Rice mill building collapse: ಕರ್ನಾಲ್ನಲ್ಲಿ ರೈಸ್ ಮಿಲ್ ಕಟ್ಟಡ ಕುಸಿದು 4 ಸಾವು, 20 ಮಂದಿಗೆ ಗಾಯ
ಹರಿಯಾಣದ ಕರ್ನಾಲ್ನಲ್ಲಿ ಭೀಕರ ದುರಂತವೊಂದು ನಡೆದಿದೆ. ಇಲ್ಲಿ ಮೂರು ಅಂತಸ್ತಿನ ರೈಸ್ ಮಿಲ್ ಕಟ್ಟಡ ಕುಸಿದು ಬಿದ್ದು ನಾಲ್ಕು ಜನ ಸಾವನ್ನಪ್ಪಿದ್ದಾರೆ, 20 ಮಂದಿ ಗಾಯಗೊಂಡಿದ್ದಾರೆ. ಅನೇಕ ಕಾರ್ಮಿಕರು ಕಟ್ಟಡದ ಅವಶೇಷಗಳಡಿಯಲ್ಲಿ ಹೂತುಹೋಗಿರುವ ಭೀತಿ ಇದೆ. ಮಾಹಿತಿ ಪ್ರಕಾರ, ಇಲ್ಲಿ ಸುತ್ತಲು ಕೆಲಸ ಮಾಡುವ ಕಾರ್ಮಿಕರು ಈ ಕಟ್ಟಡದೊಳಗೆ ಮಲಗಿದ್ದರು. ಈ ವೇಳೆ ಏಕಾಏಕಿ ಕಟ್ಟಡ ಕುಸಿದು ಬಿದ್ದಿದೆ.
ಘಟನೆ ಕುರಿತು ಮಾಹಿತಿ ಪಡೆದು ಅಗ್ನಿಶಾಮಕ ದಳ ಹಾಗೂ ಪೊಲೀಸ್ ತಂಡ ಇಲ್ಲಿಗೆ ಆಗಮಿಸಿದೆ. ತಕ್ಷಣ ಕಾರ್ಮಿಕರನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್ ಕೂಡ ಸ್ಥಳಕ್ಕೆ ತಲುಪಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿರುವ ಕಾರ್ಮಿಕರನ್ನು ಹೊರ ತೆಗೆಯಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ವರದಿಗಳ ಪ್ರಕಾರ, ನೂರಾರು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಹೂತುಹೋಗಬಹುದು. ಆದರೆ, ಈ ಅಪಘಾತದಲ್ಲಿ ಕಾರ್ಮಿಕರು ಸಾವನ್ನಪ್ಪಿದ್ದಾರೆಯೇ ಅಥವಾ ಇಲ್ಲವೇ ಎಂಬ ಮಾಹಿತಿ ಇದುವರೆಗೆ ಬಹಿರಂಗವಾಗಿಲ್ಲ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಅವಶೇಷಗಳಿಂದ ಎರಡು ದೇಹಗಳನ್ನು ಹೊರತೆಗೆಯಲಾಗಿದೆ. ಹಲವಾರು ಆಂಬ್ಯುಲೆನ್ಸ್ಗಳು ಸ್ಥಳದಲ್ಲಿ ಮುಕ್ಕಾಮ್ ಹೂಡಿವೆ. ಅಧಿಕ ಸಂಖ್ಯೆಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯ ಸಿಬ್ಬಂದಿಗಳು ಸ್ಥಳದಲ್ಲಿ ಕಾರ್ಯಚರಣೆ ನಡೆಸಿದ್ದಾರೆ.
ಈ ಅವಘಡದಲ್ಲಿ 24 ಮಂದಿ ಸಿಲುಕಿದ್ದು, ಈ ಪೈಕಿ 20 ಮಂದಿ ಗಾಯಗೊಂಡಿದ್ದಾರೆ ಮತ್ತು 4 ಮಂದಿ ಸಾವನ್ನಪ್ಪಿದ್ದಾರೆ ಎಂದು ಕರ್ನಾಲ್ ಡಿಎಂ ಅನೀಶ್ ಯಾದವ್ ತಿಳಿಸಿದ್ದಾರೆ. ಘಟನೆ ನಡೆದಾಗ ಕಟ್ಟಡದೊಳಗೆ ಸುಮಾರು 150 ಕಾರ್ಮಿಕರು ಇದ್ದರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.
#WATCH | Haryana: Several rice mill workers feared being trapped under debris after a three-storeyed rice mill building collapsed in Karnal. Workers used to sleep inside the building. Fire brigade, police and ambulance have reached the spot. Rescue operations underway. pic.twitter.com/AFzN9HDPYw
— ANI (@ANI) April 18, 2023
ಕಟ್ಟಡದಲ್ಲಿ ಲೋಪವಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಈ ಕುರಿತು ತನಿಖೆ ನಡೆಸಲು ಸಮಿತಿ ರಚಿಸಲಾಗಿದೆ. ರೈಸ್ ಮಿಲ್ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಳಿಸರು ತಿಳಿಸಿದ್ದಾರೆ.
ಅಪಘಾತದಲ್ಲಿ 4 ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ ಎಂದು ಕರ್ನಾಲ್ ಎಸ್ಪಿ ಶಶಾಂಕ್ ಕುಮಾರ್ ತಿಳಿಸಿದ್ದಾರೆ. ನಾವು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದೇವೆ. ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ತಂಡಗಳೂ ಇಲ್ಲಿಗೆ ತಲುಪುತ್ತಿವೆ. ಈಗ ಕಾಣೆಯಾದವರ ಕಾರ್ಮಿಕರ ಪಟ್ಟಿಯನ್ನು ಪರಿಶೀಲಿಸಿದ್ದೇವೆ ಎಂದು ಶಶಾಂಕ್ ಕುಮಾರ್ ಹೇಳಿದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications