ಸಿಬಿಎಸ್ಇ ಟಾಪರ್ ಮೇಲೆ ಅತ್ಯಾಚಾರ: ಯೋಧ ಸೇರಿ ಎಲ್ಲಾ ಆರೋಪಿಗಳ ಬಂಧನ
ಚಂಡೀಗಢ, ಸೆಪ್ಟೆಂಬರ್ 24: ಸಿಬಿಎಸ್ಇ ಟಾಪರ್ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಧ ಸೇರಿದಂತೆ ಎಲ್ಲಾ ಪ್ರಮುಖ ಆರೋಪಿಗಳನ್ನು ಬಂಧಿಸಿರುವುದಾಗಿ ಹರ್ಯಾಣ ಪೊಲೀಸರು ಪ್ರಕಟಿಸಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಪಂಕಜ್ ಹಾಗೂ ಮನೀಶ್ ಎಂಬುವವರನ್ನು ಮಹೇಂದ್ರಘರ್ ಜಿಲ್ಲೆಯ ಸತ್ನಾಲಿ ಎಂಬಲ್ಲಿ ಬಂಧಿಸಲಾಗಿದೆ, ಇವರಿಬ್ಬರು ಕಳೆದ 12 ದಿನಗಳಿಂದ ತಲೆ ಮರೆಸಿಕೊಂಡಿದ್ದರು. ಕಳೆದ ವಾರ ಪ್ರಮುಖ ಆರೋಪಿ ನಿಶು ಫೋಗಟ್ ಅವರನ್ನು ವಶಕ್ಕೆ ಪಡೆದು, ವಿಚಾರಣೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.
ಸೆಪ್ಟೆಂಬರ್ 12ರಂದು 19 ವರ್ಷ ವಯಸ್ಸಿನ ಯುವತಿ, ಮಹೇಂದ್ರಘರ್ ಜಿಲ್ಲೆಯ ಕಾನಿನ ಎಂಬಲ್ಲಿ ಕೋಚಿಂಗ್ ಕ್ಲಾಸ್ ಗೆ ತೆರಳುವಾಗ ಈ ಮೂವರು ಆರೋಪಿಗಳು ಆಕೆಯನು ಕಿಡ್ನಾಪ್ ಮಾಡಿದ್ದಾರೆ. ನಂತರ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ತಂಪು ಪಾನೀಯದಲ್ಲಿ ಮತ್ತು ಬರುವ ಮಾತ್ರೆಗಳನ್ನು ಬೆರೆಸಿ, ಬಲವಂತವಾಗಿ ಕುಡಿಯುವಂತೆ ಮಾಡಿದ್ದಾರೆ. ನಂತರ ಸಾಮೂಹಿಕ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು

ಈ ಕುರಿತು ಹರಿಯಾಣ ಪೊಲೀಸ್ ಮುಖ್ಯಸ್ಥ ಬಿ ಎಸ್ ಸಂಧು ಮಾತನಾಡಿ, ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಭಾರತೀಯ ಸೇನೆ ಯೋಧ ಪಂಕಜ್ (ರಾಜಸ್ಥಾನದ ಕೋಟಾದಲ್ಲಿ ನಿಯೋಜನೆಗೊಂಡಿದ್ದರು) ಹಾಗೂ ಆತನ ಸ್ನೇಹಿತ ಮನಿಷ್ನನ್ನು ಬಂಧಿಸಲಾಗಿದೆ. ಮೂವರು ಆರೋಪಿಗಳಲ್ಲದೆ, ಅತ್ಯಾಚಾರ ನಡೆದ ಮನೆಯ ಮಾಲೀಕ ದೀನ್ ದಯಾಳ್ ಹಾಗೂ ಆರ್ ಎಂ ಪಿ ವೈದ್ಯ ಸಂಜೀವ್ ಅವರನ್ನು ಬಂಧಿಸಲಾಗಿದೆ.
ಬಿಜೆಪಿ ಆಡಳಿತವಿರುವ ಹರ್ಯಾಣದಲ್ಲಿ ನಡೆದ ಈ ಸಾಮೂಹಿಕ ಅತ್ಯಾಚಾರ ಪ್ರಕರಣ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಸಿಎಂ ಮನೋಹರ್ ಖಟ್ಟರ್ ಅವರ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications