ಅಂಚೆ ಇಲಾಖೆ: 399ರೂ.ಗೆ 10 ಲಕ್ಷ ರೂ. ಅಪಘಾತ ವಿಮೆ, ಖಾತೆ ತೆರೆಯಲು ಈ ಮಾಹಿತಿ ತಿಳಿಯಿರಿ
ಬೆಂಗಳೂರು, ಅಕ್ಟೋಬರ್ 14: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು ಅತ್ಯಂತ ಕಡಿಮೆ ಹಣದಲ್ಲಿ ಭಾರಿ ಮೊತ್ತದ ಅಪಘಾತ ವಿಮೆಯನ್ನು ಪರಿಚಯಿಸಿದೆ.
ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠ 18 ರಿಂದ ಗರಿಷ್ಠ 65 ವರ್ಷದ ಒಳಗಿನವರು ಅಂಚೆ ಕಚೇರಿಯಲ್ಲಿ ಖಾತೆ ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ.
ವಿವಿಧ ರೀತಿಯ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ನಿಮ್ಮ ಹತ್ತಿರದ ಅಂಚೆ ಕಚೇರಿಗೆ ತೆರಳಿ ವಾರ್ಷಿಕವಾಗಿ 399 ರೂ. ಹಣ ಕಟ್ಟಿದರೆ ಈ 10ಲಕ್ಷ ರೂ. ಅಪಘಾತ ವಿಮೆಗೆ ಅರ್ಹರಾಗುತ್ತೀರಿ. ಈ ವಿಮೆಯ ಫಲಾನುಭವಿಗಳು ಆಕಸ್ಮಿಕವಾಗಿ ಅಪಘಾತಕ್ಕೆ ತುತ್ತಾದರೆ ಅಥವಾ ಅಂಚೆ ಇಲಾಖೆ ಸೂಚಿಸಿರುವ ಇನ್ನಿತರ ಅವಘಡದ ಸನ್ನಿವೇಶಗಳಿಗೆ ಒಳಗಾದರೆ ಅವರು ವಿವಿಧ ರೂಪದಲ್ಲಿ ಆರ್ಥಿಕ ಸಹಾಯ ಪಡೆಯಬಹುದು.

10ಲಕ್ಷ ಅಪಘಾತ ವಿಮೆ ಮಾಡಿಸುವುದು ಹೇಗೆ?
ಈಗಾಗಲೇ ನೀವು ಅಂಚೆ ಇಲಾಖೆಯಲ್ಲಿ 'ಇಂಡಿಯಾ ಪೋಸ್ಟ್ ಪೇಮೆಂಟ್ ಅಕೌಂಟ್' ಖಾತೆ ಹೊಂದಿದ್ದರೆ ನೀವು ಈ ಅಪಘಾತ ವಿಮೆ ಮಾಡಿಸಲು ಅರ್ಹರಾಗುತ್ತೀರಿ. ಒಂದು ವೇಳೆ ಈ ಖಾತೆ ಹೊಂದಿರದಿದ್ದರೆ ಕೂಡಲೇ 100ರೂ. ಕಟ್ಟಿ ಹತ್ತಿರದ ಅಂಚೆ ಕಚೇರಿಯಲ್ಲಿ ಒಂದೇ ದಿನದಲ್ಲಿ 'ಇಂಡಿಯಾ ಪೋಸ್ಟ್ ಪೇಮೆಂಟ್ ಅಕೌಂಟ್' ಖಾತೆ ತೆರೆಯಬಹುದು.
ಹೊಸದಾಗಿ 'ಇಂಡಿಯಾ ಪೋಸ್ಟ್ ಪೇಮೆಂಟ್ ಅಕೌಂಟ್' ಖಾತೆ ತೆರೆಯುವವರು ಆಧಾರ ಮತ್ತು ಪ್ಯಾನ್ ಸಂಖ್ಯೆ ಸೇರಿದಂತೆ ಅಗತ್ಯ ದಾಖಲಾತಿ ಸಲ್ಲಿಕೆ ಕಡ್ಡಾಯವಾಗಿರುತ್ತದೆ. ನಂತರ ಖಾತೆಯಲ್ಲಿ ಕನಿಷ್ಠ 500 ರೂ.ಹಣ (ಡೆಪಾಸಿಟ್) ಇಡಬೇಕಿದೆ. ಬಳಿಕ ಅದೇ ಖಾತೆ ಮೂಲಕ ನೀವು 399 ರೂ. ಹಣ ಕಟ್ಟಿ 10ಲಕ್ಷ ರೂಪಾಯಿಯ ಅಪಘಾತ ವಿಮೆ ಮಾಡಿಸಬಹುದು. ಈ ಯೋಜನೆಯನ್ನು ಪ್ರತಿ ವರ್ಷ 399 ರೂ. ಪಾವತಿಸುವ ಮೂಲಕ ನವೀಕರಿಸಬೇಕು.

ವಿಮೆಯ ಪ್ರಯೋಜನ ಏನಿದೆ?
ವಿಮಾ ಯೋಜನೆ ಫಲಾನುಭವಿಯು ಆಕಸ್ಮಿಕ ಸಾವನ್ನಪ್ಪಿದರೆ ಅವರು ಕುಟುಂಬಸ್ಥರಿಗೆ ಹತ್ತು ಲಕ್ಷ ರೂ. ನೀಡಲಾಗುತ್ತದೆ. ಅಂದರೆ ಬಸ್, ಕಾರು ಇನ್ನಿತರ ಅಪಘಾತಗಳು, ಹಾವು ಕಡಿತ, ವಿದ್ಯುತ್ ಆಘಾತ, ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಸಾವು ಸೇರಿದಂತೆ ವಿವಿಧ ಆಕಸ್ಮಿಕವಾಗಿ ಸಾವು ಸಂಭವಿಸಿದರೆ ಪರಿಹಾರ ಪಡೆಯಬಹುದು. ಇದರ ಪೂರ್ತಿ ಮಾಹಿತಿ ಈ ಕೆಳಗಿನಂತಿದೆ.
* ಅಪಘಾತದಿಂದ ಮರಣ ಹೊಂದಿದಲ್ಲಿ 10 ಲಕ್ಷ ರೂ. ಆರ್ಥಿಕ ಸಹಾಯ.
* ಶಾಶ್ವತವಾಗಿ ಅಂಗವೈಕಲ್ಯವಾದರೆ 10 ಲಕ್ಷ ರೂ. ಆರ್ಥಿಕ ಸಹಾಯ.
* ಆಸ್ಪತ್ರೆ ವೆಚ್ಚಕ್ಕಾಗಿ 60,000 ರೂ. ಹಣಕ್ಕೆ ಅರ್ಹ.
* ಮೃತರ ಮಕ್ಕಳ ಶಿಕ್ಷಣಕ್ಕಾಗಿ ಪ್ರತಿ ಮಗುವಿಗೆ ರೂ.1 ಲಕ್ಷ ವರೆಗೆ ಸಹಾಯ (ಸಂಪೂರ್ಣ ಶಿಕ್ಷಣಕ್ಕೆ ಗರಿಷ್ಠ 2 ಲಕ್ಷ ರೂ.).
* ಓಪಿಡಿ ವೆಚ್ಚಕ್ಕೆಂದು 30,000 ಸಾವಿರ ರೂ. ಹಣ
* ಅಪಘಾತದಿಂದ ಪಾರ್ಶ್ವವಾಯು ಉಂಟಾದರೆ 10 ಲಕ್ಷ ರೂ. ನೀಡಿಕೆ
* ಕುಟುಂಬದ ಆಸ್ಪತ್ರೆ ಪ್ರಯಾಣ ವೆಚ್ಚಕ್ಕೆ 25,000 ರೂ. ಸಹಾಯ.
ಆಸಕ್ತರು ಇಂಡಿಯಾ ಪೋಸ್ಟ್ ಪೇಮೆಂಟ್ ಅಕೌಂಟ್ ಖಾತೆ ತೆರೆಯಲು, ಈ ವಿಮಾ ಯೋಜನೆಯ ಲಾಭ ಪಡೆದುಕೊಳ್ಳಲು ನಿಮ್ಮ ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಬಹುದು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications