ಬೆಂಗಳೂರಿನಲ್ಲಿ ವಿಪಕ್ಷಗಳ ಸಭೆಗೆ ಲಾಲು ಪ್ರಸಾದ್ ಯಾದವ್ ಬೆಂಬಲ: ಭಾಗವಹಿಸುತ್ತೇನೆ ಎಂದ ನಾಯಕ
ಪಾಟ್ನಾ, ಜುಲೈ. 06: ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ವಿರೋಧ ಪಕ್ಷಗಳು ಇದೇ ತಿಂಗಳ ಜುಲೈ 17 ಮತ್ತು 18 ರಂದು ಬೆಂಗಳೂರಿನಲ್ಲಿ ಎರಡನೇ ಸುತ್ತಿನ ಸಭೆ ನಡೆಸಲಿವೆ. ವಿರೋಧ ಪಕ್ಷಗಳ ಬೃಹತ್ ಸಮಾವೇಶಕ್ಕಾಗಿ ಬೆಂಗಳೂರಿಗೆ ತೆರಳುವುದಾಗಿ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗುರುವಾರ ಹೇಳಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಪಾಟ್ನಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲಾಲು ಪ್ರಸಾದ್ ಯಾದವ್ , 2024ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಿಂದ ನರೇಂದ್ರ ಮೋದಿ ಸರ್ಕಾರವನ್ನು ಕಿತ್ತೊಗೆಯಲು ವೇದಿಕೆ ಸಿದ್ಧಪಡಿಸಲು ಬೆಂಗಳೂರಿನಲ್ಲಿ ನಡೆಯಲಿರುವ ವಿಪಕ್ಷಗಳ ಸಮಾವೇಶಕ್ಕೆ ತೆರಳುವುದಾಗಿ ಹೇಳಿದ್ದಾರೆ.

"ರಕ್ತ ಪರೀಕ್ಷೆ ಸೇರಿದಂತೆ ನಿತ್ಯದ ವೈದ್ಯಕೀಯ ಪರೀಕ್ಷೆಗಾಗಿ ನಾನು ದೆಹಲಿಗೆ ಹೋಗುತ್ತಿದ್ದೇನೆ, ನಂತರ ನಾನು ಮತ್ತೆ ಪಾಟ್ನಾಗೆ ಬರುತ್ತೇನೆ, ನಂತರ ವಿರೋಧ ಪಕ್ಷಗಳ ಸಭೆಗಾಗಿ ಬೆಂಗಳೂರಿಗೆ ಹೋಗುತ್ತೇನೆ. 2024ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಿಂದ ನರೇಂದ್ರ ಮೋದಿ ಸರ್ಕಾರದ ಪದಚ್ಯುತಿಗೆ ವೇದಿಕೆ ಸಿದ್ಧಪಡಿಸುತ್ತೇನೆ" ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆಯಲಿರುವ ವಿರೋಧ ಪಕ್ಷಗಳ ಎರಡನೇ ಸಭೆಯನ್ನು ಕರ್ನಾಟಕ ಮತ್ತು ಬಿಹಾರದಲ್ಲಿ ವಿಧಾನಸಭಾ ಅಧಿವೇಶನಗಳ ಕಾರಣ ಜುಲೈ 17 ಮತ್ತು 18 ಕ್ಕೆ ಮರು ನಿಗದಿಪಡಿಸಲಾಗಿದೆ. ಇದು ವಿಪಕ್ಷಗಳ ಎರಡನೇ ಸಭೆಯಾಗಿದ್ದು, ಮೊದಲ ಸಭೆ ಜೂನ್ 23 ರಂದು ಬಿಹಾರದ ಪಾಟ್ನಾದಲ್ಲಿ ನಡೆದಿತ್ತು.
ಜುಲೈ 17 ಮತ್ತು 18ಕ್ಕೂ ಮೊದಲು ಬೆಂಗಳೂರಿನಲ್ಲಿ ಜುಲೈ 13, 14ರಂದು ವಿರೋಧ ಪಕ್ಷಗಳ ಸಭೆ ನಿಗದಿಯಾಗಿತ್ತು. ಆರಂಭದಲ್ಲಿ ಇದನ್ನು ಜುಲೈ 12 ರ ಸುಮಾರಿಗೆ ಶಿಮ್ಲಾದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳ ಕಾರಣ ಸಭೆ ಬೆಂಗಳೂರಿನಲ್ಲಿ ನಡೆಯುವುದಾಗಿ ನಿರ್ಧರಿಸಲಾಗಿತು. ಹೊಸ ದಿನಾಂಕ ಮತ್ತು ಸ್ಥಳವನ್ನು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಘೋಷಿಸಿದ್ದಾರೆ.

ಕಳೆದ ಜೂನ್ 23ರಂದು ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ಮೊದಲ ಸಭೆಯಲ್ಲಿ ಭಾಗವಹಿಸಿದ್ದ ಉಚ್ಛಾಟಿತ ಎನ್ಸಿಪಿ ಕಾರ್ಯಾಧ್ಯಕ್ಷ ಪ್ರಫುಲ್ ಪಟೇಲ್ ಅವರು ಅಜಿತ್ ಪವಾರ್ ಅವರೊಂದಿಗೆ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಜೊತೆ ಮೈತ್ರಿ ಮಾಡಿಕೊಂಡು, ನರೇಂದ್ರ ಮೋದಿ ಸರ್ಕಾರವನ್ನು ಮಣಿಸಲು ಯತ್ನಿಸುತ್ತಿರುವ ವಿಪಕ್ಷಗಳ ಏಕತೆಗೆ ಪೆಟ್ಟು ನೀಡಿದ್ದಾರೆ.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Samarth Shamanur: ದಾವಣಗೆರೆ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಫೈಟ್ ಅಂತ್ಯ: ಶಾಮನೂರು ಕುಟುಂಬದ ಕುಡಿ ಸಮರ್ಥ್ ಕಣಕ್ಕೆ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ಕೇರಳ ವಿಧಾನಸಭೆ ಚುನಾವಣೆ: ಸಿಎಂ ಪಿಣರಾಯಿ ವಿಜಯನ್ ನಾಮಪತ್ರ ಸಲ್ಲಿಕೆ, ಒಟ್ಟು ಆಸ್ತಿ ಮೌಲ್ಯ 1,00,00,000 ರೂಪಾಯಿಗೂ ಅಧಿಕ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ











Click it and Unblock the Notifications