ಶಶಿಕಲಾರಿಂದ ಸುಪ್ರೀಂ ತೀರ್ಪು ಮರುಪರಿಶೀಲನಾ ಅರ್ಜಿ?
ಸುಪ್ರೀಂ ತೀರ್ಪು ಹೊರಬಿದ್ದ ನಂತರವೂ ಧರ್ಮಕ್ಕೆ ಜಯ ಸಿಕ್ಕೇಸಿಗುತ್ತದೆ ಎಂದಿರುವ ಶಶಿಕಲಾ ಅವರ ಹೇಳಿಕೆಯಿಂದ ತೀರ್ಪು ಪುನರ್ ಪರಿಶೀಲನಾ ಅರ್ಜಿ ಸಲ್ಲಿಕೆಯ ಸೂಚನೆ.
ನವದೆಹಲಿ, ಫೆಬ್ರವರಿ 14: ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತಮ್ಮ ವಿರುದ್ಧ ನೀಡಿರುವ ತೀರ್ಪನ್ನು ಮರುಪರಿಶೀಲಿಸುವಂತೆ ಎಐಡಿಎಂಕೆ ನಾಯಕಿ ಶಶಿಕಲಾ ಅವರು ಸರ್ವೋಚ್ಛ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ.
ಅಕ್ರಮ ಆಸ್ತಿ ಪ್ರಕರಣದಲ್ಲಿ ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್, ಶಶಿಕಲಾ ಹಾಗೂ ಈ ಪ್ರಕರಣದ ಸಹ ಆರೋಪಿಗಳಾದ ಇಳವರಸಿ ಹಾಗೂ ಸುಧಾಕರನ್ ಅವರಿಗೆ ತಲಾ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದೆ.[LIVE: ಅಂತಿಮವಾಗಿ ಧರ್ಮಕ್ಕೆ ಗೆಲುವಾಗಲಿದೆ: ಶಶಿಕಲಾ]
ತೀರ್ಪು ಪ್ರಕಟವಾದ ಹಿನ್ನೆಲೆಯಲ್ಲಿ ಚೆನ್ನೈನ ಗೋಲ್ಡನ್ ಬೇ ರೆಸಾರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿರುವ ಶಶಿಕಲಾ, ''ತೀರ್ಪು ಆಘಾತ ತಂದಿಲ್ಲ. ಸತ್ಯಕ್ಕೆ ಎಂದಿಗೂ ಜಯ ಇದ್ದೇ ಇರುತ್ತದೆ. ಈ ಹಿಂದೆಯೂ ಇಂಥ ಹಲವಾರು ಕಷ್ಟಗಳನ್ನು ಎದುರಿಸಿದ್ದೇನೆ. ಮುಂದೆಯೂ ಎದುರಿಸುತ್ತೇನೆ'' ಎಂದು ತಿಳಿಸಿದ್ದಾರೆ.[ಶಶಿಕಲಾಗೆ ಶಿಕ್ಷೆ ಪ್ರಕಟಿಸಿದ ನ್ಯಾಯಮೂರ್ತಿಗಳು ಹೇಳಿದ್ದೇನು?]
ಇದು, ಮುಂದಿನ ದಿನಗಳಲ್ಲಿ ಅವರು ಸುಪ್ರೀಂ ಕೋರ್ಟ್ ಗೆ ತೀರ್ಪು ಪರಿಶೀಲನಾ ಅರ್ಜಿಯನ್ನು ಸಲ್ಲಿಸುವ ಸೂಚನೆಯನ್ನು ನೀಡಿದೆ.