ತಾಜ್ ಮಹಲ್ ನಲ್ಲಿ ನಮಾಜ್ ನಿಷೇಧಿಸುವಂತೆ ಒತ್ತಾಯ
ಆಗ್ರಾ, ಅಕ್ಟೋಬರ್, 27 ಉತ್ತರ ಪ್ರದೇಶ ಪ್ರವಾಸೋದ್ಯಮ ಇಲಾಖೆ ಕೈಪಿಡಿಯಲ್ಲಿ ತಾಜ್ ಮಹಲ್ ನಾಪತ್ತೆಯಾದ ದಿನಗಳಿಂದ ಈ ಸ್ಮಾರಕದ ಬಗ್ಗೆ ಒಂದಿಲ್ಲೊಂದು ಚರ್ಚೆಗಳು ನಡೆಯುತ್ತಿವೆ.
ಯೋಗಿಯ ಸ್ವಚ್ಛತಾ ನಾಟಕಕ್ಕೆ ವೇದಿಕೆಯಾದ ತಾಜ್ ಮಹಲ್
ತಾಜ್ ಮಹಲ್ ನಲ್ಲಿ ಶುಕ್ರವಾರದಂದು ನಡೆಯುವ ನಮಾಜ್ ಮಾಡಲು ಅವಕಾಶ ಕೊಡಬಾರದು ಎಂದು ಅಖಿಲ ಭಾರತೀಯ ಇತಿಹಾಸ ಸಂಕಲನ ಸಮಿತಿ ಆಗ್ರಹಿಸಿದೆ.
ಇಂಡಿಯಾಟುಡೇ ವಾಹಿನಿಯೊಂದಿಗಿನ ಸಂದರ್ಶನದಲ್ಲಿ ಮಾತನಾಡಿದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಡಾ. ಬಾಲಮುಕುಂದ್ ಪಾಂಡೆ, ಅದು ಪಾರಂಪರಿಕ ಸ್ಥಳವಾಗಿ ಉಳಿಯಬೇಕಾದರೆ ಅಲ್ಲಿ ನಮಾಜ್ ನ್ನು ನಿಷೇಧಿಸಬೇಕು.
ತಾಜ್ ಮಹಲ್ ಒಂದು ರಾಷ್ಟ್ರೀಯ ಪಾರಂಪರಿಕ ಸ್ಥಳವಾಗಿದ್ದರೇ, ಅದನ್ನು ಮುಸ್ಲಿಮರು ಧಾರ್ಮಿಕ ಸ್ಥಳವನ್ನಾಗಿರಿಸಿಕೊಂಡಿರುವುದು ಏಕೆ? ಎಂದು ಪ್ರಶ್ನಿಸಿದ್ದಾರೆ.
ಒಂದು ವೇಳೆ, ತಾಜ್ ಮಹಲ್ ನಲ್ಲಿ ನಮಾಜ್ ನಿಷೇಧಿಸಲು ಸಾಧ್ಯವಿಲ್ಲವಾದರೆ ಅಲ್ಲಿ ಹಿಂದೂಗಳಿಗೆ ಶಿವನ ಪ್ರಾರ್ಥನೆ ಮಾಡಲೂ ಅನುವು ಮಾಡಿಕೊಡಬೇಕೆಂದು ಪಾಂಡೆ ಒತ್ತಾಯಿಸಿದರು.
ಪ್ರತಿ ಶುಕ್ರವಾರದಂದು ತಾಜ್ ಮಹಲ್ ನಲ್ಲಿ ನಮಾಜ್ ನಡೆಯುತ್ತದೆ. ಈ ಸಂದರ್ಭದಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶವಿರುವುದಿಲ್ಲ.
ಪಾಂಡೆ ಅವರ ಈ ಹೇಳಿಕೆ ಇದೀಗ ಹಲವು ಚರ್ಚೆಗೆ ಎಡೆಮಾಡಿಕೊಟ್ಟಿದೆ.