ಚುನಾವಣೆ ಬಳಿಕ ರಾಮ ಮಂದಿರ ವಿಚಾರ ಕೆದಕಿದ ಆರೆಸ್ಸೆಸ್
ನವದೆಹಲಿ, ಮೇ 27: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಮರಳಿ ಅಧಿಕಾರಕ್ಕೆ ಬರುತ್ತಿದ್ದಂತೆಯೇ, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ರಾಮ ಮಂದಿರ ವಿಚಾರವನ್ನು ಕೆದಕಿದ್ದಾರೆ.
ರಾಜಸ್ಥಾನದ ಉದಯಪುರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣ ಮಾಡುವುದು ಶತಃಸಿದ್ಧ ಎಂದರು.
ಶ್ರೀರಾಮನ ಕೆಲಸ ನಡೆಯಬೇಕಿದೆ. ಅದು ನಡೆದೇ ನಡೆಯುತ್ತದೆ. ಈ ಕಾರ್ಯವನ್ನು ಮುಗಿಸಲು ಎಲ್ಲರೂ ಜತೆಗೂಡಿ ಬರಬೇಕು ಎಂದು ಹೇಳಿದರು.

ಇದು ನಮ್ಮ ಕೆಲಸ. ಹೀಗಾಗಿ ಇದನ್ನು ನಾವೇ ಮಾಡಬೇಕು. ನಾವು ಕೆಲವರಿಗೆ ಇದರ ಜವಾಬ್ದಾರಿಯನ್ನು ನೀಡಿದ್ದೇವೆ. ಆದರೆ, ಅದರ ಮೇಲೆ ನಾವು ಕಣ್ಣಿಟ್ಟಿರಬೇಕು ಎಂದರು.
ಶತಮಾನಗಳಿಂದ ಈ ದೇಶ ರಾಮನ ಹೆಸರು ಪಠಿಸುತ್ತಿದೆ. ರಾಮನ ಕೆಲಸವನ್ನೂ ಮಾಡಲೇಬೇಕು ಎಂಬಂತಹ ಸಂದರ್ಭದೊಳಗೆ ದೇಶ ಇಂದು ಸಾಗುತ್ತಿದೆ. ಯುವಜನರ ಕೈಗಳಲ್ಲಿ ರಾಮನ ಹೆಸರು ನೋಡಿದಾಗ ನನಗೆ ಸಂತೋಷವಾಗುತ್ತದೆ ಎಂದು ಹೇಳಿದರು.
ಚುನಾವಣೆ ಫಲಿತಾಂಶ ಹೊರಬಂದ ಕೆಲವೇ ದಿನಗಳಲ್ಲಿ ಮೋಹನ್ ಭಾಗವತ್ ಈ ಹೇಳಿಕೆ ನೀಡಿದ್ದಾರೆ. ಅಯೋಧ್ಯಾ ವಿವಾದವು ಇನ್ನೂ ನ್ಯಾಯಾಲಯದಲ್ಲಿ ಬಾಕಿ ಉಳಿದಿದೆ.
ಚುನಾವಣಾ ಪ್ರಚಾರದುದ್ದಕ್ಕೂ ಬಿಜೆಪಿ ನಾಯಕರು ರಾಮ ಮಂದಿರವನ್ನು ರಾಜಕೀಯ ಭಾಷಣಗಳಲ್ಲಿ ಪ್ರಸ್ತಾಪಿಸಿರಲಿಲ್ಲ. ಬಿಜೆಪಿ ಯಾವುದೇ ಚುನಾವಣಾ ಪ್ರಣಾಳಿಕೆ ಮತ್ತು ರಾಜಕೀಯ ಸಮಾವೇಶಗಳಲ್ಲಿ ರಾಮ ಮಂದಿರ ವಿಚಾರವನ್ನು ಪ್ರಸ್ತಾಪಿಸಿದೆ ಇರುವುದು ಇದೇ ಮೊದಲು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications