ಗಾಂಧಿ ಜಯಂತಿಯಂದು ಸ್ವಚ್ಛ ಭಾರತ ಅಭಿಯಾನ
ನವದೆಹಲಿ, ಸೆ.25: ಮೇಕ್ ಇನ್ ಇಂಡಿಯಾ ಅಭಿಯಾನಕ್ಕೆ ಚಾಲನೆ ದೊರೆತ ಬೆನ್ನಲ್ಲೇ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಸ್ವಚ್ಛ ಭಾರತ ಅಭಿಯಾನಕ್ಕೆ ಸಜ್ಜಾಗುತ್ತಿದೆ. ಮಹಾತ್ಮ ಗಾಂಧಿ ಅವರ ಹುಟ್ಟುಹಬ್ಬದ ದಿನದಂದು ಈ ಮಹತ್ವದ ಅಭಿಯಾನ ಜಾರಿಗೆ ಬರಲಿದೆ.
ಕರ್ನಾಟಕಕ್ಕೆ ಎರಡು ದಿನದ ಪ್ರವಾಸಕ್ಕೆಂದು ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣಗಳಲ್ಲಿ ದೇಶದ ಸ್ವಚ್ಛತೆ ಕಾಪಾಡುವುದರ ಬಗ್ಗೆ ಹೆಚ್ಚಿನ ಇತ್ತು ನೀಡಿದ್ದರು. ಬೆಂಗಳೂರಿನ ಮೇಯರ್ ಶಾಂತಕುಮಾರಿ ಅವರು ಸ್ವಚ್ಛತಾ ಅಭಿಯಾನವನ್ನು ಮುಂದುವರೆಸುವ ಬಗ್ಗೆ ಭರವಸೆ ನೀಡಿದ್ದರು.
ಯೋಜನಾ ವೆಚ್ಚ ಎಷ್ಟು?: ದೇಶದ ನಗರ ಪ್ರದೇಶಗಳನ್ನು ಕಸಮುಕ್ತಗೊಳಿಸಿ ಸ್ವಚ್ಛ ಭಾರತವನ್ನು ಕಾಣಲು ಈ ಅಭಿಯಾನವನ್ನು ಗಾಂಧಿ ಜಯಂತಿಯಂದು ಚಾಲನೆ ನೀಡಲಾಗುತ್ತಿದೆ. ಐದು ವರ್ಷಗಳ ಅವಧಿಯ ಈ ಯೋಜನೆ 4,041 ನಗರ, ಪಟ್ಟಣಗಳಲ್ಲಿ ಜಾರಿಗೊಳ್ಳಲಿದ್ದು, ಯೋಜನಾ ವೆಚ್ಚ 62,000 ಕೋಟಿ ಆಗಲಿದೆ ಎಂದು ಕಾನೂನು ಮತ್ತು ಟೆಲಿಕಾಂ, ಐಟಿ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.[ಮಂಡ್ಯ ಜಿಲ್ಲೆಯಲ್ಲಿ 1 ಲಕ್ಷ ಶೌಚಾಲಯ ನಿರ್ಮಾಣ]

ಬಯಲು ಶೌಚಾಲಯ ನಿರ್ಮೂಲನೆ, ಕಲುಷಿತ ಶೌಚಾಲಯಗಳನ್ನು ಬಂದ್ ಮಾಡುವುದು, ಮಲ ಹೊರುವ ಪದ್ಧತಿ ನಿರ್ಮೂಲನೆ, ಪಾಲಿಕೆಗಳಲ್ಲಿ ಘನ ತ್ಯಾಜ್ಯ ನಿರ್ವಹಣಾ ಘಟಕ ಕಡ್ಡಾಯ, ಆರೋಗ್ಯ ಮತ್ತು ನೈರ್ಮಲಿಕರಣದ ಬಗ್ಗೆ ಅರಿವು ಮೂಡಿಸುವುದು, ನಗರದ ಸ್ವಚ್ಛತೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂಬುದನ್ನು ಮನದಟ್ಟು ಮಾಡುವುದು ಈ ಯೋಜನೆ ಪ್ರಮುಖ ಉದ್ದೇಶ ಎಂದಿದ್ದಾರೆ.
ಈ ಅಭಿಯಾನಕ್ಕಾಗಿ ಕೇಂದ್ರ ಸರ್ಕಾರ ಸುಮಾರು 14,623 ಕೋಟಿ ಮೀಸಲಿಟ್ಟಿದೆ. 1.04 ಮನೆಗಳು,2.5 ಲಕ್ಷ ಸಮುದಾಯ ಶೌಚಾಲಯ, 2.6 ಲಕ್ಷ ಸಾರ್ವಜನಿಕ ಶೌಚಾಲಯ ಹಾಗೂ ಘನ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆ ಗುರಿ ಹೊಂದಲಾಗಿದೆ.
ಈಗಾಗಲೇ ಜಾರಿಯಲ್ಲಿರುವ ಸ್ವಚ್ಛ ಭಾರತ್ ಮಿಷನ್ ಅಭಿಯಾನದ ಜೊತೆಗೆ ಈ ಯೋಜನೆಗೂ ಕಾರ್ಯನಿರ್ವಹಿಸಲಿದೆ. ಗ್ರಾಮಾಂತರ ಪ್ರದೇಶದ ಸ್ವಚ್ಛತಾ ಕಾಯ್ದುಕೊಳ್ಳಲು ಜಾರಿಯಲ್ಲಿರುವ ನಿರ್ಮಲ್ ಭಾರತ್ ಅಭಿಯಾನವನ್ನು ಹೊಸ ಯೋಜನೆಯೊಂದಿಗೆ ಸೇರ್ಪಡೆಗೊಳಿಸಲಾಗುವುದು ಎಂದಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications