ರೋಹಿಂಗ್ಯಾ ಮುಸ್ಲಿಮರಿಂದ ಭಾರತದ ಭದ್ರತೆಗೆ ಅಪಾಯ : ರಾಜನಾಥ್ ಸಿಂಗ್
ನವದೆಹಲಿ, ಸೆಪ್ಟೆಂಬರ್ 13: ರೋಹಿಂಗ್ಯಾ ಮುಸ್ಲಿಮರ ಸಮಸ್ಯೆಯನ್ನು ದೃಢ ನಿರ್ಧಾರದಿಂದ ಪರಿಹರಿಸಬೇಕಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಅವರು ರೋಹಿಂಗ್ಯಾ ಜನರು ದೇಶದ ಭದ್ರತೆಗೆ ಅಪಾಯವಾಗಿದ್ದಾರೆ ಎಂದು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಭಾರತದ ಹಲವು ಭಾಗಗಳಲ್ಲಿ ರೋಹಿಂಗ್ಯಾ ಮುಸ್ಲಿಮರು ನೆಲೆ ನಿಂತಿದ್ದಾರೆ. ಇವರನ್ನು ಉಗ್ರ ಸಂಘಟನೆಗಳು ತಮ್ಮ ಸಂಘಟನೆಗೆ ಸೇರಿಸಿಕೊಳ್ಳುವ ಅಪಾಯವಿದೆ ಎಂದು ಕೇಂದ್ರ ಸರ್ಕಾರ ಕಳೆದ ಆಗಸ್ಟ್ ನಲ್ಲಿ ಹೇಳಿತ್ತು. ಮಾತ್ರವಲ್ಲ ರಾಜ್ಯ ಸರಕಾರಗಳು ರೋಹಿಂಗ್ಯಾ ಮುಸ್ಲಿಮರನ್ನು ಪತ್ತೆ ಹಚ್ಚಿ ಗಡಿಪಾರು ಮಾಡುವಂತೆಯೂ ಸೂಚನೆ ನೀಡಿತ್ತು.

ಇದಾದ ಬೆನ್ನಿಗೆ ರೋಹಿಂಗ್ಯಾ ಮುಸ್ಲಿಮರ ಬಗ್ಗೆ ದೇಶದಲ್ಲಿ ದೊಡ್ಡ ಮಟ್ಟದ ಚರ್ಚೆ ಆರಂಭವಾಗಿತ್ತು. ಈ ವಿಚಾರ ಸುಪ್ರಿಂ ಕೋರ್ಟ್ ಮೆಟ್ಟಿಲನ್ನೂ ಹತ್ತಿತ್ತು.
ಕಳೆದ ತಿಂಗಳು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ದೇಶದಲ್ಲಿ 40 ಸಾವಿರ ರೋಹಿಂಗ್ಯಾ ಮುಸ್ಲಿಮರು ನೆಲೆಸಿದ್ದಾರೆ ಎಂದು ಲೋಕಸಭೆಯಲ್ಲಿ ಮಾಹಿತಿ ನೀಡಿದ್ದರು. ಇದರಲ್ಲಿ ಹೆಚ್ಚಿನ ಜನರು ಜಮ್ಮು, ಹೈದರಾಬಾದ್, ಹರ್ಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ದೆಹಲಿಯಲ್ಲಿ ನೆಲಿಸಿದ್ದಾರೆ ಎಂದು ಹೇಳಿದ್ದರು.
ದೇಶದ ಸೀಮಿತ ಸಂಪನ್ಮೂಲಗಳನ್ನು ಈ ಜನರು ಬಳಸಿಕೊಳ್ಳುವುದರಿಂದ ದೇಶದ ಜನರಿಗೆ ಅನ್ಯಾಯವಾಗುತ್ತಿದೆ ಎಂದೂ ಕೇಂದ್ರ ಗೃಹ ಇಲಾಖೆ ಈ ಹಿಂದೆ ಹೇಳಿತ್ತು.
ಮಯನ್ಮಾರ್ ನ ರಖಿನೆ ರಾಜ್ಯದಲ್ಲಿ 1 ಕೋಟಿಗೂ ಹೆಚ್ಚಿರುವ ರೋಗಿಂಗ್ಯಾ ಸಮುದಾಯದವರ ಮೇಲೆ ದಾಳಿಗಳು ನಡೆಯುತ್ತಿದ್ದ, ಈ ಜನರು ವಿಶ್ವದ ಬೇರೆ ಬೇರೆ ಭಾಗಗಳಿಗೆ ವಲಸೆ ಹೋಗಿದ್ದಾರೆ. ಇದೇ ರೀತಿ ಭಾರತಕ್ಕೂ ಬಂದಿದ್ದಾರೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications