'ಧಾರ್ಮಿಕ ಮತಾಂತರ-ಲವ್ ಜಿಹಾದ್' ಅವಳಿ ಸಮಸ್ಯೆಗಳ ನಿಗ್ರಹಕ್ಕೆ RSS ಮುಖ್ಯಸ್ಥರ ಸೂಚನೆ
ಲಖನೌ, ಸೆಪ್ಟಂಬರ್ 25: ಸಮಾಜದಲ್ಲಿ ಧಾರ್ಮಿಕ ಮತಾಂತರ ಮತ್ತು 'ಲವ್ ಜಿಹಾದ್' ಘಟನೆಗಳ ಹೆಚ್ಚಾಗುತ್ತಿದೆ. ಇವೆರಡು ಅವಳಿ ಸಮಸ್ಯೆಗಳ ಬಗ್ಗೆ ಪರಿಣಾಮಕಾರಿಯಾಗಿ ತಿಳಿಸಿ ಅವುಗಳನ್ನು ನಿಗ್ರಹಿಸಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ ಅವರು ತಮ್ಮ ಸಂಘದ ಪದಾಧಿಕಾರಿಗಳಿಗೆ ಭಾನುವಾರ ಹೇಳಿದರು.
ಲಕ್ನೋದಲ್ಲಿ ಅವಧ್ ಪ್ರದೇಶದದಲ್ಲಿ ನಡೆದ ಸಾಂಸ್ಥಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಮೋಹನ್ ಭಾಗವತ್ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಧಾರ್ಮಿಕ ಮತಾಂತರದ ಬೆದರಿಕೆಯು ಹೆಚ್ಚು ಆಳವಾಗಿ ಬೇರೂರಿದಂತಿದೆ. ಇದೊಂದು ಗಂಭೀರ ಚಿಂತೆಗೆ ಕಾರಣವಾಗಿದೆ. ನಾವು ವಿಶೇಷವಾಗಿ ರಾಷ್ಟ್ರ ವಿರೋಧಿ ಮತ್ತು ಸಮಾಜ ವಿರೋಧಿ ಶಕ್ತಿಗಳು ಸಕ್ರಿಯವಾಗಿರುವ ಪ್ರದೇಶಗಳಲ್ಲಿ ಗಮನಹರಿಸಬೇಕಿದೆ ಎಂದು ಅವರ ಸೂಚಿಸಿದರು.

ದಿನೇ ದಿನೆ ಹೆಚ್ಚಾಗುತ್ತಿರುವ ಧಾರ್ಮಿಕ ಮತಾಂತರದ ವಿಷಯದ ನಿಗ್ರಹವು ಹಲವು ವರ್ಷಗಳಿಂದ ಸಂಘದ ಮಾರ್ಗಸೂಚಿಯಲ್ಲಿದೆ. ದೇಶದ ವಿವಿಧ ಭಾಗಗಳಲ್ಲಿ ಅದರಲ್ಲೂ ಮುಖ್ಯವಾಗಿ ಅಂತಾರಾಷ್ಟ್ರೀಯ ಗಡಿಗೆ ಸಮೀಪವಿರುವ ಪ್ರದೇಶಗಳಲ್ಲಿ ಇಂತಹ ಘಟನೆಗಳು ಆಗಿದ್ದಾಗ್ಗ ಪುನರಾವರ್ತಿಸುತ್ತವೆ. ಈ ಮಧ್ಯೆ ಮೋಹನ್ ಭಾಗವತ್ ಅವರ ಹೊಸ ಪುನರುತ್ಪಾದನೆಯು ಮಾತುಗಳು ಮಹತ್ವ ಪಡೆದಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಸಂಘದ ಕಾರ್ಯ ವಿಸ್ತರಿಸಬೇಕು, ಬಲಪಡಿಸಬೇಕು
ಹಿಂದೂ ಸಮಾಜದ ಕಲ್ಯಾಣಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳು ಏನು ಎಂಬುದರ ಬಗ್ಗೆ ಆರ್ಎಸ್ಎಸ್ ಮುಖ್ಯಸ್ಥರು ತಿಳಿಸಿದ ಮಾರ್ಗೋಪಾಯಗಳೇನು ಎಂಬುದನ್ನು ನೋಡಿದರೆ, ಸಭೆ ನಡೆದ ಅವಧ್ ಪ್ರದೇಶದಲ್ಲಿ ಸಂಘದ ಕಾರ್ಯಗಳನ್ನು ಇನ್ನಷ್ಟು ವಿಸ್ತರಿಸುವ ಜೊತೆಗೆ ಬಲಪಡಿಸಬೇಕು. ಅಲ್ಲದೇ ಮತಾಂತರ, ಲವ್ ಜಿಹಾದ್ ವಿಚಾರಗಳ ಮೇಲೆ ಗಮನ ಕೇಂದ್ರೀಕರಸಬೇಕು ಎಂದರು.
ಸಂಘದ ಪದಾಧಿಕಾರಿಗಳು ತಮ್ಮದೇ ಆದ ಕೆಲಸ ನಿರ್ವಹಣೆ ಜೊತೆಗೆ ರಾಷ್ಟ್ರ ನಿರ್ಮಾಣಕ್ಕೆ ಬದ್ಧರಾಗಿರುವ ವಿವಿಧ ವರ್ಗಗಳ ಜನರನ್ನು ತಲುಪಲು ಭಾಗವತ್ ಅವರು ಆದ್ಯತೆ ನೀಡಿದ್ದಾರೆ ಎಂದು ಆರ್ಎಸ್ಎಸ್ ಪದಾಧಿಕಾರಿಗಳು ತಿಳಿಸಿದರು.

ಸಮಾಜದಲ್ಲಿ ವಿವಿಧ ಸಕಾರಾತ್ಮಕ ಚಟುವಟಿಕೆಗಳಿಗೆ ಉತ್ತೇಜನ ನೀಡಬೇಕು. ಈ ಅವಳಿ ಸಮಸ್ಯೆಗಳ ನಿಗ್ರಹ ವಿರುದ್ಧದ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಿದೆ ಎಂದು RSS ಮುಖ್ಯಸ್ಥರು ಹೇಳಿದರು .
ಯುವ ಪೀಳಿಗೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿಚಾರಗಳು ಹಾಗೂ ಮೌಲ್ಯಗಳನ್ನು ಪಸರಿಸುವಲ್ಲಿ ಸಕ್ರಿಯವಾಗಿ ಕೆಲಸ ಮಾಡಲು ಆರ್ಎಸ್ಎಸ್ ಕಾರ್ಯಕರ್ತರಿಗೆ ಮೋಹನ್ ಭಾಗವತ ಅವರು ಕರೆ ನೀಡಿದರು. ಸಭೆಯಲ್ಲಿ ವಿವಿಧ ಸಾಮಾಜಿಕ ಮತ್ತು ವೃತ್ತಿಪರ ಗುಂಪುಗಳಿಗೆ 'ಶಾಖಾ'ಗಳನ್ನು ಆಯೋಜನೆ ಮಾಡಬೆಕು ಎಂಬುದರ ಕುರಿತು ನೀರ್ಣಯ ಕೈಗೊಳ್ಳಲಾಯಿತು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications