ವಿಜಯ ದಶಮಿ ಭಾಷಣ: ಮೋದಿಗೆ ಭಾಗವತ್ ಸಲಹೆ
ನಾಗ್ಪುರ, ಅ.22: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ತಮ್ಮ ವಿಜಯ ದಶಮಿ ಭಾಷಣದಲ್ಲಿ ಮೋದಿ ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ. ರೈತರು, ಕಾರ್ಮಿಕರು, ಕಲಾವಿದರು ಹಾಗೂ ಸಹಕಾರಿ ಕ್ಷೇತ್ರದ ಬಗ್ಗೆ ಹೆಚ್ಚಿನ ಗಮನ ಹರಿಸಿ ಎಂದು ಸಲಹೆ ನೀಡಿದ್ದಾರೆ.
ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಮೋಹನ್ ಭಾಗವತ್ ಅವರು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕಾರ್ಯ ವೈಖರಿಯನ್ನು ಶ್ಲಾಘಿಸಿದರು. ಭಾರತದ ನಾಗರೀಕರಿಗೆ ಭರವಸೆ ಮೂಡಿಸಿದ್ದೀರಿ, ಭಾರತ ವಿಶ್ವನಾಯಕನಾಗುವತ್ತ ದಾಪುಗಾಲಿರಿಸಿದೆ. ನಿಮ್ಮ ಯೋಜನೆಗಳು ಜನಪಯೋಗಿಯಾಗಿದೆ ಎಂದಿದ್ದಾರೆ. [ಭಾರತ ಹಿಂದೂಗಳ ರಾಷ್ಟ್ರ: ಭಾಗ್ವತ್ ಹೇಳಿಕೆಗೆ ವಿಎಚ್ ಪಿ ಬೆಂಬಲ]

ಮುದ್ರಾ ಬ್ಯಾಂಕ್, ಜನಧನ್, ಅನಿಲ ಗ್ಯಾಸ್ ಸಬ್ಸಿಡಿ, ಕ್ಲೀನ್ ಇಂಡಿಯಾ, ಸ್ಕಿಲ್ ಇಂಡಿಯಾ, ಡಿಜಿಟಲ್ ಇಂಡಿಯಾ ಯೋಜನೆಗಳು ದೇಶದ ಜನತೆಯಲ್ಲಿ ಧನಾತ್ಮಕ ಭಾವನೆ ಬೆಳೆಸುತ್ತಿದೆ ಎಂದರು.
ಭಾರತ ಕೆಲವು ನೆರೆ ದೇಶಗಳಿಂದ ಅಪಾಯ ಎದುರಿಸುತ್ತಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಎಚ್ಚರಿಕೆಯಿಂದ ಇರಬೇಕಿದೆ ಎಂದು ಪಾಕಿಸ್ತಾನಕ್ಕೆ ಪರೋಕ್ಷ ಎಚ್ಚರಿಕೆ ನೀಡಿದರು.
ಭಾರತೀಯರೆಲ್ಲರೂ ದೇಶಕ್ಕಾಗಿ ಹೋರಾಡಬೇಕು ಎಂದು ಕರೆ ನೀಡಿರುವ ಭಾಗವತ್, ಭಾರತದ 125 ಕೋಟಿ ಜನತೆ ಇಂದು ಹೊಸ ಭರವಸೆಯೊಂದಿಗೆ ಭವಿಷ್ಯದ ನಿರೀಕ್ಷೆಯಲ್ಲಿದ್ದಾರೆ. ಜನತೆಯ ಆಶೋತ್ತರಗಳಂತೆ ನಾವು ಕರ್ತವ್ಯ ನಿರ್ವಹಿಸಬೇಕಾಗಿದೆ.
ಇದಕ್ಕೆ ಸರ್ವರ ಸಹಕಾರ ಅಗತ್ಯವಾಗಿದೆ. ಭಾರತಕ್ಕೆ ನೆರೆಹೊರೆಯ ಕೆಲ ದೇಶಗಳಿಂದ ಗಂಡಾಂತರವಿದೆ. ಭಾರತ ಸರ್ಕಾರ ಅತ್ಯಂತ ಜಾಗರೂಕತೆಯಿಂದ ವ್ಯವಹರಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ
ಆರ್.ಎಸ್.ಎಸ್ ಸಮಾವೇಶದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಪ್ರಮುಖರು ಭಾಗವಹಿಸಿದ್ದಾರೆ. ಮೋಹನ್ ಭಾಗವತ್ ಅವರ ಭಾಷಣದ ಪೂರ್ಣ ಪಾಠ ಇಲ್ಲಿದೆ
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications