ಬಿಜೆಪಿ ಗೆಲುವು ಮೋದಿ ಅಲೆಯಿಂದಲ್ಲ : ಆರೆಸ್ಸೆಸ್
ನವದೆಹಲಿ, ಆ.11: ಭಾರತದಲ್ಲಿರುವ ಎಲ್ಲಾ ನಿವಾಸಿಗಳು ಹಿಂದೂತ್ವದ ಮೂಲಕ ತಮ್ಮ ಸಾಂಸ್ಕೃತಿಕ ಗುರುತಾಗಿಸಿಕೊಳ್ಳಬೇಕು. ಹಿಂದೂತ್ವ ಎಂದರೆ ಅದೊಂದು ಜೀವನಶೈಲಿ ಅಷ್ಟೇ ಎಂದು ಹೇಳಿಕೆ ನೀಡಿದ್ದ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಈಗ ಮೋದಿ ಹೆಸರು ಹೇಳದೆ ಮೋದಿ ವಿರುದ್ಧವೇ ಹೇಳಿಕೆ ನೀಡಿದ್ದಾರೆ.
ಕೇಂದ್ರದಲ್ಲಿ ಎನ್ಡಿಎ ಸರ್ಕಾರದ ಪ್ರತಿಷ್ಠಾಪನೆಯ ಹಿಂದಿರುವುದು ದೇಶದ ಜನತೆಯ ಗೆಲುವೇ ಹೊರತು ಯಾವೊಬ್ಬ ವ್ಯಕ್ತಿ ಅಥವಾ ಪಕ್ಷದ್ದಲ್ಲ. ಈ ಗೆಲುವು ದೇಶದ ಜನತೆಗೇ ಸಲ್ಲುತ್ತದೆ. ಏಕೆಂದರೆ ಜನ ಬದಲಾವಣೆ ಬಯಸಿದ್ದರು. ಈ ಗೆಲುವು ಯಾವುದೇ ಒಬ್ಬ ನಿರ್ದಿಷ್ಟ ನಾಯಕನಿಗೆ ಸಲ್ಲುವ ಅಗತ್ಯವಿಲ್ಲ. ನರೇಂದ್ರ ಮೋದಿ ಅವರ ಅಲೆ ಎಲ್ಲೆಡೆ ಇತ್ತು ಹೀಗಾಗಿ ಜನ ಬಿಜೆಪಿಗೆ ಮತ ಹಾಕಿದರು ಎಂದರೆ ನಾನು ಒಪ್ಪುವುದಿಲ್ಲ ಎಂದು ಭಾಗ್ವತ್ ಹೇಳಿದ್ದಾರೆ.
2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು ನರೇಂದ್ರ ಮೋದಿ ಅಲೆಯಿಂದಲೇ ಎಂಬ ಹೇಳಿಕೆಗಳಿಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗ್ವತ್ ಈ ರೀತಿ ತಿರುಗೇಟು ನೀಡಿದ್ದಾರೆ.

ಒರಿಸ್ಸಾ ರಾಜಧಾನಿ ಭುವನೇಶ್ವರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಭಾಗ್ವತ್ ಯಾರ ಹೆಸರನ್ನೂ ಹೇಳದೆ, ಚುನಾವಣೆಯಲ್ಲಿ ಗೆದ್ದು, ಅಧಿಕಾರದ ಚುಕ್ಕಾಣಿ ಹಿಡಿದಿರುವುದಕ್ಕೆ ನರೇಂದ್ರ ಮೋದಿ ಅಥವಾ ಬಿಜೆಪಿ ಕಾರಣವೇ ಅಲ್ಲ ಎಂದು ಹೇಳಿದರು.
ಆರ್ಎಸ್ಎಸ್ ಬಿಜೆಪಿಯ ಸೂತ್ರಧಾರ ಎನ್ನುವುದನ್ನು ಮರೆಯುವಂತಿಲ್ಲ. ಈ ಮೊದಲೂ ಬಿಜೆಪಿಯಿತ್ತು. ನಾಯಕರಿದ್ದರು. ಆದರೆ ಜನ ತಮಗೆ ಬೇಕಾದ ಸರ್ಕಾರವನ್ನು ಉಳಿಸಿಕೊಂಡಿದ್ದರು. ಈಗ ಬದಲಾವಣೆ ಬಯಸಿ ಸರ್ಕಾರ ಬದಲಿಸಿದರು. ಹಾಗಾಗಿ ಇದು ಜನರ ಸರ್ಕಾರ, ಜನರ ಗೆಲುವು ಅಷ್ಟೆ.
ಭಾನುವಾರ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ನಾಯಕ ಅಮಿತ್ ಷಾ , ಗೃಹ ಸಚಿವ ರಾಜನಾಥ್ ಸಿಂಗ್ ಅವರು ಪರಸ್ಪರ ಹೊಗಳುತ್ತಾ ಈ ಬಾರಿಯ ಗೆಲುವಿಗೆ ತಾವೇ ಕಾರಣ ಎಂಬಂತೆ ಬಿಂಬಿಸಿದ್ದರು.
ಈ ಗೆಲುವಿಗಾಗಿ ನರೇಂದ್ರ ಮೋದಿ, ಅಮಿತ್ ಷಾ ಮುಂತಾದ ನಾಯಕರು ಒಬ್ಬರ ಬೆನ್ನನ್ನು ಒಬ್ಬರು ತಟ್ಟುವುದು ಬೇಡ ಎಂದು ಭಾಗ್ವತ್ ಬಿಜೆಪಿ ನಾಯಕರಿಗೆ ಬಿಸಿ ಮುಟ್ಟಿಸಿದ್ದಾರೆ.
ದೇಶದ ರಕ್ಷಣೆ ಮತ್ತು ಭದ್ರತೆ ವಿಷಯದಲ್ಲಿ ಆರ್ಎಸ್ಎಸ್ ಯಾವತ್ತು ರಾಜಿ ಮಾಡಿಕೊಳ್ಳುವುದಿಲ್ಲ. ಸಂಘಕ್ಕೆ ಬೆನ್ನೆಲುಬಾಗಿ ನಿಲ್ಲುವವರು ಜನತೆಯೇ (ಮತದಾರರು) ಹೊರತು ಪಕ್ಷವಾಗಲೀ, ಸರ್ಕಾರವಾಗಲಿ ಅಲ್ಲ. ಏಕೆಂದರೆ ಮತದಾರರೇ ಇಲ್ಲಿ ಪ್ರಭುಗಳು. ಮತದಾರನೇ ಒಡೆಯ ಎಂದು ಭಾಗ್ವತ್ ಒತ್ತಿ ಹೇಳಿದರು.
ಹಿಂದೂತ್ವದ ಬಗ್ಗೆ ಭಾಗ್ವತ್ ನೀಡಿರುವ ಹೇಳಿಕೆಯನ್ನು ಕಾಂಗ್ರೆಸ್ ತಿರಸ್ಕರಿಸಿ ಭಾರತ ವಿವಿಧತೆಯಲ್ಲಿ ಏಕತೆಯನ್ನು ಕಾಣುವ ದೇಶ. ವೈವಿಧ್ಯಮಯ ಧರ್ಮ, ಮತ, ಪಂಥಗಳನ್ನು ನಾವು ಇಲ್ಲಿ ಕಾಣಬಹುದು ಎಂದಿದೆ. ಶಿವಸೇನೆ ಮಾತ್ರ ಮೋಹನ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications