ಖಾಸಗಿತನ ಕುರಿತ ಸುಪ್ರೀಂ ತೀರ್ಪು, ಆಧಾರ್ ಕತೆ ಏನು?
ನವದೆಹಲಿ, ಆಗಸ್ಟ್ 24: 'ಖಾಸಗಿತನದ ಹಕ್ಕು ಮೂಲಭೂತ ಹಕ್ಕು' ಎಂದು ಸುಪ್ರೀಂಕೋರ್ಟ್ ಗುರುವಾರದಂದು ಮಹತ್ವದ ತೀರ್ಪು ನೀಡಿದೆ. ಸರ್ಕಾರಿ ಯೋಜನೆಗಳಿಗೆ ಆಧಾರ್ ಕಡ್ಡಾಯ ಎಂಬುದನ್ನು ಪ್ರಶ್ನಿಸಿ ಅರ್ಜಿ ಹಾಕಲಾಗಿತ್ತು. 9 ನ್ಯಾಯಮೂರ್ತಿಗಳ ಸಾಂವಿಧಾನಿಕ ನ್ಯಾಯಪೀಠದಿಂದ ಒಮ್ಮತ ತೀರ್ಪು ನೀಡಿದ್ದಾರೆ. ಹೀಗಾಗಿ, ಆಧಾರ್ ಕಾರ್ಡ್ ಕತೆ ಏನಾಗುತ್ತದೆ? ಎಂಬ ಪ್ರಶ್ನೆ ಎದ್ದಿದೆ.
ಕೇಂದ್ರ ಸರ್ಕಾರದ ಬಹುತೇಕ ಎಲ್ಲಾ ಯೋಜನೆಗಳ ಜತೆ, ಬ್ಯಾಂಕ್, ಪ್ಯಾನ್ ಕಾರ್ಡ್ ಸೇರಿದಂತೆ ಎಲ್ಲಾ ಹಣಕಾಸು ವ್ಯವಹಾರಕ್ಕೂ
ಆಧಾರ್ ಕಾರ್ಡ್ ಕಡ್ಡಾಯ ಎಂಬುದನ್ನು ಪ್ರಶ್ನಿಸಿ ಸುಪ್ರಿಂ ಕೋರ್ಟ್ ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿತ್ತು.

ಇದು ವೈಯಕ್ತಿಕ ಹಕ್ಕುಗಳ ಉಲ್ಲಂಘನೆ ಎಂದು ಅರ್ಜಿಯಲ್ಲಿ ಹೇಳಲಾಗಿತ್ತು. ಮುಖ್ಯವಾಗಿ ಬೆರಳಚ್ಚು ಮತ್ತು ಕಣ್ಣಿನ ಸ್ಕ್ಯಾನ್ ಮಾಡುವ ಮೂಲಕ ವೈಯಕ್ತಿಕ ಹಕ್ಕುಗಳ ಉಲ್ಲಂಘನೆ ನಡೆದಿದೆ ಎಂದು ಅರ್ಜಿದಾರರು ಹೇಳಿದ್ದಾರೆ.
ಈ ಹಿಂದೆ 1954ರಲ್ಲಿ 8 ನ್ಯಾಯಮೂರ್ತಿಗಳ ಪೀಠ ಹಾಗೂ 1962ರಲ್ಲಿ 6 ನ್ಯಾಯಮೂರ್ತಿಗಳ ಪೀಠ ಖಾಸಗಿತನದ ಹಕ್ಕು ಎಂಬುದೇ ಇಲ್ಲ ಎಂದು ಹೇಳಿತ್ತು. ಇದು ಸರಿಯೋ ತಪ್ಪೋ ಎಂಬುದನ್ನು 9 ನ್ಯಾಯಮೂರ್ತಿಗಳ ಪೀಠ ತೀರ್ಮಾನಿಸಿದೆ.
ಕಣ್ಣಿನ ಸ್ಕ್ಯಾನ್ ಮತ್ತು ಬೆರಳಚ್ಚುಗಳನ್ನು ಸರಕಾರವೊಂದು ಪಡೆದುಕೊಳ್ಳುವುದು ಖಾಸಗಿತನದ ಹಕ್ಕಿನ ಉಲ್ಲಂಘನೆಯಾಗುತ್ತದೆ ಎಂದು ಅರ್ಜಿದಾರರು ವಾದಿಸಿದ್ದರು. ಈ ಸಂಬಂಧ 2015ರಲ್ಲಿ ವಾದ ಮಂಡಿಸಿದ್ದ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ಭಾರತೀಯರಿಗೆ ಖಾಸಗಿತನ ಎಂಬ ಮೂಲಭೂತ ಹಕ್ಕೇ ಇಲ್ಲ ಎಂದು ವಾದಿಸಿದ್ದರು.
ಫೋನ್ ಮಾಹಿತಿ ಹಂಚಿಕೆ: ಗ್ರಾಹಕರ ಖಾಸಗಿ ಮಾಹಿತಿಯನ್ನು ಸೇವಾದಾರರು ಇತರೆ ಸೇವಾ ಸಂಸ್ಥೆಗಳಿಗೆ ಹಂಚಿಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಆದರೆ, ಆರ್ಟಿಕಲ್ 21ರಡಿ ಸಂವಿಧಾನದಲ್ಲಿ ಖಾಸಗಿತನಕ್ಕೆ ರಕ್ಷಣೆ ಇದೆ, ಮೂಲಭೂತ ಹಕ್ಕು ಎಂದಾದರೆ, ಆಧಾರ್ ಕಾರ್ಡ್ ಕಡ್ಡಾಯದ ಬಗ್ಗೆ ಕುತೂಹಲ ಮೂಡಿದ್ದು, ಪಂಚ ಸದಸ್ಯರ ನ್ಯಾಯಪೀಠದಲ್ಲಿ ಈ ಬಗ್ಗೆ ತೀರ್ಮಾನವಾಗಲಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications