Gujarat Rains: ಗುಜರಾತ್ನಲ್ಲಿ ಭಾರೀ ಮಳೆ: ರಸ್ತೆಗಳು ಜಲಾವೃತ, ಕಾರುಗಳು ಮುಳುಗಡೆ!
ಗುಜರಾತ್ನಲ್ಲಿ ಮಂಗಳವಾರ ಭಾರೀ ಮಳೆಯಾಗಿದ್ದು, ಹಲವು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ಧಾರಾಕಾರ ಮಳೆಯಿಂದಾಗಿ ರಾಜ್ಕೋಟ್, ಸೂರತ್ ಮತ್ತು ಗಿರ್ ಸೋಮನಾಥ್ ಜಿಲ್ಲೆಗಳು ಜಲಾವೃತವಾಗಿದ್ದು, ಕಳೆದ ಕೆಲವು ಗಂಟೆಗಳಲ್ಲಿ ರಾಜ್ಯದಲ್ಲಿ 300 ಮಿಮೀ ಮಳೆ ಸುರಿದಿದ್ದು, 70 ಜನರನ್ನು ಸ್ಥಳಾಂತರಿಸಲಾಗಿದೆ.
ಗುಜರಾತ್ನ ಪ್ರವಾಹ ಪರಿಸ್ಥಿತಿ ಯಾವ ಮಟ್ಟದಲ್ಲಿದೆ ಅಂದರೆ ಮಳೆ ನೀರಿನಲ್ಲಿ ಮುಳುಗಿದ ವಾಹನಗಳು ಆಟಿಕೆಯಂತೆ ಕಾಣಿಸುತ್ತಿವೆ. ಸಾಮಾಜಿಕ ಮಾಧ್ಯಮದಲ್ಲಿ ಈ ದೃಶ್ಯಗಳು ವೈರಲ್ ಆಗಿವೆ. ಅನೇಕ ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಪ್ರವಾಹದಿಂದಾಗಿ ಅಂಗಡಿಗಳು ಮುಚ್ಚಲ್ಪಟ್ಟಿವೆ.

ಭಾರತೀಯ ಹವಾಮಾನ ಇಲಾಖೆ (IMD) ಸೌರಾಷ್ಟ್ರದ ಕೆಲವು ಜಿಲ್ಲೆಗಳು ಮತ್ತು ದಕ್ಷಿಣ ಗುಜರಾತ್ ಪ್ರದೇಶಗಳಲ್ಲಿ ಮುಂಬರುವ ದಿನಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯ ಮುನ್ಸೂಚನೆ ನೀಡಿದೆ.
ಸ್ಟೇಟ್ ಎಮರ್ಜೆನ್ಸಿ ಆಪರೇಷನ್ ಸೆಂಟರ್ (ಎಸ್ಇಒಸಿ) ಪ್ರಕಾರ, ಗಿರ್ ಸೋಮನಾಥ ಜಿಲ್ಲೆಯ ಸೂತ್ರಪದ ತಾಲೂಕಿನಲ್ಲಿ ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಕೇವಲ 14 ಗಂಟೆಗಳಲ್ಲಿ 345 ಮಿಮೀ ಮಳೆಯಾಗಿದ್ದು, ರಾಜ್ಕೋಟ್ ಜಿಲ್ಲೆಯ ಧೋರಾಜಿ ತಾಲೂಕಿನಲ್ಲಿ 250 ಮಿಮೀ ಮಳೆಯಾಗಿದೆ.
#WATCH | Gujarat | Severe waterlogging in Dhoraji city of Rajkot district due to incessant rainfall. (18.07)
— ANI (@ANI) July 18, 2023
Around 300 mm of rainfall has been recorded in the last few hours. 70 people have been shifted to safer places. pic.twitter.com/oaf5Z03q5R
ಕೇವಲ ಎರಡು ಗಂಟೆಗಳಲ್ಲಿ 145 ಮಿಮೀ ದಾಖಲಾಗಿದೆ. ಸೂರತ್ನಲ್ಲಿ ಭಾರಿ ಮಳೆಯಾಗಿದ್ದು, ಹಗಲಿನಲ್ಲಿ ಸುಮಾರು 104 ಮಿಮೀ ಮಳೆ ದಾಖಲಾಗಿದೆ. ಜುನಾಗಢ ಜಿಲ್ಲೆಯ ಕೆಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗಿದೆ. ಭಾರೀ ಪ್ರಮಾಣದ ನೀರಿನ ಒಳಹರಿವಿನಿಂದಾಗಿ ಗುಜರಾತ್ನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಜೊತೆಗೆ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಸ್ತುತ ಮಳೆಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳನ್ನು (ಎಸ್ಡಿಆರ್ಎಫ್) ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
-
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications