RSS ಮುಖ್ಯಸ್ಥರ ಮೇಲೆ ಕಾಂಗ್ರೆಸ್ ನಡೆಸಿದ್ದ ಭಾರೀ ಸಂಚು ಬಹಿರಂಗ!
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘ ಚಾಲಕ ಮೋಹನ್ ಭಾಗವತ್ ಅವರನ್ನು ಉಗ್ರರ ಪಟ್ಟಿಗೆ ಸೇರಿಸಲು ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಇನ್ನಿಲ್ಲದ ಕಸರತ್ತು ನಡೆಸಿದ್ದ ವಿಚಾರವನ್ನು ಟೈಮ್ಸ್ ನೌ ವಾಹಿನಿ ಬಹಿರಂಗಗೊಳಿಸಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘ ಚಾಲಕ ಮೋಹನ್ ಭಾಗವತ್ ಅವರನ್ನು ಉಗ್ರರ ಪಟ್ಟಿಗೆ ಸೇರಿಸಲು ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಇನ್ನಿಲ್ಲದ ಕಸರತ್ತು ನಡೆಸಿದ್ದ ವಿಚಾರ ಬಹಿರಂಗಗೊಂಡಿದೆ.
ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭವಾಗಲು ಎರಡು ದಿನ ಬಾಕಿ ಇರುತ್ತಲೇ, ಹಿಂದಿನ ಯುಪಿಎ ಸರಕಾರ ಮೋಹನ್ ಭಾಗವತ್ ಅವರನ್ನು ವಿಚಾರಣೆಗೆ ಒಳಪಡಿಸಿ, ಬಾಂಬ್ ಸ್ಪೋಟದ ಪ್ರಕರಣದಲ್ಲಿ ಅವರನ್ನು ಸಿಲುಕಿಸಲು ರಾಷ್ಟ್ರೀಯ ತನಿಖಾ ತಂಡದ (NIA) ಮೇಲೆ ಒತ್ತಡ ಹೇರಿತ್ತು ಎನ್ನುವ ವಿಚಾರವನ್ನು ಟೈಮ್ಸ್ ನೌ ವಾಹಿನಿ ಬಹಿರಂಗಪಡಿಸಿದೆ.
ಅಜ್ಮೀರ್ ಮತ್ತು ಮಾಲೆಗಾಂನಲ್ಲಿ ನಡೆದ ಬಾಂಬ್ ಸ್ಪೋಟದ ವಿಚಾರದಲ್ಲಿ, ಮೋಹನ್ ಭಾಗವತ್ ಅವರನ್ನು ಕಸ್ಟಡಿಗೆ ತೆಗೆದುಕೊಂಡು, ವಿಚಾರಣೆ ನಡೆಸುವಂತೆ ತನಿಖಾ ತಂಡದ ಪ್ರಮುಖರಿಗೆ ಯುಪಿಎ ಸರಕಾರ ಭಾರೀ ಒತ್ತಡ ಹೇರಿತ್ತು. ಆದರೆ ಅಧಿಕಾರಿಗಳು ಇದಕ್ಕೆ ಸೊಪ್ಪು ಹಾಕಲಿಲ್ಲ.
ಸುಶೀಲ್ ಕುಮಾರ್ ಶಿಂದೆ ಕೇಂದ್ರ ಗೃಹ ಸಚಿವರಾಗಿದ್ದ ವೇಳೆ ನಡೆದ ಈ ಬಾಂಬ್ ಸ್ಪೋಟದ ಪ್ರಕರಣದ ನಂತರ 'ಹಿಂದೂ ಉಗ್ರರು' ಎನ್ನುವ ಪದವನ್ನು ಯುಪಿಎ ಬಳಸಿತ್ತು. ಫೆಬ್ರವರಿ 2014ರಲ್ಲಿ ಸ್ಪೋಟ ಪ್ರಕರಣದ ಪ್ರಮುಖ ಆರೋಪಿ, ಸ್ವಾಮೀ ಆಸೀಮಾನಂದ, ಭಾಗವತ್ ಘಟನೆಗೆ ಪ್ರಚೋದಕರು ಎಂದು ಹೇಳಿದ್ದರು.
ಮ್ಯಾಗಜೀನ್ ಒಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಅಜ್ಮೀರ್ ಮತ್ತು ಮಾಲೆಗಾಂನಲ್ಲಿ ನಡೆದ ಬಾಂಬ್ ಸ್ಪೋಟಕ್ಕೆ ಪ್ರಚೋದನೆ ನೀಡಿದ್ದು RSS ಮುಖ್ಯಸ್ಥ ಮೋಹನ್ ಭಾಗವತ್ ಎಂದು ಪಂಚಕುಲಾ ಜೈಲಿನಲ್ಲಿರುವ ಸ್ವಾಮೀ ಆಸೀಮಾನಂದ ಹೇಳಿದ್ದರು. ಮುಂದೆ ಓದಿ..

ಹಿಂದೂ ಉಗ್ರರ ಪಟ್ಟಿಗೆ ಸೇರಿಸಲು ಯುಪಿಎ ಸರಕಾರದ ಹುನ್ನಾರ
ಆಸೀಮಾನಂದ ಹೇಳಿಕೆಯನ್ನು ಮುಂದಿಟ್ಟುಕೊಂದು, ಭಾಗವತ್ ಅವರನ್ನು ವಿಚಾರಣೆಗೆ ಕರೆಸಿ, ಹಿಂದೂ ಉಗ್ರರ ಪಟ್ಟಿಗೆ ಸೇರಿಸಲು ಯುಪಿಎ ಸರಕಾರ ಹುನ್ನಾರ ನಡೆಸಿತ್ತು. ಆದರೆ ಪ್ರಭಲ ದಾಖಲೆಯಿಲ್ಲದೆ ಮೋಹನ್ ಭಾಗವತ್ ಅವರನ್ನು ವಿಚಾರಣೆಗೊಳಪಡಿಸಲು ಸಾಧ್ಯವಿಲ್ಲ ಎಂದು ರಾಷ್ಟ್ರೀಯ ತನಿಖಾ ತಂಡದ ಅಧಿಕಾರಿಗಳು ಹೇಳಿದ್ದರು ಎಂದು ವಾಹಿನಿ ವರದಿ ಮಾಡಿದೆ.

ಟೇಪ್ ಅನ್ನು ಫೋರೆನ್ಸಿಕ್ ಮಾಪನಕ್ಕೆ ಕಳುಹಿಸಿದ್ದ ತನಿಖಾ ತಂಡದ ಪ್ರಮುಖ
ತನಿಖಾ ತಂಡದ ಮುಖ್ಯಸ್ಥರಾಗಿದ್ದ ಶರದ್ ಕುಮಾರ್, ಟೇಪಿನ ಆಧಾರದ ಮೇಲೆ ಭಾಗವತ್ ಅವರನ್ನು ವಿಚಾರಣೆಗೊಳಪಡಿಸಲು ಸಾಧ್ಯವಿಲ್ಲ ಎಂದು ಯುಪಿಎ ಸಚಿವರಿಗೆ ಹೇಳಿ, ಸ್ವಾಮೀ ಆಸೀಮಾನಂದ ನೀಡಿದ್ದ ಹೇಳಿಕೆಯ ಟೇಪ್ ಅನ್ನು ಫೋರೆನ್ಸಿಕ್ ಮಾಪನಕ್ಕೆ ಕಳುಹಿಸಿದ್ದರು.

ಅಜ್ಮೀರ್ ಮತ್ತು ಮಾಲೆಗಾಂನ ಬಾಂಬ್ ಸ್ಪೋಟ
ರಾಷ್ಟ್ರೀಯ ತನಿಖಾ ತಂಡ ನಡೆಸುತ್ತಿದ್ದ ಅಜ್ಮೀರ್ ಮತ್ತು ಮಾಲೆಗಾಂನಲ್ಲಿ ನಡೆದ ಬಾಂಬ್ ಸ್ಪೋಟದ ವಿಚಾರಣೆಯಲ್ಲಿ ಅಂದಿನ ಕೇಂದ್ರ ಗೃಹಸಚಿವ ಶಿಂಧೆ ಮತ್ತು ಇತರ ಕೇಂದ್ರ ಸಚಿವರು ನೇರವಾಗಿ ತನಿಖಾ ತಂಡದ ಮೇಲೆ ಒತ್ತಡ ಹೇರಿದ್ದರು ಎಂದು ವಾಹಿನಿ ತನ್ನ ವರದಿಯಲ್ಲಿ ತಿಳಿಸಿದೆ.

ಟೈಮ್ಸ್ ನೌ ಬಹಿರಂಗ ಪಡಿಸಿದ ಸ್ಪೋಟಕ ಸುದ್ದಿ
ಟೈಮ್ಸ್ ನೌ ಬಹಿರಂಗ ಪಡಿಸಿದ ಈ ಸ್ಪೋಟಕ ಸುದ್ದಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ವಾಹಿನಿ ಬಹಿರಂಗಗೊಳಿಸಿರುವ ಈ ಮಾಹಿತಿಯನ್ನ ನಾನು ಒಪ್ಪುತ್ತೇನೆ. ಎಲ್ಲಾ ಮಾಹಿತಿಗಳು ಹೊರಗೆ ಬರಬೇಕು ಎಂದು ಪ್ರಸಾದ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದಾಖಲೆ ಪರಿಶೀಲಿಸುತ್ತೇವೆ
ಸರಕಾರ ವಾಹಿನಿ ಬಹಿರಂಗ ಪಡಿಸಿರುವ ದಾಖಲೆಯ ಬಗ್ಗೆ ಪರಿಶೀಲನೆ ನಡೆಸಲಿದೆ. ಮೋಹನ್ ಭಾಗವತ್ ಮೇಲೆ ಯುಪಿಎ ಸರಕಾರ ನಡೆಸಿದ್ದ ಸಂಚು ಸಾರ್ವಜನಿಕರಿಗೆ ತಿಳಿಯಲೇಬೇಕು - ರವಿಶಂಕರ್ ಪ್ರಸಾದ್.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications