ಕಾಂಗ್ರೆಸ್ ಅವಧಿಯಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆದಿತ್ತೇ? RTI ಸ್ಪೋಟಕ ಮಾಹಿತಿ
ನವದೆಹಲಿ, ಮೇ 7: ಜಮ್ಮು ಮೂಲದ ಸಾಮಾಜಿಕ ಕಾರ್ಯಕರ್ತರೊಬ್ಬರು ಸಲ್ಲಿಸಿದ್ದ ಆರ್ಟಿಐ ಅರ್ಜಿಯನ್ನು ರಕ್ಷಣಾ ಸಚಿವಾಲಯ (MoD) ವಿಲೇವಾರಿ ಮಾಡಿದೆ. ಈ ಹಿಂದೆ, ಸರ್ಜಿಕಲ್ ಸ್ಟ್ರೈಕ್ ನಡೆದಿತ್ತೇ ಎಂದು ಅರ್ಜಿದಾರರು ಮಾಹಿತಿ ಕೇಳಿದ್ದರು.
ಎನ್ದಿಎ ಅಧಿಕಾರಕ್ಕೆ ಬರುವ ಮೊದಲು ಕೂಡಾ, ಯುಪಿಎ ಸರಕಾರದ ಅವಧಿಯಲ್ಲಿ ಆರು ಬಾರಿ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗಿತ್ತು, ಆದರೆ, ಕಾಂಗ್ರೆಸ್ ಪಕ್ಷ ಅದನ್ನು ಚುನಾವಣಾ ಲಾಭಕ್ಕಾಗಿ ಬಳಸಿಕೊಂಡಿರಲಿಲ್ಲ ಎಂದು ಕಾಂಗ್ರೆಸ್ ಮುಖಂಡರು ಸಾಲುಸಾಲಾಗಿ ಹೇಳಿಕೆಯನ್ನು ನೀಡಿದ್ದರು.
ಯುಪಿಎ ಅವಧಿಯಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆದ ಬಗ್ಗೆ ಪಾಕಿಸ್ತಾನಕ್ಕಾಗಲಿ, ಉಗ್ರರಿಗಾಗಲಿ, ಅಷ್ಟೇ ಯಾಕೆ ಭಾರತೀಯ ಸೇನೆಗೂ ಈ ವಿಚಾರ ತಿಳಿದಿಲ್ಲ ಎಂದು ಪ್ರಧಾನಿ ಮೋದಿಯಾದಿಯಾಗಿ ಬಿಜೆಪಿಯವರು ಲೇವಡಿ ಮಾಡಿದ್ದರು.

ರೋಹಿತ್ ಚೌಧುರಿ ಎನ್ನುವ ಜಮ್ಮು ಮೂಲದ ಕಾರ್ಯಕರ್ತ, 2004 ರಿಂದ 2014ರ ಅವಧಿಯಲ್ಲಿ ಎಷ್ಟು ಬಾರಿ ಸರ್ಜಿಕಲ್ ಸ್ಟ್ರೈಕ್ ನಡೆದಿತ್ತು ಎಂದು ರಕ್ಷಣಾ ಸಚಿವಾಲಯಕ್ಕೆ ಆರ್ಟಿಐ ಸಲ್ಲಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವಾಲಯ, ಇದುವರೆಗೆ 'ಒಂದು' ಸರ್ಜಿಕಲ್ ಸ್ಟ್ರೈಕ್ ನಡೆದ ಬಗ್ಗೆ ಮಾತ್ರ ಮಾಹಿತಿಯಿದೆ ಎಂದು ಹೇಳಿದೆ.
ಉತ್ತರ ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಸೆಪ್ಟಂಬರ್ 29, 2016ರಂದು ನಡೆದ ಸರ್ಜಿಕಲ್ ಸ್ಟ್ರೈಕ್ ಬಿಟ್ಟರೆ, ಬೇರೆ ಯಾವ ಮಾಹಿತಿಯೂ ಇಲ್ಲ ಎಂದು ಅರ್ಜಿದಾರರಿಗೆ ರಕ್ಷಣಾ ಸಚಿವಾಲಯ ಉತ್ತರಿಸಿದೆ.
ಸಚಿವಾಲಯದಿಂದ ಉತ್ತರ ಬಂದ ನಂತರ ಮಾತನಾಡಿದ ಅರ್ಜಿದಾರ ರೋಹಿತ್, ಸರ್ಜಿಕಲ್ ಸ್ಟ್ರೈಕ್ ಯುಪಿಎ ಅವಧಿಯಲ್ಲೂ ನಡೆದಿತ್ತು ಎನ್ನುವ ಮೂಲಕ, ಕಾಂಗ್ರೆಸ್ ಜನರನ್ನು ಮೂರ್ಖರನ್ನಾಗಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications