದಿದ್ದಾರೆ ಜನಾರ್ದನ್ ಭಟ್.[ಪಾಕ್ ಬಂಕರ್ ದ್ವಂಸ: ಟ್ವಿಟ್ಟರ್ ನಲ್ಲಿ ಹರ್ಷದ ಹೊಳೆ]

ವರದಿಗಳ ಪ್ರಕಾರ ಈ ಹಿರಿಯ ವ್ಯಕ್ತಿ ಜೀವನದುದ್ದಕ್ಕೂ ಒಳ್ಳೆತನದಿಂದಾಗಿಯೇ ಹೆಸರಾಗಿದ್ದಾರೆ. ಯಾರಾದರೂ ಸಹಾಯ ಕೇಳಿ ಬಂದವರಿಗೆ ಹಸ್ತ ಚಾಚಿದ್ದಾರೆ. ಕಾರ್ಮಿಕರ ನಾಯಕನಾಗಿಯೂ ಕೆಲಸ ನಿರ್ವಹಿಸಿದ ಜನಾರ್ದನ್ ಭಟ್, ಸಹ ಉದ್ಯೋಗಿಗಳ ಹಲವು ಸಮಸ್ಯೆಗಳನ್ನು ನಿವಾರಿಸಿದ್ದಾರೆ. ಇಂಥ ಪ್ರೀತಿ-ಅಂತಃಕರಣವುಳ್ಳ ವ್ಯಕ್ತಿಗಳ ಸಂಖ್ಯೆ ಇನ್ನೂ ಹೆಚ್ಚಾಗಲಿ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications