ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫಿರೋಜಾಬಾದ್ : ದುಷ್ಕರ್ಮಿಗಳ ಗುಂಡಿಗೆ ಆರೆಸ್ಸೆಸ್ ಕಾರ್ಯಕರ್ತ ಸಾವು

By Mahesh
|
Google Oneindia Kannada News

ಫಿರೋಜಾಬಾದ್(ಉತ್ತರಪ್ರದೇಶ), ಜುಲೈ 4: ಮನೆ ಮುಂದೆ ವಿಹಾರಾರ್ಥವಾಗಿ ಓಡಾಡಿಕೊಂಡಿದ್ದ ಆರೆಸ್ಸೆಸ್ ಕಾರ್ಯಕರ್ತರೊಬ್ಬರನ್ನು ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ನಡೆದಿದೆ.

ಪುದುಚೇರಿಯಲ್ಲಿ ಆರ್ ಎಸ್ ಎಸ್ ಕಾರ್ಯಕರ್ತನ ಬರ್ಬರ ಹತ್ಯೆ ಪುದುಚೇರಿಯಲ್ಲಿ ಆರ್ ಎಸ್ ಎಸ್ ಕಾರ್ಯಕರ್ತನ ಬರ್ಬರ ಹತ್ಯೆ

ಮೃತ ಕಾರ್ಯಕರ್ತರನ್ನು ಸಂದೀಪ್ ಶರ್ಮ ಎಂದು ಗುರುತಿಸಲಾಗಿದೆ. ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ಮಂಗಳವಾರ ರಾತ್ರಿ ವೇಳೆ, ಸಂದೀಪ್ ಶರ್ಮ ಅವರು, ರಾತ್ರಿ ಊಟ ಮುಗಿಸಿಕೊಂಡು, ಮನೆ ಮುಂದೆ ಓಡಾಡುತ್ತಿದ್ದರು. ಈ ವೇಳೆಗೆ ಬೈಕಿನಿಂದ ಬಂದ ಅಪರಿಚಿತ ದುಷ್ಕರ್ಮಿಗಳು ಏಕೇಕಿ ಗುಂಡು ಹಾರಿಸಿದ್ದಾರೆ.

ಗುಂಡಿನ ಸದ್ದು ಕೇಳಿ ಹೊರಕ್ಕೆ ಬಂದ ಮನೆಯವರಿಗೆ, ರಕ್ತದ ಮಡುವಿನಲ್ಲಿ ಮಲಗಿದ್ದ ಸಂದೀಪ್ ಶರ್ಮ ಕಾಣಿಸಿಕೊಂಡಿದ್ದಾರೆ. ತಕ್ಷಣವೇ ಜಿಲ್ಲಾಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲು ಯತ್ನಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ, ತೀರ ರಕ್ತಸ್ರಾವದಿಂದ ಬಳಲಿದ ಶರ್ಮ ಅವರನ್ನು ಉಳಿಸಿಕೊಳ್ಳಲು ಆಗಲಿಲ್ಲ.

RSS Worker Shot Dead by Bike-borne Miscreants in Firozabad

ಈ ಘಟನೆ ಕುರಿತಂತೆ ಪ್ರಕರಣ ದಾಖಲಿಸಿಕೊಂಡಿರುವ ಫಿರೋಜಾಬಾದ್ ಪೊಲೀಸರು, ತನಿಖೆ ಕೈಗೊಂಡಿದ್ದಾರೆ. ದುಷ್ಕರ್ಮಿಗಳ ಸುಳಿವು ಇನ್ನೂ ಸಿಕ್ಕಿಲ್ಲ. ಮರಣೋತ್ತರ ಪರೀಕ್ಷೆ ನಂತರ ಬರುವ ವರದಿ ಆಧಾರಿಸಿ ಮುಂದಿನ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

English summary
RSS worker was on Tuesday shot dead by some unidentified bike-borne miscreants in Firozabad city of Uttar Pradesh, news agency ANI reported. The deceased has been identified as Sandeep Sharma.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X