ಗಾಂಧಿ ಜಯಂತಿಯಂದು ಸ್ವಚ್ಛ ಭಾರತ ಅಭಿಯಾನ
ನವದೆಹಲಿ, ಸೆ.25: ಮೇಕ್ ಇನ್ ಇಂಡಿಯಾ ಅಭಿಯಾನಕ್ಕೆ ಚಾಲನೆ ದೊರೆತ ಬೆನ್ನಲ್ಲೇ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಸ್ವಚ್ಛ ಭಾರತ ಅಭಿಯಾನಕ್ಕೆ ಸಜ್ಜಾಗುತ್ತಿದೆ. ಮಹಾತ್ಮ ಗಾಂಧಿ ಅವರ ಹುಟ್ಟುಹಬ್ಬದ ದಿನದಂದು ಈ ಮಹತ್ವದ ಅಭಿಯಾನ ಜಾರಿಗೆ ಬರಲಿದೆ.
ಕರ್ನಾಟಕಕ್ಕೆ ಎರಡು ದಿನದ ಪ್ರವಾಸಕ್ಕೆಂದು ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣಗಳಲ್ಲಿ ದೇಶದ ಸ್ವಚ್ಛತೆ ಕಾಪಾಡುವುದರ ಬಗ್ಗೆ ಹೆಚ್ಚಿನ ಇತ್ತು ನೀಡಿದ್ದರು. ಬೆಂಗಳೂರಿನ ಮೇಯರ್ ಶಾಂತಕುಮಾರಿ ಅವರು ಸ್ವಚ್ಛತಾ ಅಭಿಯಾನವನ್ನು ಮುಂದುವರೆಸುವ ಬಗ್ಗೆ ಭರವಸೆ ನೀಡಿದ್ದರು.
ಯೋಜನಾ ವೆಚ್ಚ ಎಷ್ಟು?: ದೇಶದ ನಗರ ಪ್ರದೇಶಗಳನ್ನು ಕಸಮುಕ್ತಗೊಳಿಸಿ ಸ್ವಚ್ಛ ಭಾರತವನ್ನು ಕಾಣಲು ಈ ಅಭಿಯಾನವನ್ನು ಗಾಂಧಿ ಜಯಂತಿಯಂದು ಚಾಲನೆ ನೀಡಲಾಗುತ್ತಿದೆ. ಐದು ವರ್ಷಗಳ ಅವಧಿಯ ಈ ಯೋಜನೆ 4,041 ನಗರ, ಪಟ್ಟಣಗಳಲ್ಲಿ ಜಾರಿಗೊಳ್ಳಲಿದ್ದು, ಯೋಜನಾ ವೆಚ್ಚ 62,000 ಕೋಟಿ ಆಗಲಿದೆ ಎಂದು ಕಾನೂನು ಮತ್ತು ಟೆಲಿಕಾಂ, ಐಟಿ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.[ಮಂಡ್ಯ ಜಿಲ್ಲೆಯಲ್ಲಿ 1 ಲಕ್ಷ ಶೌಚಾಲಯ ನಿರ್ಮಾಣ]

ಬಯಲು ಶೌಚಾಲಯ ನಿರ್ಮೂಲನೆ, ಕಲುಷಿತ ಶೌಚಾಲಯಗಳನ್ನು ಬಂದ್ ಮಾಡುವುದು, ಮಲ ಹೊರುವ ಪದ್ಧತಿ ನಿರ್ಮೂಲನೆ, ಪಾಲಿಕೆಗಳಲ್ಲಿ ಘನ ತ್ಯಾಜ್ಯ ನಿರ್ವಹಣಾ ಘಟಕ ಕಡ್ಡಾಯ, ಆರೋಗ್ಯ ಮತ್ತು ನೈರ್ಮಲಿಕರಣದ ಬಗ್ಗೆ ಅರಿವು ಮೂಡಿಸುವುದು, ನಗರದ ಸ್ವಚ್ಛತೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂಬುದನ್ನು ಮನದಟ್ಟು ಮಾಡುವುದು ಈ ಯೋಜನೆ ಪ್ರಮುಖ ಉದ್ದೇಶ ಎಂದಿದ್ದಾರೆ.
ಈ ಅಭಿಯಾನಕ್ಕಾಗಿ ಕೇಂದ್ರ ಸರ್ಕಾರ ಸುಮಾರು 14,623 ಕೋಟಿ ಮೀಸಲಿಟ್ಟಿದೆ. 1.04 ಮನೆಗಳು,2.5 ಲಕ್ಷ ಸಮುದಾಯ ಶೌಚಾಲಯ, 2.6 ಲಕ್ಷ ಸಾರ್ವಜನಿಕ ಶೌಚಾಲಯ ಹಾಗೂ ಘನ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆ ಗುರಿ ಹೊಂದಲಾಗಿದೆ.
ಈಗಾಗಲೇ ಜಾರಿಯಲ್ಲಿರುವ ಸ್ವಚ್ಛ ಭಾರತ್ ಮಿಷನ್ ಅಭಿಯಾನದ ಜೊತೆಗೆ ಈ ಯೋಜನೆಗೂ ಕಾರ್ಯನಿರ್ವಹಿಸಲಿದೆ. ಗ್ರಾಮಾಂತರ ಪ್ರದೇಶದ ಸ್ವಚ್ಛತಾ ಕಾಯ್ದುಕೊಳ್ಳಲು ಜಾರಿಯಲ್ಲಿರುವ ನಿರ್ಮಲ್ ಭಾರತ್ ಅಭಿಯಾನವನ್ನು ಹೊಸ ಯೋಜನೆಯೊಂದಿಗೆ ಸೇರ್ಪಡೆಗೊಳಿಸಲಾಗುವುದು ಎಂದಿದ್ದಾರೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications