ಗರ್ಭದಲ್ಲಿರುವ ಶಿಶುವಿಗೂ ಭಗವದ್ಗೀತಾ, ರಾಮಾಯಣ ಬೋಧಿಸುವಂತೆ ಆರ್ಎಸ್ಎಸ್ ಕರೆ
ಸಂವರ್ಧಿನಿ ನ್ಯಾಸ್ ಸ್ತ್ರೀರೋಗತಜ್ಞರು, ಆಯುರ್ವೇದ ವೈದ್ಯರು ಮತ್ತು ಯೋಗ ತರಬೇತುದಾರರೊಂದಿಗೆ ಗರ್ಭಾವಸ್ಥೆಯಲ್ಲಿ ಗೀತಾ ಪಠಣ, ರಾಮಾಯಣ ಮತ್ತು ಯೋಗಾಭ್ಯಾಸವನ್ನು ಗರ್ಭದಲ್ಲಿರುವ ಶಿಶುಗಳಿಗೆ ಸಾಂಸ್ಕೃತಿಕ ಮೌಲ್ಯಗಳನ್ನು ನೀಡಲು ಕಾರ್ಯಕ್ರಮವನ್ನು ಯೋಜಿಸುತ್ತಿದೆ.
ನವದೆಹಲಿ, ಮಾರ್ಚ್ 6: ಆರ್ಎಸ್ಎಸ್ನ ಅಂಗಸಂಸ್ಥೆಯಾದ ಸಂವರ್ಧಿನಿ ನ್ಯಾಸ್, ಗರ್ಭಿಣಿಯರಿಗೆ ಗರ್ಭದಲ್ಲಿರುವ ಮಕ್ಕಳಿಗೆ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಕಲಿಸಲು 'ಗರ್ಭ ಸಂಸ್ಕಾರ' ಎಂಬ ಅಭಿಯಾನವನ್ನು ಪ್ರಾರಂಭಿಸಿದೆ ಎಂದು ಅದರ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಮಾಧುರಿ ಮರಾಠೆ ಸೋಮವಾರ ಹೇಳಿದ್ದಾರೆ.
ಸಂವರ್ಧಿನಿ ನ್ಯಾಸ್ ಸ್ತ್ರೀರೋಗತಜ್ಞರು, ಆಯುರ್ವೇದ ವೈದ್ಯರು ಮತ್ತು ಯೋಗ ತರಬೇತುದಾರರೊಂದಿಗೆ ಗರ್ಭಾವಸ್ಥೆಯಲ್ಲಿ ಗೀತಾ ಪಠಣ, ರಾಮಾಯಣ ಮತ್ತು ಯೋಗಾಭ್ಯಾಸವನ್ನು ಗರ್ಭದಲ್ಲಿರುವ ಶಿಶುಗಳಿಗೆ ಸಾಂಸ್ಕೃತಿಕ ಮೌಲ್ಯಗಳನ್ನು ನೀಡಲು ಕಾರ್ಯಕ್ರಮವನ್ನು ಯೋಜಿಸುತ್ತಿದೆ. ಈ ಕಾರ್ಯಕ್ರಮವು ಗರ್ಭಾವಸ್ಥೆಯಿಂದ ಎರಡು ವರ್ಷದ ಶಿಶುಗಳಿಗೆ ಪ್ರಾರಂಭವಾಗುತ್ತದೆ. ಗೀತಾ ಶ್ಲೋಕಗಳ ಪಠಣ, ರಾಮಾಯಣದ ಚೌಪೈಗಳಿಗೆ ಒತ್ತು ನೀಡಲಾಗುವುದು. ಇದರಿಂದ ಗರ್ಭದಲ್ಲಿರುವ ಮಗು 500 ಪದಗಳನ್ನು ಕಲಿಯಬಹುದು ಎಂದು ಮಾಧುರಿ ಮರಾಠೆ ಹೇಳಿದರು.

ಈ ಅಭಿಯಾನದ ಗುರಿ ಮತ್ತು ಉದ್ದೇಶವು ಮಗು ಗರ್ಭದಲ್ಲಿ ಸಂಸ್ಕಾರ (ಸಂಸ್ಕೃತಿ ಮತ್ತು ಮೌಲ್ಯಗಳು) ಕಲಿಸುವುದು. ಅಲ್ಲದೆ ಮಗುವಿಗೆ ಎರಡು ವರ್ಷ ತುಂಬುವವರೆಗೆ ಈ ಪ್ರಕ್ರಿಯೆಯು ಮುಂದುವರಿಸುವಂತೆ ಎಂದು ಖಚಿತಪಡಿಸಿಕೊಳ್ಳುವುದು. ಬಳಿಕ ಕಾರ್ಯಕ್ರಮವನ್ನು ಅಭಿವೃದ್ಧಿಪಡಿಸುವುದು ಎಂದು ಅವರು ಹೇಳಿದರು.
ಆರ್ಎಸ್ಎಸ್ನ ಮಹಿಳಾ ಅಂಗವಾದ ರಾಷ್ಟ್ರ ಸೇವಿಕಾ ಸಮಿತಿಯ ಸಂವರ್ಧಿನಿ ನ್ಯಾಸ್ ಈ ಅಭಿಯಾನದ ಅಡಿಯಲ್ಲಿ ಕನಿಷ್ಠ 1,000 ಮಹಿಳೆಯರನ್ನು ತಲುಪಲು ಯೋಜಿಸುತ್ತಿದೆ. ಈ ಅಭಿಯಾನದ ಭಾಗವಾಗಿ ಸಂವರ್ಧಿನಿ ನ್ಯಾಸ್ ಭಾನುವಾರ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ಕಾರ್ಯಾಗಾರವನ್ನು ನಡೆಸಿತು. ಇದರಲ್ಲಿ ಏಮ್ಸ್-ದೆಹಲಿ ಸೇರಿದಂತೆ ಹಲವಾರು ಸ್ತ್ರೀರೋಗತಜ್ಞರು ಭಾಗವಹಿಸಿದ್ದರು ಎಂದು ಅವರು ಹೇಳಿದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications