‘ಮಹಾಭಾರತ’ದ ‘ದ್ರೌಪದಿ’ ರೂಪಾ ಈಗ ಸಂಸದೆ
ನವದೆಹಲಿ, ಅಕ್ಟೋಬರ್ 05: ಟಿವಿ ಸರಣಿ ಮಹಾಭಾರತ ಧಾರಾವಾಹಿಯಲ್ಲಿ 'ದ್ರೌಪದಿ'ಯ ಪಾತ್ರದ ಮೂಲಕ ಜನಪ್ರಿಯತೆ ಗಳಿಸಿದ್ದ ನಟಿ, ಬಿಜೆಪಿ ನಾಯಕಿ ರೂಪಾ ಗಂಗೂಲಿ ಅವರು ಮಂಗಳವಾರ ರಾಜ್ಯಸಭೆ ಸದಸ್ಯರಾಗಿ ನಾಮಕರಣಗೊಂಡಿದ್ದಾರೆ.
ಪಶ್ಚಿಮ ಬಂಗಾಲದ ಅಸೆಂಬ್ಲಿಗೆ ಪ್ರವೇಶಿಸಲು ಯತ್ನಿಸಿ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಈಗ ಮಾಜಿ ಕ್ರಿಕೆಟರ್ ನವಜ್ಯೋತ್ ಸಿಂಗ್ ಸಿಧು ಅವರಿಂದ ತೆರವಾಗಿರುವ ಸ್ಥಾನಕ್ಕೆ ರೂಪಾ ಆಯ್ಕೆಯಾಗಿದ್ದಾರೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ರೂಪಾ ಅವರ ನಾಮಾಂಕಿತಗೊಳಿಸಿದರು.
1988ರಲ್ಲಿದೂರದರ್ಶನದಲ್ಲಿ ಪ್ರಸಾರವಾದ ಮಹಾಭಾರತ ಧಾರಾವಾಹಿ ಸರಣಿಯಲ್ಲಿ 'ದ್ರೌಪದಿ' ಪಾತ್ರ ವಹಿಸಿದ್ದ ರೂಪಾ ಅವರು ನಂತರ 90ರ ದಶಕದಲ್ಲಿ ಬೆಂಗಾಲಿ, ಹಿಂದಿ ಹಾಗೂ ಕನ್ನಡ ಚಿತ್ರದಲ್ಲೂ ನಟಿಸಿದ್ದರು. ಅವರು ಅತ್ಯಂತ ಜನಪ್ರಿಯ ನಟಿಯಾಗಿದ್ದರು. ರೂಪಾ 2015ರಲ್ಲಿ ಭಾರತೀಯ ಜನತಾ ಪಕ್ಷವನ್ನು ಸೇರಿದ್ದರು.
ಕಳೆದ ಏಪ್ರಿಲ್ ತಿಂಗಳಿನಲ್ಲಿ ಸುಬ್ರಮಣಿಯನ್ ಸ್ವಾಮಿ, ನರೇಂದ್ರ ಜಾಧವ್, ನವಜ್ಯೋತ್ ಸಿಂಗ್ ಸಿಧು, ಸುರೇಶ್ ಗೋಪಿ, ಸ್ವಪನ್ ದಾಸ್ ಗುಪ್ತ ಹಾಗೂ ಮೇರಿ ಕೋಮ್ ರನ್ನು ರಾಜ್ಯಸಭಾ ಸದಸ್ಯರಾಗಿ ನೇಮಿಸಲಾಗಿತ್ತು. ಜುಲೈ ತಿಂಗಳಿನಲ್ಲಿ ಸಿಧು ಅವರು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಪಕ್ಷ ತೊರೆದಿದ್ದರು. ನಂತರ ಅವಾಜ್ ಇ ಪಂಜಾಬ್ ಎಂಬ ಪಕ್ಷಕ್ಕೆ ನಾಂದಿ ಹಾಡಿದರು. (ಪಿಟಿಐ)
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications