ಉತ್ತರಾಖಂಡ ಸಿಎಂ "ರಿಪ್ಡ್ ಜೀನ್ಸ್" ವಿವಾದಾತ್ಮಕ ಹೇಳಿಕೆಗೆ ವಿರೋಧದ ಅಲೆ
ನವದೆಹಲಿ, ಮಾರ್ಚ್ 18: "ಅರೆಬರೆ ಹರಿದ ಜೀನ್ಸ್ ತೊಟ್ಟ ಮಹಿಳೆ ಸಮಾಜಕ್ಕೆ ಯಾವ ಸಂದೇಶ ನೀಡಬಲ್ಲಳು" ಎಂದು ಗುರುವಾರ ಉತ್ತರಾಖಂಡ ನೂತನ ಸಿಎಂ ತೀರಥ್ ಸಿಂಗ್ ರಾವತ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ಈ ಹೇಳಿಕೆ ವಿರೋಧಿಸಿ ಸಾಮಾಜಿಕ ಜಾಲತಾಣದಲ್ಲಿ ವಿರೋಧದ ಅಲೆಯೇ ಸೃಷ್ಟಿಯಾಗಿದೆ.
ರಿಪ್ಡ್ ಜೀನ್ಸ್ ತೊಡುವ ಮಹಿಳೆಯರ ಕುರಿತು ಸಿಎಂ ಈ ಹೇಳಿಕೆ ನೀಡಿದ ಬೆನ್ನಲ್ಲೇ ಟ್ವಿಟ್ಟರ್ನಲ್ಲಿ ರಿಪ್ಡ್ ಜೀನ್ಸ್ ಟ್ರೆಂಡ್ ಶುರುವಾಗಿದೆ. ನಟಿಯರೊಳಗೊಂಡಂತೆ ಹಲವು ಮಹಿಳೆಯರು ತಾವು ರಿಪ್ಡ್ ಜೀನ್ಸ್ನಲ್ಲಿರುವ ಫೋಟೊಗಳನ್ನು ಹಂಚಿಕೊಳ್ಳುವ ಮೂಲಕ ಸಿಎಂ ಹೇಳಿಕೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಡೆಹ್ರಾಡೂನ್ನಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಉತ್ತರಾಖಂಡ ಆಯೋಗ ಮಂಗಳವಾರ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ತೀರಥ್ ಸಿಂಗ್ ರಾವತ್ ಈ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಮುಂದೆ ಓದಿ...

ಉತ್ತರಾಖಂಡ ಸಿಎಂ ಹೇಳಿದ್ದೇನು?
ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ತೀರಥ್ ಸಿಂಗ್ ರಾವತ್, "ವಿಮಾನದಲ್ಲಿ ನನ್ನನ್ನು ಮಹಿಳೆಯೊಬ್ಬರು ಪರಿಚಯ ಮಾಡಿಕೊಂಡರು. ತಾವು ಎನ್ಜಿಒ ನಡೆಸುತ್ತಿರುವುದಾಗಿ ತಿಳಿಸಿದರು. ಅರೆಬರೆ ಹರಿದ ಜೀನ್ಸ್ ತೊಟ್ಟ ಆ ಮಹಿಳೆ ಎನ್ಜಿಒ ನಡೆಸುತ್ತಾರೆ ಎಂಬುದನ್ನು ಕೇಳಿ ನನಗೆ ಶಾಕ್ ಆಯಿತು. ಆಕೆ ಸಮಾಜಕ್ಕೆ, ಮಕ್ಕಳಿಗೆ ಯಾವ ರೀತಿ ಸಂದೇಶ ನೀಡಬಲ್ಲಳು ಎಂಬ ಕುರಿತು ಚಿಂತೆಯಾಗುತ್ತಿದೆ" ಎಂದಿದ್ದರು. ಜೊತೆಗೆ ಮಕ್ಕಳು ಕೂಡ ಮೊಣಕಾಲು ತೋರುವ ಬಟ್ಟೆಗಳನ್ನು ತೊಡುತ್ತಿದ್ದಾರೆ. ಪಾಶ್ಚಿಮಾತ್ಯರು ಭಾರತವನ್ನು ನೋಡಿ ತಮ್ಮ ದೇಹ ಮುಚ್ಚಿಕೊಳ್ಳುವುದನ್ನು ಕಲಿಯುತ್ತಿದ್ದರೆ, ಇಲ್ಲಿನವರು ನಗ್ನತೆಯನ್ನು ಕಲಿತುಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.
ಮೊಣಕಾಲು ಕಾಣುವಂಥ ಬಟ್ಟೆ ತೊಡುವುದು, ಹರಿದ ಜೀನ್ಸ್ ಧರಿಸುವುದು-ಇವೆಲ್ಲವನ್ನು ಶ್ರೀಮಂತಿಕೆ ಎಂಬಂತೆ ತೋರಿಸಿ ಇಂಥವನ್ನೇ ಮೌಲ್ಯವೆಂದು ಬಿಂಬಿಸಲಾಗುತ್ತಿದೆ ಎಂದು ಹೇಳಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ
ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ. ಮೊದಲು ಕಾಂಗ್ರೆಸ್ ಮುಖಂಡ ಸಂಜಯ್ ಜಾ ಇದನ್ನು ಟೀಕಿಸಿದ್ದು, "ಹರಿದ ಜೀನ್ಸ್ ತೊಡುವುದರಿಂದ ನಮ್ಮ ಸಂಸ್ಕೃತಿ ನಾಶವಾಗುತ್ತದೆ ಎಂದು ಉತ್ತರಾಖಂಡ ಸಿಎಂ ಹೇಳಿಕೆ ನೀಡಿದ್ದಾರೆ. ಪ್ರಿಯ ಬಿಜೆಪಿ, ಇವರು ನಿಮ್ಮ ಮುಖ್ಯಮಂತ್ರಿ. ಇದನ್ನು ಬಿಜೆಪಿ ಒಪ್ಪುತ್ತಿದೆಯೇ? ಎಂದು ಪ್ರಶ್ನಿಸಿದ್ದರು. ಇದು ಸಿಎಂ ಮಾನಸಿಕತೆಯೇ? ಈ ಆಧುನಿಕ ಭಾರತದಲ್ಲಿ ನಾವು ಎಲ್ಲಿಗೆ ಸಾಗುತ್ತಿದ್ದೇವೆ" ಎಂದು ಕೇಳಿದ್ದರು.
|
ರಾಜ್ಯ ಸಭಾ ಸಂಸದೆ ಆಕ್ರೋಶ
ಇದೀಗ ರಿಪ್ಡ್ ಜೀನ್ಸ್ ಎಂಬ ಹ್ಯಾಷ್ಟ್ಯಾಗ್ನೊಂದಿಗೆ ಹಲವು ಮಹಿಳೆಯರು ಟ್ವಿಟ್ಟರ್ನಲ್ಲಿ ತಮ್ಮ ಚಿತ್ರ ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಟಿ ಗುಲ್ ಪನಾಗ್ ಕೂಡ ಜೀನ್ಸ್ನೊಂದಿಗಿನ ಸೆಲ್ಪೀ ಕ್ಲಿಕ್ಕಿಸಿಕೊಂಡು ಹಾಕಿದ್ದಾರೆ. ರಾಜ್ಯ ಸಭಾ ಸಂಸದೆ ಹಾಗೂ ಶಿವಸೇನಾ ಮುಖಂಡೆ ಪ್ರಿಯಾಂಕಾ ಚತುರ್ವೇದಿ ಕೂಡ ಇದಕ್ಕೆ ಪ್ರತಿಕ್ರಿಯಿಸಿದ್ದು, "ದೇಶದ ಸಂಸ್ಕೃತಿ ಹಾಗೂ ಸಂಸ್ಕಾರ, ಮಹಿಳೆಯರು ಹಾಗೂ ಅವರ ಆಯ್ಕೆಗಳ ಬಗ್ಗೆ ಕುಳಿತು ತೀರ್ಮಾನಿಸುವ ಪುರುಷನಿಂದ ಪ್ರಭಾವಿತವಾಗಿರುತ್ತದೆ" ಎಂದು ಹೇಳಿದ್ದಾರೆ.

ನಿಮ್ಮ ಮನಸ್ಥಿತಿ ಬದಲಿಸಿಕೊಳ್ಳಿ ಎಂದ ಅಮಿತಾಭ್ ಮೊಮ್ಮಗಳು
ಅಮಿತಾಭ್ ಬಚ್ಚನ್ ಮೊಮ್ಮಗಳು ನವ್ಯಾ ನವೇಲಿ ನಂದಾ ಉತ್ತರಾಖಂಡ ಸಿಎಂ ಹೇಳಿಕೆಯನ್ನು ಟೀಕಿಸಿ, "ಬಟ್ಟೆ ಬದಲಿಸುವ ಮೊದಲು ನಿಮ್ಮ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳಿ" ಎಂದು ಹೇಳಿದ್ದಾರೆ. ನಿಮ್ಮ ಈ ರೀತಿಯ ಸಂದೇಶವೇ ಸಮಾಜಕ್ಕೆ ಆಘಾತಕಾರಿಯಾಗಿದೆ ಎಂದಿದ್ದಾರೆ. ಹರಿದ ಜೀನ್ಸ್ ತೊಟ್ಟ ಮಹಿಳೆಯರು ಮಕ್ಕಳನ್ನು ಹೇಗೆ ಬೆಳೆಸುತ್ತಾರೆ ಎಂದು ಕೇಳಿದ್ದೀರ. ಆದರೆ ನಿಮಗೆ ಒಳ್ಳೆ ರೀತಿ ಬೆಳೆಸಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ. ನಾನು ರಿಪ್ಡ್ ಜೀನ್ಸ್ ತೊಟ್ಟುಕೊಳ್ಳುತ್ತೇನೆ. ಧನ್ಯವಾದ, ಅದನ್ನು ತೊಡುವುದಕ್ಕೆ ನನಗೆ ಹೆಮ್ಮೆಯಿದೆ ಎಂದು ಚಿತ್ರ ಹಾಕಿದ್ದಾರೆ. ಫೆಮಿನಾ ಮಾಜಿ ಮಿಸ್ ಇಂಡಿಯಾ ಸಿಮ್ರಾನ್ ಕೌರ್ ಮುಂಡಿ ಕೂಡ ರಿಪ್ಡ್ ಜೀನ್ಸ್ ತೊಟ್ಟ ತಮ್ಮ ಫೋಟೊ ಹಂಚಿಕೊಂಡಿದ್ದಾರೆ.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ












Click it and Unblock the Notifications