ಭಾನುವಾರ ಪುಣೆಯಲ್ಲಿ ಆರ್ಎಸ್ಎಸ್ ಬೃಹತ್ ಸಮಾವೇಶ
ಬೆಂಗಳೂರು, ಜನವರಿ 01 : ರಾಷ್ಟ್ರೀಯ ಸ್ವಯಂ ಸೇವಕ ಸಂಘ ಭಾನುವಾರ ಪುಣೆಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದೆ. ಒಂದೂವರೆ ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಇದರಲ್ಲಿ ಪಾಲ್ಗೊಳ್ಳಲಿದ್ದು, ದಶಕದಲ್ಲೇ ಇದು ಬೃಹತ್ ಸಮಾವೇಶ ಎನಿಸಿಕೊಳ್ಳಲಿದೆ.
ಪುಣೆ ಹೊರವಲಯದ ಹಿಂಜೆವಾಡಿ ಐಟಿ ಪಾರ್ಕ್ನ ಸುಮಾರು 450 ಎಕರೆ ಪ್ರದೇಶದಲ್ಲಿ ಸಮಾವೇಶಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕರ್ನಾಟಕ, ಮಹಾರಾಷ್ಟ್ರದ ಪುಣೆ, ನಾಸಿಕ್, ಅಹ್ಮದ್ ನಗರ, ಸಾಂಗ್ಲಿ, ಸೋಲ್ಲಾಪುರ, ಕೊಲ್ಹಾಪುರ ಮುಂತಾದ ಕಡೆಗಳ ಲಕ್ಷಾಂತರ ಸ್ವಯಂ ಸೇವಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ['ಅಖಂಡ ಭಾರತ' ನಂತರ ರಾಮ್ ಮಾಧವ್ ಹೊಸ ಕನಸೇನು?]

ದಶಕದಲ್ಲೇ ಆರ್ಎಸ್ಎಸ್ ಆಯೋಜಿಸಿರುವ ಬೃಹತ್ ಸಮಾವೇಶವಿದಾಗಲಿದ್ದು, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ದೇಶದ ಸಾಮಾಜಿಕ ಕಾರ್ಯಕರ್ತರು ಮತ್ತು ಸಮಾಜ ಸೇವೆ ನಡೆಸುವ ಸರ್ಕಾರೇತರ ಸಂಘ-ಸಂಸ್ಥೆಗಳನ್ನು ತಲುಪುವ ಉದ್ದೇಶದಿಂದ ಸಮಾವೇಶ ಆಯೋಜಿಸಲಾಗಿದೆ. [ಚೆನ್ನೈ ಸಂಕಷ್ಟದಲ್ಲಿ RSS ತೋರಿದ ಮಾನವೀಯತೆ ಸುದ್ದಿಯಾಗಲೇ ಇಲ್ಲ!]
ಪರಿಸರ ಸ್ನೇಹಿ ಸಮಾವೇಶ : 'ಆರ್ಎಸ್ಎಸ್ ಬಗ್ಗೆ ಸಮಾಜದಲ್ಲಿ ಧನಾತ್ಮಕ ಭಾವನೆಗಳನ್ನು ಮೂಡಿಸುವುದು ಈ ಸಮಾವೇಶದ ಮುಖ್ಯ ಉದ್ದೇಶವಾಗಿದೆ' ಎಂದು ಸಮಾವೇಶದ ಆಯೋಜಕರಾದ ಸಾರಂಗ್ ವಾಳ್ಬೇ ಹೇಳಿದ್ದಾರೆ. 'ಒಂದೂವರೆ ಲಕ್ಷಕ್ಕೂ ಅಧಿಕ ಸ್ವಯಂ ಸೇವಕರು ಸಮಾವೇಶದಲ್ಲಿ ಪಾಲ್ಗೊಂಡರೂ ಇದು ಪರಿಸರ ಸ್ನೇಹಿ ಸಮಾವೇಶವಾಗಲಿದೆ' ಎಂದು ವಾಳ್ವೇ ತಿಳಿಸಿದ್ದಾರೆ.
ಭಾರೀ ಶಬ್ದ ಮಾಡುವ ಧ್ವನಿವರ್ಧಕಗಳನ್ನು ಸಮಾವೇಶದಲ್ಲಿ ಬಳಸುತ್ತಿಲ್ಲ. ಮೈದಾನದ ಕಟ್ಟಕಡೆಯಲ್ಲಿ ಕುಳಿತ ಸ್ವಯಂ ಸೇವಕನಿಗೂ ನಾಯಕರ ಮಾತು ತಲುಪುವಂತೆ ಮಾಡಲು ಮೆಗಾ ಫೋನ್ಗಳನ್ನು ಬಳಕೆ ಮಾಡಲಾಗುತ್ತಿದೆ. ಪರಿಸರ ಸ್ನೇಹಿ ತಟ್ಟೆಗಳಲ್ಲಿ ಆಹಾರವನ್ನು ಸರಬರಾಜು ಮಾಡಲಾಗುತ್ತಿದೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications