ಪಾನ್ಸರೆ ಹಂತಕರ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ

ಮುಂಬೈ, ಆಗಸ್ಟ್ 3: ಮಹಾರಾಷ್ಟ್ರದ ಸಿಪಿಐ ಮುಖಂಡ, ವಿಚಾರವಾದಿ ಗೋವಿಂದ್ ಪಾನ್ಸರೆ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ಪತ್ತೆಗೆ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಮಹಾರಾಷ್ಟ್ರ ಸರ್ಕಾರ ಬುಧವಾರ ಘೋಷಿಸಿದೆ.

ಗೋವಿಂದ್ ಪನ್ಸಾರೆಯನ್ನು ಸನಾತನ್ ಸಂಸ್ಥಾದ ಕಾರ್ಯಕರ್ತರಾದ ವಿನಯ್ ಪವಾರ್ ಮತ್ತು ಸಾರಂಗ್ ಅಕೋಲ್ಕರ್ ಕೊಲೆಗೈದಿದ್ದಾರೆ ಎನ್ನಲಾಗಿದೆ. ಇವರಿಬ್ಬರಿಗಾಗಿ ಪೊಲೀಸರು ಹುಡುಕಾಟ ನಡೆಸಿ ಯಾವುದೇ ಸುಳಿವು ಸಿಗದ ಹಿನ್ನಲೆಯಲ್ಲಿ ಇದೀಗ ಸುಳಿವು ನೀಡಿದವರಿಗೆ ಸರ್ಕಾರ ಬಹುಮಾನ ಘೋಷಣೆ ಮಾಡಿದೆ.

 RS. 10 Lakh Reward For Information On Govind Pansare's Killers

2015ರ ಫೆಬ್ರುವರಿ 16ರಂದು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಬೆಳಗಿನ ವಿಹಾರಕ್ಕೆ ಗೋವಿಂದ್ ಪನ್ಸಾರೆ ತೆರಳಿದ್ದಾಗ ಅಪರಿಚಿತರ ಗುಂಡಿಗೆ ಬಲಿಯಾಗಿದ್ದರು. ನಂತರ ಪ್ರಕರಣ ದೇಶದಾದ್ಯಂತ ಸದ್ದು ಮಾಡಿತ್ತು. ಕೊನೆಗೆ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು. ಸಿಐಡಿಯ ವಿಶೇಷ ತನಿಖಾ ತಂಡ ಈ ಪ್ರಕರಣದ ತನಿಖೆ ನಡೆಸುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+