ಆರ್ಎಸ್ಎಸ್, ಬಿಜೆಪಿ ಸಿದ್ಧಾಂತ ವಿಷಕಾರಿ; ಮಲ್ಲಿಕಾರ್ಜುನ ಖರ್ಗೆ
ಪುದುಚೇರಿ, ಏಪ್ರಿಲ್ 2: ಆರ್ಎಸ್ಎಸ್ ಹಾಗೂ ಬಿಜೆಪಿ ಸಿದ್ಧಾಂತಗಳು ವಿಷಕಾರಿ. ಅದನ್ನು ಜನರು ತಮಿಳುನಾಡು ಹಾಗೂ ಪುದುಚೇರಿಗೆ ಪ್ರವೇಶಿಸಲು ಅನುಮತಿ ನೀಡಬಾರದು ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಚುನಾಯಿತ ನಾಯಕರದ್ದೇ ಈ ಸ್ಥಿತಿಯಾದರೆ, ರಾಜ್ಯದಲ್ಲಿ ಕಾನೂನಿನ ಕಥೆಯೇನು; ಖರ್ಗೆ
ಪುದುಚೇರಿಗೆ ಭೇಟಿ ನೀಡಿದ್ದ ಸಂದರ್ಭ ಗುರುವಾರ ಜನರನ್ನುದ್ದೇಶಿಸಿ ಮಾತನಾಡಿದ ಅವರು,"ಆರ್ಎಸ್ಎಸ್ ಹಾಗೂ ಬಿಜೆಪಿ ವಿಷವಿದ್ದಂತೆ. ಅದರ ರುಚಿ ನೋಡಿದರೆ ನೀವು ಸಾಯುತ್ತೀರಿ. ಅದು ಹೇಗೋ ಇವು ಕರ್ನಾಟಕಕ್ಕೆ ಸೇರಿವೆ. ಆದರೆ ತಮಿಳುನಾಡು ಹಾಗೂ ಪುದುಚೇರಿಗೆ ಆ ಅವಕಾಶ ಕೊಡಬೇಡಿ. ಇಲ್ಲಿಯೂ ಆ ವಿಷವನ್ನು ಅವರು ಉಗುಳುತ್ತಾರೆ" ಎಂದು ಕಿಡಿಕಾರಿದ್ದಾರೆ.
ಪುದುಚೇರಿಯ 30 ಕ್ಷೇತ್ರಗಳಿಗೆ ಏಪ್ರಿಲ್ 6ರಂದು ಚುನಾವಣೆ ನಡೆಯಲಿದೆ. ತಮಿಳುನಾಡಿನಲ್ಲಿಯೂ 234 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 6ರಂದು ಚುನಾವಣೆ ನಡೆಯಲಿದೆ. ತಮಿಳುನಾಡಿನಲ್ಲಿ ಬಿಜೆಪಿ-ಎಐಎಡಿಎಂಕೆ ಮೈತ್ರಿಯಲ್ಲಿದ್ದರೆ, ಡಿಎಂಕೆ-ಕಾಂಗ್ರೆಸ್ ಮೈತ್ರಿಯಲ್ಲಿವೆ. ಈ ಎರಡರ ನಡುವೆಯೂ ಹಣಾಹಣಿ ಏರ್ಪಟ್ಟಿದೆ.