ಕೊರೊನಾ ವಿರುದ್ಧ ಹೋರಾಟ; ರಾಜ್ಯಗಳಿಗೆ 15 ಸಾವಿರ ಕೋಟಿ
ನವದೆಹಲಿ, ಮೇ 17 : "ದೇಶದಲ್ಲಿ ಕೊರೊನಾ ಹರಡದಂತೆ ತಡೆಯಲು ಸಾಕಷ್ಟು ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಂಡಿತು. ರಾಜ್ಯಗಳು ಸಹ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು, ಅವುಗಳಿಗೆ ಪ್ರೋತ್ಸಾಹ ನೀಡುವ ಕೆಲಸವೂ ಆಗುತ್ತಿದೆ" ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ ನಿರ್ಮಲಾ ಸೀತಾರಾಮನ್, 20 ಲಕ್ಷ ಕೋಟಿ ಮೊತ್ತದ ಪ್ಯಾಕೇಜ್ನ 5ನೇ ಹಂತದ ವಿವರಗಳನ್ನು ನೀಡಿದರು. "ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅತ್ಯಗತ್ಯ ವಸ್ತುಗಳ ಖರೀದಿಗಾಗಿ ರಾಜ್ಯಗಳಿಗೆ 15,000 ಕೋಟಿ ನೀಡಲಾಗಿದೆ" ಎಂದರು.
"ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಸರ್ಕಾರ ವೆಚ್ಚ ಮಾಡುತ್ತಿದ್ದ ಮೊತ್ತವನ್ನು ಹೆಚ್ಚಳ ಮಾಡಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿಯೂ ಸಾಂಕ್ರಮಿಕ ರೋಗಗಳ ಚಿಕಿತ್ಸಾ ಘಟಕವನ್ನು ಆರಂಭಿಸಲಾಗುತ್ತದೆ. ಎಲ್ಲಾ ವಲಯ (ಬ್ಲಾಕ್) ಮಟ್ಟದಲ್ಲಿ ಪ್ರಯೋಗಾಲಯ ಸ್ಥಾಪನೆಯಾಗಲಿದೆ" ಎಂದು ಸಚಿವರು ತಿಳಿಸಿದರು.

"ಕೋವಿಡ್ -19 ಹರಡುವುದನ್ನು ತಡೆಯಲು ಸರ್ಕಾರ ಹಲವು ಪ್ರಕ ಕೈಗೊಂಡಿತು. ಪ್ರಯೋಗಾಲಯ, ಕಿಟ್, ಟೆಲಿ ಕಮ್ಯುನಿಕೇಶನ್ ಸೇವೆಗಳ ಸುಧಾರಣೆಗೆ ಒತ್ತು ನೀಡಲಾಯಿತು. ದೇಶದಲ್ಲಿ ಪಿಪಿಇ ಕಿಟ್ಗಳು ಸಾಕಷ್ಟು ಉತ್ಪಾದನೆಯಾಗುತ್ತಿದೆ" ಎಂದು ಹಣಕಾಸು ಸಚಿವರು ವಿವರಿಸಿದರು.
"ಕೊರೊನಾ ಲಾಕ್ ಡೌನ್ ಪರಿಣಾಮ ಕೇಂದ್ರದಂತೆ ರಾಜ್ಯಗಳಿಗೂ ಸಂಪನ್ಮೂಲ ಸಂಗ್ರಹಣೆ ಸಮಸ್ಯೆಯಾಗಿದೆ. ವಿವಿಧ ರಾಜ್ಯಗಳ ತೆರಿಗೆ ಪಾಲು 46,038 ಕೋಟಿಯನ್ನು ನೀಡಲಾಗಿದೆ. ವೈದ್ಯಕೀಯ ಸಚಿವಾಲಯ ಹೆಚ್ಚುವರಿಯಾಗಿ 14 ಸಾವಿರ ಕೋಟಿ ಬಿಡುಗಡೆ ಮಾಡಿದೆ" ಎಂದರು.
"ರಾಜ್ಯಗಳಿಗೆ ಹಣಕಾಸು ಪಡೆದುಕೊಳ್ಳಲು ವಿಧಿಸಲಾಗಿದ್ದ ಮಿತಿಯನ್ನು ರಿಸರ್ವ ಬ್ಯಾಂಕ್ ಆಫ್ ಇಂಡಿಯಾ ಶೇ 60ಕ್ಕೆ ಹೆಚ್ಚಿಸಿದೆ. ಜಿಎಸ್ಡಿಪಿ (ರಾಜ್ಯಗಳ ಆರ್ಥಿಕ ವೃದ್ಧಿ ದರ) ಮೊತ್ತದ ಶೇ 5ರಷ್ಟು ಪ್ರಮಾಣದ ಸಾಲ ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ" ಎಂದು ಸಚಿವರು ಹೇಳಿದರು.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ












Click it and Unblock the Notifications