'ಪ್ರತಿಯೊಂದಕ್ಕೂ ಬಿಜೆಪಿಯನ್ನು ದೂರುವುದನ್ನು ಬಿಡಿ'
ಬೆಂಗಳೂರು, ಅಕ್ಟೋಬರ್ 19 : ಸಾಹಿತಿಗಳು ಪ್ರಶಸ್ತಿ ವಾಪಸ್ ಕೊಟ್ಟರು, ಗೋಮಾಂಸದ ವಿಚಾರದಲ್ಲಿ ಗಲಾಟೆ ನಡೆಯಿತು. ಇವು ಇಂದಿನ ದಿನಗಳಲ್ಲಿ ದೇಶದ ದಿನಪತ್ರಿಕೆಗಳ ಮುಖಪುಟ ಸುದ್ದಿಗಳಾಗುತ್ತಿವೆ. ಪ್ರತಿಪಕ್ಷಗಳು ಇದೇ ವಿಚಾರವನ್ನು ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುತ್ತಿವೆ.
ಇದೇ ವಿಚಾರವನ್ನು ಬಿಜೆಪಿಯ ಮುಂದಿಟ್ಟರೆ ಈ ಘಟನೆಗಳು ನಡೆದಿದ್ದು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಅಲ್ಲ ಎಂದು ಪಕ್ಷ ಸಮರ್ಥನೆ ನೀಡುತ್ತದೆ. ಇಂತಹ ಘಟನೆಗಳಿಗೆ ನೀವು ಪ್ರಧಾನಿ ಅವರನ್ನು ಹೇಗೆ ದೂಷಿಸುತ್ತೀರಿ? ಎಂದು ಬಿಜೆಪಿ ವಕ್ತಾರ ಜಿ.ಎಲ್.ವಿ.ರಾವ್ ಪ್ರಶ್ನೆ ಮಾಡುತ್ತಾರೆ. [ಕಲಬುರ್ಗಿ ಹತ್ಯೆ : ಕಾಂಗ್ರೆಸ್ ಮೌನಕ್ಕೆ ಕಾರಣವೇನು?]

ಒನ್ ಇಂಡಿಯಾ ಜೊತೆ ಮಾತನಾಡಿರುವ ಜಿ.ಎಲ್.ವಿ.ರಾವ್ ಅವರು ಈ ಎರಡೂ ಘಟನೆಗಳ ಕುರಿತು ಮಾತನಾಡಿದ್ದಾರೆ. 'ರಾಜ್ಯಗಳ ಕಾನೂನು ಸುವ್ಯವಸ್ಥೆ ಬಗ್ಗೆ ನಾವು ಹೇಗೆ ಪ್ರತಿಕ್ರಿಯೆ ನೀಡಲು ಸಾಧ್ಯ?' ಎಂದು ಅವರು ಪ್ರಶ್ನಿಸಿದ್ದಾರೆ. [ಸೆರೆಸಿಕ್ಕರು ದಾದ್ರಿ ಗೋಮಾಂಸ ಪ್ರಕರಣ ಆರೋಪಿಗಳು]
ಕಾನೂನು ಸುವ್ಯವಸ್ಥೆ ರಾಜ್ಯದ ವಿಷಯ : 'ದಾದ್ರಿ ಘಟನೆ ಮತ್ತು ಕಲಬುರ್ಗಿ ಅವರ ಹತ್ಯೆಯ ಬಗ್ಗೆ ಪ್ರಧಾನಿ ಈಗಾಗಲೇ ಪ್ರತಿಕ್ರಿಯೆ ನೀಡಿದ್ದು, ಘಟನೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಘಟನೆಗಳು ಬಿಜೆಪಿಯ ವೈಫಲ್ಯ ಹೇಗಾಗುತ್ತದೆ? ಎಂದು ತಿಳಿದಿಲ್ಲ. ಈ ಘಟನೆ ನಡೆದಿರುವ ರಾಜ್ಯಗಳಲ್ಲಿ ಬಿಜೆಪಿ ಆಡಳಿತದಲ್ಲಿಲ್ಲ. ರಾಜ್ಯದ ಕಾನೂನು ಸುವ್ಯವಸ್ಥೆ ಆ ರಾಜ್ಯದ ಆಂತರಿಕ ವಿಚಾರವಾಗಿದೆ' ಎಂದು ರಾವ್ ಹೇಳಿದ್ದಾರೆ.
'ಚರ್ಚ್ ದಾಳಿಗಳು ನಡೆದಾಗಲೂ ಬಿಜೆಪಿಯ ಮೇಲೆ ಆರೋಪ ಮಾಡಲಾಗುತ್ತಿತ್ತು. ಆದರೆ, ಆ ಬಗ್ಗೆ ವಿವರವಾದ ತನಿಖೆ ನಡೆದ ನಂತರ ಎಲ್ಲವೂ ಬಯಲಾಯಿತು. ಆರೋಪ ಮಾಡುವುದು ಮತ್ತು ನೈಜತೆ ಎರಡೂ ಬೇರೆ-ಬೇರೆಯಾದದ್ದು. ದಾದ್ರಿ ಘಟನೆ ದುರಾದೃಷ್ಟಕರ, ಸಮಾಜವಾದಿ ಪಕ್ಷ ಇದನ್ನು ಬಿಜೆಪಿ ಮೇಲೆ ಆರೋಪ ಮಾಡಲು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ'.
ಆಗ ಏಕೆ ಸುಮ್ಮನಿದ್ದರು? : 'ಸಾಹಿತಿಗಳು ಪ್ರಶಸ್ತಿಗಳನ್ನು ವಾಪಸ್ ಕೊಡುವುದು ಕತ್ತಲಲ್ಲಿ ಬಾಕ್ಸಿಂಗ್ ಮಾಡಿದಂತೆ. ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಇಂತಹ ಘಟನೆಗಳು ನಡೆದಿವೆ. ಆಗ ಸಾಹಿತಿಗಳು ಏಕೆ ಸುಮ್ಮನಿದ್ದರು. ಈಗ ಮಾತ್ರ ಏಕೆ ಆರೋಪ ಮಾಡುತ್ತಿದ್ದಾರೆ?' ಎಂದು ರಾವ್ ಪ್ರಶ್ನಿಸಿದ್ದಾರೆ.
'ಈ ಘಟನೆಗಳ ಕುರಿತು ಪಕ್ಷದ ಕೆಲವು ನಾಯಕರು ಹೇಳಿಕೆ ನೀಡಿದ್ದಾರೆ. ಅದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಅದು ಪಕ್ಷದ ನಿಲುವಿಗೆ ವಿರುದ್ಧವಾಗಿರುವುದರಿಂದಲೇ ಅಂತಹ ನಾಯಕರಿಗೆ ನೋಟಿಸ್ ಜಾರಿಗೊಳಿಸಲಾಗಿದೆ' ಎಂದು ರಾವ್ ತಿಳಿಸಿದ್ದಾರೆ.
-
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್












Click it and Unblock the Notifications