ಸಿಂಗೂರು ಭೂಸ್ವಾಧೀನ ರದ್ದು, ರೈತರ ಪಾಲಿಗೆ ಸಂತಸದ ದಿನ
ನವದೆಹಲಿ, ಆಗಸ್ಟ್ 31: ಟಾಟಾ ಮೋಟಾರ್ಸ್ ಕಂಪನಿಯ ಕಡಿಮೆ ವೆಚ್ಚದ ಕಾರು ನ್ಯಾನೋ ಉತ್ಪಾದ
ನಾ ಘಟಕ ಸ್ಥಾಪನೆಗಾಗಿ ಪಶ್ಚಿಮ ಬಂಗಾಲ ಸರ್ಕಾರ ಸ್ವಾದೀನ ಪಡಿಸಿಕೊಂಡಿರುವ ಭೂಮಿಯನ್ನು ರೈತರಿಗೆ ಹಿಂತಿರುಗಿಸುವಂತೆ ಸುಪ್ರೀಂಕೋರ್ಟ್ ಬುಧವಾರ ಆದೇಶ ಹೊರಡಿಸಿದೆ.
2006ರಲ್ಲಿ ಪಶ್ಚಿಮ ಬಂಗಾಳ ಸರ್ಕಾರವು ಸಿಂಗೂರಿನಲ್ಲಿ ರೈತರಿಂದ ಭೂಸ್ವಾಧೀನ ಪಡೆಸಿಕೊಂಡಿದ್ದನ್ನು ಇನ್ನು 12 ವಾರಗಳಲ್ಲಿ ರೈತರಿಗೆ ಹಿಂತಿರುಗಿಸುವಂತೆ ಸುಪ್ರೀಂಕೋರ್ಟ್ ಬುಧವಾರ ತನ್ನ ಅದೇಶದಲ್ಲಿ ಹೇಳಿದೆ.

ಸುಮಾರು 1,000 ಎಕರೆಗಳಷ್ಟು ಭೂಮಿಯನ್ನು ಪಶ್ಚಿಮ ಬಂಗಾಲ ಸರ್ಕಾರ ವಶಕ್ಕೆ ತೆಗೆದುಕೊಂಡಿತ್ತು. ಆದರೆ, ಎರಡು ವರ್ಷಗಳ ಕಾಲ ವಿವಾದ ಮುಂದುವರೆದಿದ್ದರಿಂದ ಬೇಸತ್ತ ಟಾಟಾಸಂಸ್ಥೆ ನಂತರ ಗುಜರಾತಿಗೆ ತನ್ನ ಘಟಕವನ್ನು
ವರ್ಗಾಯಿಸಿತ್ತು.
ಪಶ್ಚಿಮ ಬಂಗಾಲದಲ್ಲಿ ಎಡರಂಗ ಆಡಳಿತ ಕಾಲದಲ್ಲಿದ್ದಲ್ಲಿ ಟಾಟಾ ಕಂಪನಿಗಾಗಿ ಭೂ ಸ್ವಾಧೀನ ಮಾಡಲಾಗಿತ್ತು. ಆಗ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಭಾರಿ ಪ್ರತಿಭಟನೆಗಳು ನಡೆಸಲಾಗಿತ್ತು. ಅಕ್ರಮವಾಗಿ ರೈತರ ಭೂಮಿಯನ್ನು ಕಸಿದುಕೊಳ್ಳಲಾಗಿದೆ. ಘಟಕ ಸ್ಥಾಪನೆಯಾಗದಿದ್ದ ಮೇಲೆ ಭೂಮಿಯನ್ನು ಏಕೆ ಹಿಂತಿರುಗಿಸಿಲ್ಲ ಎಂದು ಕೋರ್ಟ್ ಪ್ರಶ್ನಿಸಿದೆ.
ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್, ಪಶ್ಚಿಮ ಬಂಗಾಲ ಸರ್ಕಾರದ ಪರ ತೀರ್ಪು ನೀಡಿತ್ತು. ಆದರೆ, ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಲಾಗಿತ್ತು. ಇದರ ತೀರ್ಪು ಬುಧವಾರ ಹೊರಬಂದಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications