ಕೇರಳ:ಸಾಹಿತಿ ಮೇಲೆ ಹಲ್ಲೆ, ಆರ್ಎಸ್ಎಸ್ ಕಾರ್ಯಕರ್ತರ ಬಂಧನ
ಕೊಲ್ಲಂ, ಫೆಬ್ರವರಿ 06: ಮಲೆಯಾಳಂ ಸಾಹಿತಿ ಕೆ.ಶ್ರೀಕುಮಾರ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಆರು ಮಂದಿ ಆರ್ಎಸ್ಎಸ್ ಕಾರ್ಯಕರ್ತರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಭಾಷಣ ನೀಡಿ ಕಾರಿನಲ್ಲಿ ವಾಪಾಸಾಗಲು ಅಣಿಯಾಗುತ್ತಿದ್ದ ಸಮಯದಲ್ಲಿ ಸಾಹಿತಿ ಕೆ.ಶ್ರೀಕುಮಾರ್ ಅವರ ಕಾರಿನ ಬಳಿ ಬಂದ ಯುವಕರ ಗುಂಪೊಂದು ಅವರನ್ನು ಅಡ್ಡಗಟ್ಟಿ ಬೆದರಿಕೆ ಒಡ್ಡಿ ಹಲ್ಲೆ ಮಾಡಿತ್ತು.
ಶ್ರೀಕುಮಾರ್ ಅವರು ಭಾಷಣದಲ್ಲಿ ಹಿಂದುತ್ವದ ವಿರುದ್ಧ ಭಾಷಣ ಮಾಡಿದ್ದರು, ಜಾತಿ ಗೋಡೆಯನ್ನು ನಿರ್ಮಿಸಿ ರಾಜಕಾರಣ ಮಾಡುತ್ತಿರುವ ಜಾತೀವಾದಿ ಪಕ್ಷಗಳನ್ನು ಅವರು ಟೀಕಿಸಿದ್ದರು. ಭಾಷಣದಿಂದ ಕೋಪಗೊಂಡ ಆರ್ಎಸ್ಎಸ್ ಯುವಕರು ಶ್ರೀಕುಮಾರ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಒಟ್ಟು 15 ಆರ್ಎಸ್ಎಸ್ ಕಾರ್ಯಕರ್ತರ ಮೇಲೆ ಕೇಸು ದಾಖಲಿಸಲಾಗಿದ್ದು, ಈಗಾಗಲೇ 6 ಜನ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಕೊಲ್ಲಂ ಜಿಲ್ಲೆಯ ಎಸ್ಪಿ ಅಶೋಕ್ ಹೇಳಿದ್ದಾರೆ.
ಶ್ರೀಕುಮಾರ್ ಅವರು ಕೇರಳದ ಪ್ರಮುಖ ಪ್ರಗತಿಪರ ಸಾಹಿತಿಗಳಲ್ಲೊಬ್ಬರಾಗಿದ್ದು, ಅವರ ಮೇಲೆ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಕೇರಳ ಮುಖ್ಯಮಂತ್ರಿಗಳ ಕಚೇರಿಯಿಂದ ಸೂಚನೆ ನೀಡಲಾಗಿತ್ತು.
ಕೇರಳದಲ್ಲಿ ಇತ್ತೀಚಿನ ದಿನಗಳಲ್ಲಿ ಪ್ರಗತಿಪರರ ಮೇಲೆ ಬದರಿಕೆಗಳು ಹೆಚ್ಚಾಗುತ್ತಿದ್ದು, ಎಂ.ಟಿ.ವಾಸುದೇವನೈಯರ್, ಸಿನಿಮಾ ನಿರ್ದೇಶಕ ಕಮಲ್ ಇನ್ನೂ ಮುಂತಾದವರು ಮತೀಯ ಸಂಘಟನೆಗಳಿಂದ ಬೆದರಿಕೆಗಳನ್ನು ಅನುಭವಿಸಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications