ತಮಿಳುನಾಡಿನ 35 ಸ್ಥಳಗಳಲ್ಲಿ ಆರ್ಎಸ್ಎಸ್ನ ಮೆರವಣಿಗೆಗೆ ಅನುಮತಿ; ಮದ್ರಾಸ್ ಹೈಕೋರ್ಟ್ ತೀರ್ಪು
ತಮಿಳುನಾಡಿನ 35 ಸ್ಥಳಗಳಲ್ಲಿ ಆರ್ಎಸ್ಎಸ್ನ ಮೆರವಣಿಗೆಗೆ ಅನುಮತಿಸಿ ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ. ಅಕ್ಟೋಬರ್ 22 ಮತ್ತು 29 ರಂದು ತಮಿಳುನಾಡಿನಲ್ಲಿ ರೂಟ್ ಮಾರ್ಚ್ ಆಯೋಜಿಸಲು ಮದ್ರಾಸ್ ಹೈಕೋರ್ಟ್ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಗೆ ಅನುಮತಿ ನೀಡಿದೆ.
ಆರ್ಎಸ್ಎಸ್ ಸಲ್ಲಿಸಿದ ರಿಟ್ ಅರ್ಜಿಯ ಮೇರೆಗೆ ನ್ಯಾಯಾಲಯವು ಆರ್ಎಸ್ಎಸ್ ಮೆರವಣಿಗೆಗೆ ಸೂಕ್ತ ಭದ್ರತೆಯನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ನ್ಯಾಯಮೂರ್ತಿ ಜಿ. ಜಯಚಂದ್ರ ಅವರು ಕಾರ್ಯಕ್ರಮಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಗಳ ಕುರಿತು ಸೋಮವಾರ ಆದೇಶ ಹೊರಡಿಸಿದ್ದಾರೆ. ಕನಿಷ್ಠ ಮೂರರಿಂದ ಐದು ದಿನ ಮುಂಚಿತವಾಗಿ ಪೊಲೀಸರು ಅನುಮತಿ ನೀಡಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಮೆರವಣಿಗೆಯ ಮಾರ್ಗದಲ್ಲಿ ಯಾವುದೇ ಬದಲಾವಣೆ ಮಾಡಬಾರದು ಎಂದು ಹೇಳಿದ ನ್ಯಾಯಾಧೀಶರು, ಅನುಮತಿ ನೀಡುವ ಬಗ್ಗೆ ಪೊಲೀಸರು ಎತ್ತಿದ್ದ ಎಲ್ಲ ಆಕ್ಷೇಪಣೆಗಳನ್ನು ತಿರಸ್ಕರಿಸಿದರು. ಆದಾಗ್ಯೂ ನ್ಯಾಯಾಧೀಶರು ಸಮಂಜಸವಾದ ನಿರ್ಬಂಧಗಳನ್ನು ವಿಧಿಸಲು ಅವಕಾಶ ನೀಡಿದರು. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಜಿ ಕಾರ್ತಿಕೇಯನ್ ಮತ್ತು ವಕೀಲ ರಾಬು ಮನೋಹರ್ ಅವರ ವಾದವನ್ನು ಆಲಿಸಿದ ಬಳಿಕ ಈ ಆದೇಶ ಹೊರಡಿಸಲಾಗಿದೆ.
ಕಳೆದ ಏಪ್ರಿಲ್ನಲ್ಲಿ ಇದನ್ನು ಡಿಎಂಕೆ ಸರ್ಕಾರವು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿತ್ತು. ರಾಜ್ಯದಲ್ಲಿ ಹಿಂದಿ ಭಾಷಿಕ ಜನರ ಮೇಲೆ ದಾಳಿಗಳು ನಡೆಯುತ್ತಿವೆ ಎಂಬ ವದಂತಿ ಹರಡಿರುವುದರಿಂದ ಅವರಲ್ಲಿ ಆತಂಕ ಉಂಟಾಗಿದೆ ಎಂಬುದನ್ನು ಅದು ಉಲ್ಲೇಖಿಸಿತ್ತು.
ತಮಿಳುನಾಡಿನಲ್ಲಿ ಆರೆಸ್ಸೆಸ್ ಮುಖಂಡರು, ಕಾರ್ಯಕರ್ತರ ಮೇಲೆ ಇತ್ತೀಚಿನ ದಿನಗಳಲ್ಲಿ ನಿರಂತರ ದಾಳಿಗಳು ನಡೆಯುತ್ತಿವೆ. ಸಂಘಟನೆಯ ಕಚೇರಿ, ನಾಯಕರ ಮನೆಗಳ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಅನೇಕ ಘಟನೆಗಳು ವರದಿಯಾಗಿದ್ದವು. ಇವುಗಳ ನಡುವೆ ಆರೆಸ್ಸೆಸ್ ತನ್ನ ಬಲಪ್ರದರ್ಶನಕ್ಕೆ ಮುಂದಾಗಿದೆ. ಹೀಗಾಗಿ ಸೂಕ್ಷ್ಮ ಪ್ರದೇಶದಲ್ಲಿ ಶಾಂತಿಯುತ ಮೆರವಣಿಗೆ ಮಾಡಲು ರಾಜ್ಯ ಸರ್ಕಾರ ತಮ್ಮದೇನು ತಕಾರರು ಇಲ್ಲ ಎಂದು ಹೇಳಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications