Covid Cases in India : 109 ದಿನಗಳ ನಂತರ ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಳ
ಆರು ರಾಜ್ಯಗಳಾದ ಮಹಾರಾಷ್ಟ್ರ, ಗುಜರಾತ್, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ವರದಿಯಾಗುತ್ತಿವೆ.
ನವದೆಹಲಿ, ಮಾರ್ಚ್ 17: ದೇಶದಲ್ಲಿ ಇತ್ತೀಚೆಗೆ ಕೊರೊನಾ ಪ್ರಕರಣಗಳಲ್ಲಿ ಏರಿಕೆ ಕಂಡು ಬರುತ್ತಿದ್ದು, ಕೇಂದ್ರ ಆರೋಗ್ಯ ಸಚಿವಾಲಯದ ಇತ್ತೀಚಿನ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಶುಕ್ರವಾರ 796 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 109 ದಿನಗಳ ನಂತರ 5,000ರ ಗಡಿ ದಾಟಿದೆ.
ಒಂದೇ ದಿನ 796 ಪ್ರಕರಣಗಳು ದಾಖಲಾದ ಕಾರಣ ಸಕ್ರಿಯ ಪ್ರಕರಣಗಳ ಸಂಖ್ಯೆ 5,026 ಕ್ಕೆ ಏರಿದೆ, ಇದರಿಂದ ಒಟ್ಟು ವರದಿಯಾಗುವ ಸೋಂಕುಗಳ 0.01% ಹೆಚ್ಚಾಗಿದೆ. ಆದರೆ ಪ್ರಕರಣದ ಸಾವಿನ ಪ್ರಮಾಣವು 1.19% ದಾಖಲಾಗುತ್ತಿದೆ. ಈಗ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4.46 ಕೋಟಿಗೆ (4,46,93,506) ತಲುಪಿದೆ. ಒಂದೇ ದಿನ ಐದು ಸಾವುಗಳು ದಾಖಲಾಗಿದ್ದು, ಒಟ್ಟು ಸಾವಿನ ಸಂಖ್ಯೆ 5,30,795 ಕ್ಕೆ ಏರಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳು ಬಹಿರಂಗಪಡಿಸಿವೆ. ಒಟ್ಟು ಚೇತರಿಕೆಯ ಸಂಖ್ಯೆಯು 4,41,57,685 ಕ್ಕೆ ಏರಿದ್ದು ರಾಷ್ಟ್ರೀಯ ಚೇತರಿಕೆ ದರವು 98.80% ರಷ್ಟಿದೆ.

ದೈನಂದಿನ ಕೊರೊನಾ ವೈರಸ್ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿರುವುದರಿಂದ, ಆರೋಗ್ಯ ಸಚಿವಾಲಯವು ಗುರುವಾರ ಹೆಚ್ಚು ಪ್ರಕರಣಗಳನ್ನು ವರದಿ ಮಾಡುತ್ತಿರುವ ಆರು ರಾಜ್ಯಗಳಾದ ಮಹಾರಾಷ್ಟ್ರ, ಗುಜರಾತ್, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಕರ್ನಾಟಕಕ್ಕೆ ಪತ್ರ ಬರೆದಿದೆ. ಕೊರೊನಾ ಸೋಂಕಿನ ಹರಡುವಿಕೆ ತಡೆಗಟ್ಟಲು ಮತ್ತು ನಿಯಂತ್ರಿಸಲು ಮೌಲ್ಯಮಾಪನ ಆಧಾರಿತ ವಿಧಾನವನ್ನು ಅನುಸರಿಸಲು ಸೂಚಿಸಿದೆ.
ಮಹಾರಾಷ್ಟ್ರ, ಗುಜರಾತ್, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಕರ್ನಾಟಕಕ್ಕೆ ಬರೆದ ಪತ್ರದಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, "ಕೆಲವು ರಾಜ್ಯಗಳು ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ವರದಿ ಮಾಡುತ್ತಿವೆ. ರಾಜ್ಯಗಳು ಕಟ್ಟುನಿಟ್ಟಾದ ನಿಗಾ ವಹಿಸಬೇಕು. ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸಲು ಯಾವುದೇ ಕ್ಷೇತ್ರಗಳಲ್ಲಿ ಅಗತ್ಯವಿರುವ ಎಲ್ಲಾ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುವುದು ಅತ್ಯಗತ್ಯ" ಎಂದು ಹೇಳಿದ್ದರು.

ಕೋವಿಡ್ನ ಪರಿಸ್ಥಿತಿಯನ್ನು ಸೂಕ್ಷ್ಮ ಮಟ್ಟದಲ್ಲಿ ಪರೀಕ್ಷಿಸಲು ಮತ್ತು ಕೋವಿಡ್ ತ್ವರಿತ ಮತ್ತು ಪರಿಣಾಮಕಾರಿ ನಿರ್ವಹಣೆಗಾಗಿ ಅಗತ್ಯ ಕ್ರಮಗಳ ಅನುಷ್ಠಾನದ ಮೇಲೆ ಗಮನಹರಿಸುವಂತೆ ಪತ್ರದಲ್ಲಿ ಸೂಚಿಸಲಾಗಿತ್ತು. ಗುರುವಾರ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ನಾಲ್ಕು ತಿಂಗಳ ಅಂತರದ ನಂತರ ಒಂದು ದಿನದಲ್ಲಿ 700 ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಏಕಾಏಕಿ 4,623 ಕ್ಕೆ ಏರಿಕೆಯಾಗಿತ್ತು.
ಮಾರ್ಚ್ 15 ಕ್ಕೆ ಮಹಾರಾಷ್ಟ್ರವು ಒಮದು ವಾರದಲ್ಲಿ 355 ರಿಂದ 668 ಪ್ರಕರಣಗಳನ್ನು ವರದಿ ಮಾಡಿತ್ತು. ಗುಜರಾತ್ 279 ಹೊಸ ಪ್ರಕರಣಗಳೊಂದಿಗೆ 1.11% ನಷ್ಟು ಪಾಸಿಟಿವ್ ದರವನ್ನು ವರದಿ ಮಾಡಿದೆ. ಮಾರ್ಚ್ 8 ಕ್ಕೆ ತೆಲಂಗಾಣದಲ್ಲಿ 132 ಕೋವಿಡ್ ಪ್ರಕರಣಗಳಿದ್ದರೇ, ಮಾರ್ಚ್ 15 ಕ್ಕೆ 267 ಪ್ರಕರಣಗಳಿಗೆ ಏರಿಕೆಯಾತ್ತು. ತಮಿಳುನಾಡಿನಲ್ಲಿ ಒಂದು ವಾರದ ಅಂತರದಲ್ಲಿ 170 ರಿಂದ 258 ಕ್ಕೆ ಏರಿಕೆಯಾಗಿದೆ. ಕೇರಳ ಮತ್ತು ಕರ್ನಾಟಕ ಅನುಕ್ರಮವಾಗಿ 2.64% ಮತ್ತು 2.77% ಪಾಸಿಟಿವ್ ದರವನ್ನು ವರದಿ ಮಾಡಿದೆ.
ಆರೋಗ್ಯ ಸಚಿವಾಲಯದ ವೆಬ್ಸೈಟ್ ಮಾಹಿತಿ ಪ್ರಕಾರ, ಇಲ್ಲಿಯವರೆಗೆ ದೇಶದಲ್ಲಿ 220.64 ಕೋಟಿ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಆದರೂ ದೇಶಾದ್ಯಂತ ವೈರಲ್ ಇನ್ಫ್ಲುಯೆನ್ಸ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಸರ್ಕಾರವು ಎಚ್ಚರಿಕೆ ತೆಗೆದುಕೊಳ್ಳುತ್ತಿದ್ದು, ಗಂಟಲು ನೋವು ಜ್ವರ, ದೇಹನೋವು, ಆಯಾಸ ಇತ್ಯಾದಿಗಳಂತಹ ಕೋವಿಡ್ ರೋಗಲಕ್ಷಣಗಳನ್ನು ಹೋಲುವ ರೋಗಿಗಳ ಮೇಲೆ ಗಮನಹರಿಸುತ್ತಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications