ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರೆಸ್ಸೆಸ್ ಮಾನನಷ್ಟ ಮೊಕದ್ದಮೆ, ಕೋರ್ಟಿಗೆ ಇಂದು ರಾಹುಲ್ ಹಾಜರ್

By Sachhidananda Acharya
|
Google Oneindia Kannada News

Recommended Video

ಮಾನನಷ್ಟ ಮೊಕದ್ದಮೆ ಹಿನ್ನಲೆಯಲ್ಲಿ ಇಂದು ರಾಹುಲ್ ನ್ಯಾಯಾಲಯಕ್ಕೆ | Oneindia kannada

ಮುಂಬೈ, ಜೂನ್ 12: ಮಹಾರಾಷ್ಟ್ರದ ಭಿವಾಂಡಿ ನ್ಯಾಯಾಲಯದ ಮುಂದೆ ಇಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಜರಾಗಲಿದ್ದಾರೆ.

ಆರ್.ಎಸ್.ಎಸ್ ಕಾರ್ಯಕರ್ತ ರಾಜೇಶ್ ಕುಂಟೆ ಎಂಬವರು ಅವರ ವಿರುದ್ಧ ದಾಖಲಿಸಿದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ವಿಚಾರಣೆಗೆ ಹಾಜರಾಗಲಿದ್ದಾರೆ. ಕಳೆದ ತಿಂಗಳೇ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಅವರ ವಕೀಲರು ಖುದ್ದು ಹಾಜರಿಯಿಂದ ವಿನಾಯಿತಿ ಕೋರಿದ್ದರು. ಇದನ್ನು ನ್ಯಾಯಾಲಯ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಅವರು ಇಂದು ವಿಚಾರಣೆಗೆ ಹಾಜರಾಗುತ್ತಿದ್ದಾರೆ.

ಆರ್.ಎಸ್.ಎಸ್ ವಿರುದ್ಧ 'ಸೇವಾದಳ' ಅಸ್ತ್ರ ಪ್ರಯೋಗಿಸಲಿದೆ ಕಾಂಗ್ರೆಸ್ ಆರ್.ಎಸ್.ಎಸ್ ವಿರುದ್ಧ 'ಸೇವಾದಳ' ಅಸ್ತ್ರ ಪ್ರಯೋಗಿಸಲಿದೆ ಕಾಂಗ್ರೆಸ್

ರಾಹುಲ್ ಗಾಂಧಿ ಮಹಾತ್ಮಾ ಗಾಂಧಿ ಹತ್ಯೆ ಹಿಂದೆ ಆರ್.ಎಸ್.ಎಸ್ ಇದೆ ಎನ್ನುವ ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಂಬಂಧ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಲಾಗಿತ್ತು.

 RSS defamation case: Rahul Gandhi to appear in Bhiwandi court today

ಇಂದು ಭಿವಾಂಡಿ ನ್ಯಾಯಾಲಯ ರಾಹುಲ್ ಗಾಂಧಿ ವಿರುದ್ಧ ಆರೋಪಗಳನ್ನು ದಾಖಲು ಮಾಡಿಕೊಳ್ಳುವ ಸಾಧ್ಯತೆ ಇದೆ.

ಭಾರತ ಆರೆಸ್ಸೆಸ್, ಬಿಜೆಪಿ ಕೈಯಲ್ಲಿ ಜೀತದಾಳಾಗಿದೆ: ರಾಹುಲ್ಭಾರತ ಆರೆಸ್ಸೆಸ್, ಬಿಜೆಪಿ ಕೈಯಲ್ಲಿ ಜೀತದಾಳಾಗಿದೆ: ರಾಹುಲ್

ನ್ಯಾಯಾಲಯಕ್ಕೆ ಹಾಜರಾಗಲು ಈಗಾಗಲೇ ರಾಹುಲ್ ಗಾಂಧಿ ಮುಂಬೈಗೆ ಬಂದಿಳಿದಿದ್ದಾರೆ. ಇಂದು ಅವರು ಕೋರ್ಟ್ ಗೆ ಹಾಜರಾಗಲಿದ್ದಾರೆ.

English summary
Congress President Rahul Gandhi arrives at Mumbai Airport. He will appear before a magistrate court in Bhiwandi, Thane in connection with a defamation case filed by Rashtriya Swayamsevak Sangh (RSS).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X