ರೋಹ್ಟಕ್ ಸಹೋದರಿಯರ ಪ್ರಕರಣಕ್ಕೆ ಹೊಸ ತಿರುವು
ಛತ್ತೀಸ್ಗಡ, ಡಿ. 4: ಬಸ್ನಲ್ಲಿ ಮೂವರು ಯುವಕರ ಮೇಲೆ ಬೆಲ್ಟ್ನಿಂದ ದಾಳಿ ನಡೆಸಿ ದೇಶಾದ್ಯಂತ ಶೂರರು ಎಂದು ಹೊಗಳಿಸಿಕೊಂಡಿದ್ದ ಸಹೋದರಿಯರ ಪ್ರಕರಣವೀಗ ಹೊಸ ತಿರುವು ಪಡೆದಿದೆ.
ಬಸ್ನಲ್ಲಿದ್ದ ಯುವಕರು ಈ ಸಹೋದರಿಯರಿಗೆ ಲೈಂಗಿಕವಾಗಿ ಕಿರುಕುಳ ನೀಡಿಲ್ಲ. ಯುವಕರ ವಿರುದ್ಧ ಬಂದಿರುವ ಆರೋಪ ಸುಳ್ಳು ಎಂದು ನಾಲ್ವರು ಮಹಿಳೆಯರು ಹೇಳಿಕೆ ನೀಡಿ ರೋಹ್ಟಕ್ ಪೊಲೀಸ್ ಠಾಣೆಯಲ್ಲಿ ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಇದರಿಂದ ಪ್ರಕರಣವೀಗ ಸಂಪೂರ್ಣ ತಿರುವು ಪಡೆದಿದ್ದು, ಸರ್ಕಾರ ಕೂಡ ಸಹೋದರಿಯರಿಗೆ ಘೋಷಿಸಿದ್ದ ಶೌರ್ಯ ಪ್ರಶಸ್ತಿಯನ್ನು ತಡೆ ಹಿಡಿದಿದೆ. [ರೋಹ್ಟಕ್ ಯುವತಿಯರ ಫೈಟ್ ಪೂರ್ವಯೋಜಿತವೇ?]
ಈ ಕುರಿತು ಮಾಹಿತಿ ನೀಡಿರುವ ಮುಖ್ಯಮಂತ್ರಿ ಕಚೇರಿಯ ವಿಶೇಷ ಕರ್ತವ್ಯಾಧಿಕಾರಿ ಜವಾಹರ ಯಾದವ್, "ರಾಜ್ಯ ಸರ್ಕಾರ ಸಹೋದರಿಯರಿಗೆ ಘೋಷಿಸಿದ್ದ ಶೌರ್ಯ ಪ್ರಶಸ್ತಿಯನ್ನು ತಡೆಹಿಡಿಯಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು" ಎಂದು ಸ್ಪಷ್ಟಪಡಿಸಿದ್ದಾರೆ. [ರೋಹ್ಟಕ್ ಸಿಸ್ಟರ್ಸ್ ಗೆ ಸನ್ಮಾನ]

ಪ್ರಕರಣವೇನು?: ಹರ್ಯಾಣದ ರೋಹ್ಟಕ್ ನಗರದ ಬಸ್ ಒಂದರಲ್ಲಿ ಮೂವರು ಯುವಕರ ಮೇಲೆ ಸಹೋದರಿಯರಿಬ್ಬರು ಬೆಲ್ಟ್ನಿಂದ ದಾಳಿ ನಡೆಸಿದ್ದರು. ಸಹೋದರಿಯರ ಪಾಲಕರು ರೋಹ್ಟಕ್ ಠಾಣೆಯಲ್ಲಿ ಲೈಂಗಿಕ ಕಿರುಕುಳದ ದೂರು ದಾಖಲಿಸಿದ ನಂತರ ಹೊಡೆತ ತಿಂದ ಯುವಕರನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿತ್ತು. ನಂತರ ಅವರು ಜಾಮೀನು ಪಡೆದು ಹೊರಬಂದಿದ್ದರು.
ಆದರೆ, ಸಹೋದರಿಯರು ತಾವು ದಾಳಿ ನಡೆಸಿದ ದೃಶ್ಯವನ್ನು ಮೊಬೈಲ್ನಲ್ಲಿ ಚಿತ್ರಿಸಿಕೊಂಡಿದ್ದರು. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಈ ವಿಡಿಯೋ ದೇಶಾದ್ಯಂತ ಮಾಧ್ಯಮಗಳ ಮೂಲಕ ಪ್ರಸಾರವಾಗಿ ಭಾರೀ ಮೆಚ್ಚುಗೆ ಗಳಿಸಿತು. ವಿವಿಧ ಮಹಿಳಾ ಸಂಘಟನೆಗಳು ಹಾಗೂ ಮಹಿಳಾ ಆಯೋಗ ಕೂಡ ಆರೋಪಿ ಯುವಕರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದವು. ಆಗ ಹರ್ಯಾಣ ರಾಜ್ಯ ಸರ್ಕಾರ ಸಹೋದರಿಯರಿಬ್ಬರಿಗೆ ಶೌರ್ಯ ಪ್ರಶಸ್ತಿ ಘೋಷಿಸಿ, ಗಣರಾಜ್ಯೋತ್ಸವದಂದು ಸನ್ಮಾನಿಸುವುದಾಗಿ ತಿಳಿಸಿತ್ತು. [ಬೀದಿ ಕಾಮಣ್ಣನಿಗೆ ಥಳಿಸಿ ಪ್ರಶಸ್ತಿ ಪಡೆದ ಚೈತ್ರಾ]
ಆದರೆ, ಬಸ್ನಲ್ಲಿ ಯುವಕರು ಲೈಂಗಿಕ ಕಿರುಕುಳ ನೀಡಿಲ್ಲ ಎಂದು ಹಲ್ಲೆ ನಡೆಸಿದ ಸಹೋದರಿಯರ ಗ್ರಾಮದವರೇ ಆದ ನಾಲ್ವರು ಮಹಿಳೆಯರು ಪೊಲೀಸ್ ಠಾಣೆಯಲ್ಲಿ ಪ್ರಮಾಣ ಪತ್ರ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ಹೊಸ ತಿರುವು ಪಡೆದಿದೆ. ಯುವಕರ ಜೊತೆಗೆ ಸಹೋದರಿಯರ ವಿರುದ್ಧವೂ ವಿಚಾರಣೆ ನಡೆಸಲು ಪೊಲೀಸರು ನಿರ್ಧರಿಸಿದ್ದು, ಸರ್ಕಾರ ಕೂಡ ಘೋಷಿಸಿದ್ದ ಪ್ರಶಸ್ತಿಯನ್ನು ತಡೆಹಿಡಿದಿದೆ. [ಶಿಕ್ಷಕಿಯಿಂದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ]
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications